Featured

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಶರನ್ನವರಾತ್ರಿ ಸಂಭ್ರಮ- ಇಂದಿನಿಂದ ವೈಭವದ ಉಡುಪಿ ಉಚ್ಚಿಲ ದಸರಾ-2024 – vishwanews24

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಶರನ್ನವರಾತ್ರಿ ಸಂಭ್ರಮಇಂದಿನಿಂದ ವೈಭವದ ಉಡುಪಿ ಉಚ್ಚಿಲ ದಸರಾ-2024

ಕಾಪು : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ, ಕರ್ನಾಟಕದ ಕೊಲ್ಲಾಪುರ ಖ್ಯಾತಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅ. 3ರಿಂದ 12ರ ವರೆಗೆ ಜರಗಲಿರುವ ಉಡುಪಿ ಉಚ್ಚಿಲ ದಸರಾ 2024

ಪ್ರತಿದಿನ ಚಂಡಿಕಾ ಹೋಮ, ಅನ್ನಸಂತರ್ಪಣೆ
ಅ. 3ರಿಂದ 12ರ ವರೆಗೆ ಪ್ರತಿದಿನ ಬೆಳಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಭಜನೆ, ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಾವಿರ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಶ್ರೀ ದುರ್ಗಾ ಕಲ್ಲೋಕ್ತ ಪೂಜೆ, ಪ್ರಸಾದ ವಿತರಣೆ, ಆಕರ್ಷಕ ಲೇಸ‌ ಶೋ ಮತ್ತು ವಿವಿಧ ಮನೋರಂಜನ ಕಾರ್ಯಕ್ರಮಗಳು ನಡೆಯಲಿವೆ.

ಅ.12ರಂದು ಶೋಭಾಯಾತ್ರೆ
ಅ. 12ರಂದು ಸಂಜೆ ಉಚ್ಚಿಲ – ಎರ್ಮಾಳು – ಉಚ್ಚಿಲ – ಮೂಳೂರು – ಕಾಪುವಿ ವರೆಗೆ ವೈಭವದ ಶೋಭಾಯಾತ್ರೆ ನಡೆದು ಕಾಪು ಲೈಟ್ ಹೌಸ್‌ ಬಳಿಯ ಕಡಲ ಕಿನಾರೆಯಲ್ಲಿ ಸುಮಂಗಲೆಯರಿಂದ ಮಹಾಮಂಗಳಾರತಿ, ಬೃಹತ್ ಗಂಗಾರತಿ, ಲೇಸರ್ ಶೋ, ಮ್ಯೂಸಿಕಲ್ ನೈಟ್ ಸಹಿತವಾಗಿ ರಾತ್ರಿ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹ ಜಲಸ್ತಂಭನ ನಡೆಯಲಿದೆ.

ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದೊಂದಿಗೆ ನಡೆಯುವ 3ನೇ ವರ್ಷದ ಉಚ್ಚಿಲ ದಸರಾ ಪ್ರಯುಕ್ತ

ಅ.3ರಂದು ಸಂಜೆ ನೃತ್ಯ ಸ್ಪರ್ಧೆ,

ಅ. 5ರಂದು ಬೆಳಗ್ಗೆ ಮಕ್ಕಳಿಗಾಗಿ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ, ಮಧ್ಯಾಹ್ನ ಚಿತ್ರಕಲಾ ಸ್ಪರ್ಧೆ, ಸಂಜೆ ಸಾಮೂಹಿಕ ಕುಣಿತ ಭಜನೆ, ಶ್ರೀ ರಾಮ ಹನುಮಂತ ನೃತ್ಯ ರೂಪಕ,

ಅ. 6ರಂದುಬೆಳಗ್ಗೆ ಕುಸ್ತಿ ಸ್ಪರ್ಧೆ, ಮಧ್ಯಾಹ್ನಹೆಣ್ಮಕ್ಕಳ ಹುಲಿಕುಣಿತಸ್ಪರ್ಧೆ, ಸಂಜೆ ಸಾಮೂಹಿಕ ದಾಂಡಿಯಾ ನೃತ್ಯ, ವಿಸ್ಮಯ ಜಾದೂ,

ಅ. 7ರಂದು ಮಧ್ಯಾಹ್ನ ಮಹಿಳೆಯರಿಗೆ ಮತ್ತು ಪುರುಷರಿಗೆ ರಂಗೋಲಿ ಸ್ಪರ್ಧೆ, ಶತವೀಣಾವಲ್ಲರಿ,

ಅ. 10ರಂದು ದೇಹದಾರ್ಡ್ಯ ಸ್ಪರ್ಧೆ,

ಅ. 11ರಂದು ಅಜಯ್ ವಾರಿಯರ್ ಮತ್ತು ತಂಡದಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

8 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

8 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

8 hours ago