Featured

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಶರನ್ನವರಾತ್ರಿ ಸಂಭ್ರಮ- ಇಂದಿನಿಂದ ವೈಭವದ ಉಡುಪಿ ಉಚ್ಚಿಲ ದಸರಾ-2024 – vishwanews24

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಶರನ್ನವರಾತ್ರಿ ಸಂಭ್ರಮಇಂದಿನಿಂದ ವೈಭವದ ಉಡುಪಿ ಉಚ್ಚಿಲ ದಸರಾ-2024

ಕಾಪು : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ, ಕರ್ನಾಟಕದ ಕೊಲ್ಲಾಪುರ ಖ್ಯಾತಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅ. 3ರಿಂದ 12ರ ವರೆಗೆ ಜರಗಲಿರುವ ಉಡುಪಿ ಉಚ್ಚಿಲ ದಸರಾ 2024

ಪ್ರತಿದಿನ ಚಂಡಿಕಾ ಹೋಮ, ಅನ್ನಸಂತರ್ಪಣೆ
ಅ. 3ರಿಂದ 12ರ ವರೆಗೆ ಪ್ರತಿದಿನ ಬೆಳಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಭಜನೆ, ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಾವಿರ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಶ್ರೀ ದುರ್ಗಾ ಕಲ್ಲೋಕ್ತ ಪೂಜೆ, ಪ್ರಸಾದ ವಿತರಣೆ, ಆಕರ್ಷಕ ಲೇಸ‌ ಶೋ ಮತ್ತು ವಿವಿಧ ಮನೋರಂಜನ ಕಾರ್ಯಕ್ರಮಗಳು ನಡೆಯಲಿವೆ.

ಅ.12ರಂದು ಶೋಭಾಯಾತ್ರೆ
ಅ. 12ರಂದು ಸಂಜೆ ಉಚ್ಚಿಲ – ಎರ್ಮಾಳು – ಉಚ್ಚಿಲ – ಮೂಳೂರು – ಕಾಪುವಿ ವರೆಗೆ ವೈಭವದ ಶೋಭಾಯಾತ್ರೆ ನಡೆದು ಕಾಪು ಲೈಟ್ ಹೌಸ್‌ ಬಳಿಯ ಕಡಲ ಕಿನಾರೆಯಲ್ಲಿ ಸುಮಂಗಲೆಯರಿಂದ ಮಹಾಮಂಗಳಾರತಿ, ಬೃಹತ್ ಗಂಗಾರತಿ, ಲೇಸರ್ ಶೋ, ಮ್ಯೂಸಿಕಲ್ ನೈಟ್ ಸಹಿತವಾಗಿ ರಾತ್ರಿ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹ ಜಲಸ್ತಂಭನ ನಡೆಯಲಿದೆ.

ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದೊಂದಿಗೆ ನಡೆಯುವ 3ನೇ ವರ್ಷದ ಉಚ್ಚಿಲ ದಸರಾ ಪ್ರಯುಕ್ತ

ಅ.3ರಂದು ಸಂಜೆ ನೃತ್ಯ ಸ್ಪರ್ಧೆ,

ಅ. 5ರಂದು ಬೆಳಗ್ಗೆ ಮಕ್ಕಳಿಗಾಗಿ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ, ಮಧ್ಯಾಹ್ನ ಚಿತ್ರಕಲಾ ಸ್ಪರ್ಧೆ, ಸಂಜೆ ಸಾಮೂಹಿಕ ಕುಣಿತ ಭಜನೆ, ಶ್ರೀ ರಾಮ ಹನುಮಂತ ನೃತ್ಯ ರೂಪಕ,

ಅ. 6ರಂದುಬೆಳಗ್ಗೆ ಕುಸ್ತಿ ಸ್ಪರ್ಧೆ, ಮಧ್ಯಾಹ್ನಹೆಣ್ಮಕ್ಕಳ ಹುಲಿಕುಣಿತಸ್ಪರ್ಧೆ, ಸಂಜೆ ಸಾಮೂಹಿಕ ದಾಂಡಿಯಾ ನೃತ್ಯ, ವಿಸ್ಮಯ ಜಾದೂ,

ಅ. 7ರಂದು ಮಧ್ಯಾಹ್ನ ಮಹಿಳೆಯರಿಗೆ ಮತ್ತು ಪುರುಷರಿಗೆ ರಂಗೋಲಿ ಸ್ಪರ್ಧೆ, ಶತವೀಣಾವಲ್ಲರಿ,

ಅ. 10ರಂದು ದೇಹದಾರ್ಡ್ಯ ಸ್ಪರ್ಧೆ,

ಅ. 11ರಂದು ಅಜಯ್ ವಾರಿಯರ್ ಮತ್ತು ತಂಡದಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

9 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

9 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

9 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

9 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

9 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

10 hours ago