Featured

ಉಜಿರೆ : ಮಗು ಅಪಹರಣ ಪ್ರಕರಣ : ನಾಲ್ವರು ಆರೋಪಿಗಳು ಪೋಲೀಸ್ ವಶಕ್ಕೆ -Vishwanews24

ಉಜಿರೆ : ಮಗು ಅಪಹರಣ ಪ್ರಕರಣ : ನಾಲ್ವರು ಆರೋಪಿಗಳು ಪೋಲೀಸ್ ವಶಕ್ಕೆ -Vishwanews24

ಬೆಳ್ತಂಗಡಿ: ಉಜಿರೆಯಲ್ಲಿ ಮನೆಮುಂದೆ ಆಟವಾಡುತ್ತಿದ್ದ ಮಗುವಿನ ಅಪಹರಣ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದ್ದು, ಪೊಲೀಸರು ಮಗುವನ್ನು ಸುರಕ್ಷಿತವಾಗಿ ರಕ್ಷಿಸಿ, ನಾಲ್ವರನ್ನು ಬಂಧಿಸಿದ್ದಾರೆ.

ಮಗುವನ್ನು ಕೋಲಾರದಲ್ಲಿ ಪತ್ತೆ ಹಚ್ಚಿ ನಾಲ್ವರು ಅಪಹರಣಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಗುರುವಾರದಂದು ಉಜಿರೆಯ ರಥಬೀದಿ ಅಶ್ವತ್ಥ ಕಟ್ಟೆ ಸಮೀಪದ ಮನೆ ಮುಂದೆ ಆಟವಾಡುತ್ತಿದ್ದಅನುಭವ್ (8) ಮಗುವೊಂದನ್ನು ಅಪಹರಣ ನಡೆಸಿದ ದುಷ್ಕರ್ಮಿಗಳು 17 ಕೋ.ರೂ. ಗೆ ಬೇಡಿಕೆಯಿಟ್ಟಿದ್ದು, ಈ ಪ್ರಕರಣ ಸಾಕಷ್ಟು ಆತಂಕ ಸೃಷ್ಟಿಸಿತ್ತು.

ಇನ್ನು ಕೋಲಾರದ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ವಿಶೇಷ ತಂಡ ಪೊಲೀಸರು ಶನಿವಾರ ಬೆಳಗ್ಗೆ 5 ಗಂಟೆಗೆ ಪತ್ತೆ ಹಚ್ಚಿ, ತಕ್ಷಣ ಅಪಹರಣಕಾರರನ್ನು ಕೋಲಾರ ಪೊಲೀಸ್ ಠಾಣೆಗೆ ಕರೆತರಲಾಯಿತು.

ಇಂದು ಅಪರಾಹ್ನ ಕೋಲಾರ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿ, ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆತರಲಾಗುತ್ತದೆ ಎನ್ನಲಾಗಿದ್ದು, ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ಬಂದಕುಮಾರ್, ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ನೇತೃತ್ವದ ವಿಶೇಷ ತಂಡ ಹಾಜರು ಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago