ಬೆಳ್ತಂಗಡಿ: ಗುರುವಾರದಂದು ಉಜಿರೆಯ ರಥಬೀದಿ ಅಶ್ವತ್ಥ ಕಟ್ಟೆ ಸಮೀಪದ ಮನೆ ಮುಂದೆ ಆಟವಾಡುತ್ತಿದ್ದ 8 ವರ್ಷದ ಮಗುವೊಂದನ್ನು ಅಪಹರಣ ನಡೆಸಿದ ದುಷ್ಕರ್ಮಿಗಳು 17 ಕೋ.ರೂ. ಗೆ ಬೇಡಿಕೆಯಿಟ್ಟಿದ್ದಾರೆ.
ಉಜಿರೆ ಉದ್ಯಮಿ ರಥಬೀದಿ ನಿವಾಸಿ ಎ.ಕೆ.ಶಿವನ್ ಎಂಬುವರ ಮೊಮ್ಮಗ ಅನುಭವ್ (8) ಮನೆ ಎದುರುಗಡೆ ಆಟವಾಡುತ್ತಿದ್ದ ವೇಳೆ ಅಪರಿಚಿತರು ಕಾರಿನಲ್ಲಿ ಅಪಹರಣ ಮಾಡಿದ್ದು, ಮನೆ ಮಂದಿ ಕಾರಿನ ಬಳಿ ಬಂದಂತೆ ಪರಾರಿಯಾಗಿದ್ದಾರೆ.
ಇನ್ನು ಮಗುವಿನ ತಾಯಿಗೆ ಕರೆ ಮಾಡಿ 100 ಬಿಟ್ ಕಾಯಿನ್ ಅಂದರೆ 17 ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದಾರೆಂದು ತಿಳಿದು ಬಂದಿದೆ.
ಕುಟುಂಬದ ವ್ಯವಹಾರಗಳ ತಿಳುವಳಿಕೆ ಇರುವ ವ್ಯಕ್ತಿಗಳೇ ಕೃತ್ಯ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಪೊಲೀಸರು ಮೊಬೈಲ್ ನೆಟ್ ವರ್ಕ್ ಮೂಲಕ ಆರೋಪಿಗಳ ಪತ್ತೆಗೆ ಕ್ರಮಕೈಗೊಂಡಿದ್ದಾರೆ.
ಬಂಟ್ವಾಳ ಡಿವೈಎಸ್ ಪಿ ವೆಲೆಂಟೈನ್ ಡಿಸೋಜ ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ನಂದಕುಮಾರ್, ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…