Featured

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದಸರಾ ಉತ್ಸವಕ್ಕೆ ಸಚಿವ ಸುನಿಲ್‌ ಕುಮಾರ್‌ ಭೇಟಿ : ದೇವಸ್ಥಾನಕ್ಕೆ ಸರಕಾರದಿಂದ 25 ಲಕ್ಷ ರೂ. ಅನುದಾನ ಘೋಷಣೆ – Vishwanews24

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದಸರಾ ಉತ್ಸವಕ್ಕೆ ಸಚಿವ ಸುನಿಲ್‌ ಕುಮಾರ್‌ ಭೇಟಿ : ದೇವಸ್ಥಾನಕ್ಕೆ ಸರಕಾರದಿಂದ 25 ಲಕ್ಷ ರೂ. ಅನುದಾನ ಘೋಷಣೆ

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ನಡೆಯುತ್ತಿರುವ ಉಚ್ಚಿಲ ದಸರಾ ಉತ್ಸವ-2022ಕ್ಕೆ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಇಂಧನ ಸಚಿವ ಸುನಿಲ್‌ ಕುಮಾರ್‌ ಕುಟುಂಬ ಸಹಿತ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮವಾಗಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಲಾಗಿರುವ ಉಚ್ಚಿಲ ದಸರಾ ಉತ್ಸವ-2022ಕ್ಕೆ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 25 ಲಕ್ಷ ರೂ. ಅನುದಾನವನ್ನು ಸಚಿವ ಸುನಿಲ್‌ ಕುಮಾರ್‌ ದೇವಳದಲ್ಲಿ ಘೋಷಣೆ ಮಾಡಿದರು.

ತಳಮಟ್ಟದ ಬಿಜೆಪಿ ಕಾರ್ಯಕರ್ತೆ ಶ್ಯಾಮಲಾ ಕುಂದರ್‍ಗೆ ಈ ಬಾರಿ ಎಂಎಲ್‍ಎ ಟಿಕೆಟ್ ಫಿಕ್ಸ್ ಆಂತರಿಕ ಸಮೀಕ್ಷೆ vishwanews24

ಸಂಘದ ಮನವಿಗೆ ಸ್ಪಂದಿಸಿ 25 ಲಕ್ಷ ರೂ. ಅನುದಾನ ಮಂಜೂರು ಮಾಡಿಸಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್‌ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಮಸ್ತ ಮೊಗವೀರ ಸಮಾಜದ ಪರವಾಗಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಕೃತಜ್ಞತೆಗಳನ್ನು ಸಲ್ಲಿಸಿದರು.

ಲವ್ ಜಿಹಾದ್ ವಿಷ ಬೀಜ ಬಿತ್ತುವುದೇ ಬಾಲಿವುಡ್ ಸಿನಿಮಾಗಳ ಉದ್ದೇಶ.. ದಕ್ಷಿಣ ಭಾರತೀಯರು ಬಾಲಿವುಡ್ ಸಿನಿಮಾಗಳನ್ನು ಬಹಿಷ್ಕರಿಸಿ..

ದೇವಳದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್‌ ಮತ್ತು ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿ, ಅರ್ಚಕರಾದ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯರು ಸಚಿವರನ್ನು ಸನ್ಮಾನಿಸಿ ಗೌರವಿಸಿದರು.

ಸಂಘದ ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್‌, ಪ್ರಧಾನ ಕಾರ್ಯದರ್ಶಿ ಸುಧಾಕರ ಕುಂದರ್‌, ಜತೆ ಕಾರ್ಯದರ್ಶಿ ಮೋಹನ್‌ ಬಿ. ಕರ್ಕೇರ, ಕೋಶಾಧಿಕಾರಿ ಭರತ್‌ ಕುಮಾರ್‌ ಎರ್ಮಾಳ್‌, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಮಹಿಳಾ ಸಂಘದ ಅಧ್ಯಕ್ಷೆ ಅಪ್ಪಿ ಎಸ್‌. ಸಾಲ್ಯಾನ್‌ ಉಪಸ್ಥಿತರಿದ್ದರು.

ಮಂಗಳೂರು : ತುಳುನಾಡಿನ ದೈವಾರಾಧನೆಯ ವೈಶಿಷ್ಟ್ಯತೆ ಬಿಂಬಿಸುವ ಕಾಂತಾರ ಸಿನಿಮಾ.. ತೆರಿಗೆ ವಿನಾಯಿತಿ ಮಾಡುವಂತೆ ಸಿಎಂ ಗೆ ಮಿಥುನ್ ರೈ ಮನವಿ – Vishwanews24

ಶರನ್ನವರಾತ್ರಿ ಮಹೋತ್ಸವದ 7ನೇ ದಿನವಾದ ಭಾನುವಾರ ಸನ್ನಿಧಿಯಲ್ಲಿ ಶ್ರೀ ಶಾರದಾ ಮಾತೆಯ ಪೂಜಾರಂಭಗೊಂಡಿತು. ಉದಯ ಪೂಜೆಯ ಬಳಿಕ ಚಂಡಿಕಾ ಹೋಮ, ನವದುರ್ಗೆಯರಿಗೆ ಏಕಕಾಲದಲ್ಲಿ ಮಹಾ ಮಂಗಳಾರತಿ, ಮಹಾಪೂಜೆ, ಅನ್ನ ಸಂತರ್ಪಣೆ, ಭಜನಾ ಕಾರ್ಯಕ್ರಮ, ಚಂಡಿಕಾ ಕಲ್ಪೋಕ್ತ ಪೂಜೆ, ಸಾವಿರ ಸುಮಂಗಲಿಯರಿಂದ ಸಾಮೂಹಿಕ ಕುಂಕುಮಾರ್ಚನೆ, ನೃತ್ಯ ವೈವಿಧ್ಯ ಕಾರ್ಯಕ್ರಮಗಳು ನಡೆಯಿತು. ಭಾನುವಾರದ ವಿಶೇಷ ದಿನದಂದು ಸನ್ನಿಧಿಗೆ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

6 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago