ಬೆಳ್ತಂಗಡಿ: ಉಜಿರೆ ಸಮೀಪದ ಪೆರ್ಲದಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾದ ಘಟನೆ ನಡೆದಿದೆ.
ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದ ಕುರುಹು ಇದ್ದ ಪಕ್ಕದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗವೊಂದು ಡಿ.16 ರಂದು ಪತ್ತೆಯಾಗಿದೆ.
ಡಿ.8 ಮತ್ತು 9 ಹಾಗೂ 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿ ಶ್ರೀಧರ ಗೋರೆಯವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿತ್ತು. ಈ ವೇಳೆ ಪರಿಸರದಲ್ಲಿ ಶಿವನ ಸಾನಿಧ್ಯವಿದೆಯೆಂದು ಗೋಚರಿಸುತ್ತದೆ ಎಂದು ತಿಳಿಸಿದ್ದರು ಅಂತೆಯೇ ಅವರು ತಿಳಿಸಿದ ಜಾಗದಲ್ಲಿ ಅಗೆದಾಗ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ.
ಸುಮಾರು 2 ರಿಂದ 3 ಅಡಿ ಉದ್ದದ ಶಿವಲಿಂಗದ ಪಾಣಿಪೀಠ ಇರುವ ಶಿವಲಿಂಗವಾಗಿದೆ.ಸುಮಾರು 400 ರಿಂದ 500 ವರ್ಷಗಳಷ್ಟು ಹಳೆಯದಾಗಿದೆ ಎಂದು ತಿಳಿದುಬಂದಿದ್ದು ಶಿವಲಿಂಗ ಪ್ರತಿಷ್ಟೆಯಾಗಬೇಕು ಎಂದು ಕಂಡುಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…