ಉಚ್ಚಿಲ: ಮೊಗವೀರ ಮಹಾಜನ ಸಂಘದ ವತಿಯಿಂದ ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಮಂಕಾಳ ಎಸ್ ವೈದ್ಯರಿಗೆ ಶುಕ್ರವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭ ಜರುಗಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವ ಮಂಕಾಳ ಎಸ್ ವೈದ್ಯ, ಜಿ ಶಂಕರ್ ಅವರ ದಾನ ಧರ್ಮದಿಂದ ಸಮಾಜದ ಆಶೀರ್ವಾದ ಅವರ ಮೇಲಿದೆ. ಹೆಜಮಾಡಿ ಬಂದರು ಕಾಮಗಾರಿಗೆ ಬಾಕಿ ಅನುದಾನ ಬಿಡುಗಡೆ ಮಾಡಿ ಸಂಪೂರ್ಣ ಮಾಡಲು ಸರಕಾರ ಬದ್ಧವಾಗಿದೆ. ಪಕ್ಷ ಬೇಧ ಮರೆತು ಕರಾವಳಿಯ ಅಭಿವೃದ್ಧಿಗೆ ಶ್ರಮವಹಿಸೋಣ ಎಂದರು.
ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರನ್ನು ಅಭಿನಂದಿಸಲಾಯಿತು. ಈ ಸಂದರ್ಭ ಮಾತನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮೀನುಗಾರರಿಗೆ ಸರಿಯಾದ ಸವಲತ್ತು ಸರಕಾರದಿಂದ ಲಭಿಸಲು ಸಚಿವರು ಶ್ರಮಿಸಬೇಕು.
ಮೀನುಗಾರಿಕಾ ಸಮುದಾಯದವರಾದ ಸಚಿವರಿಗೆ ಮೀನುಗಾರರ ಸಮಸ್ಯೆಗಳ ಬಗ್ಗೆ ತಿಳಿಸಿ ಹೇಳಬೇಕಾಗಿಲ್ಲ. ಅತಿ ಹೆಚ್ಚು ಮೀನುಗಾರರಿರುವ ಜಿಲ್ಲೆ ಉಡುಪಿ. ಮೀನುಗಾರರ ಶ್ರೇಯೋಭಿವೃದ್ಧಿಗೆ ಸರಕಾರ ಸಹಕರಿಸಬೇಕು. ಕರಾವಳಿಯ ೩ ಜಿಲ್ಲೆಯ ಮೀನುಗಾರರಿಗೆ ಸಿಗುವ ಎಲ್ಲಾ ಸೌಲಭ್ಯಗಳ ಮಾಹಿತಿ ಸಿಗುವಂತಾಗಬೇಕು. ಡ್ರೆಜ್ಜಿಂಗ್, ಸೀ ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಡಾ ಜಿ. ಶಂಕರ್ ವಹಿಸಿದ್ದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಆನಂದ ಸಿ. ಕುಂದರ್, ಪ್ರಸಾದ್ ರಾಜ್ ಕಾಂಚನ್, ಉಚ್ಚಿಲ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಾಡಳಿ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
ಜಯ ಸಿ. ಕೋಟ್ಯಾನ್ ಸ್ವಾಗತಿಸಿದರು. ಸತೀಶ್ ಅಮೀನ್ ಪಡುಕೆರೆ ಕಾರ್ಯಕ್ರಮ ನಿರೂಪಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…