ಮಧ್ಯಪ್ರದೇಶ : ಭಸ್ಮ ಆರತಿ ವೇಳೆ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಭೀಕರ ದುರಂತ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 13 ಪುರೋಹಿತರಿಗೆ ಸುಟ್ಟ ಗಾಯಗಳಾಗಿವೆ. ಹೋಳಿ ಆರತಿ ವೇಳೆ ಗುಲಾಲ್ ಊದಿದಾಗ ಬೆಂಕಿ ವ್ಯಾಪಿಸಿ ಈ ದುರಂತ ನಡೆದಿದೆ ಎಂದು ತಿಳಿದುಬಂದಿದೆ. ಹಲವಾರು ಅರ್ಚಕರು ಮತ್ತು ಭಕ್ತರಿಗೆ ಸುಟ್ಟ ಗಾಯಗಳಾಗಿದ್ದು, ಉಜ್ಜಯಿನಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯಲ್ಲಿ ಮುಖ್ಯ ಅರ್ಚಕ ಸಂಜಯ್ ಗುರು, ವಿಕಾಸ್ ಪೂಜಾರಿ, ಮನೋಜ್ ಪೂಜಾರಿ, ಅಂಶ್ ಪುರೋಹಿತ್, ಸೇವಕ ಮಹೇಶ್ ಶರ್ಮಾ, ಚಿಂತಾಮನ್ ಗೆಹ್ಲೋಟ್ ಮತ್ತಿತರರು ಗಾಯಗೊಂಡಿದ್ದಾರೆ. ಒಂಬತ್ತು ಜನರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಅವರನ್ನು ಇಂದೋರ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಹೋಳಿ ಆಚರಣೆಯ ಅಂಗವಾಗಿ ಗರ್ಭಗುಡಿಯೊಳಗೆ ‘ಗುಲಾಲ್’ (ಆಚರಣೆಗಳು ಮತ್ತು ಹೋಳಿ ಸಮಯದಲ್ಲಿ ಬಳಸುವ ಬಣ್ಣದ ಪುಡಿ)ಎಸೆಯಲಾಗುತ್ತಿತ್ತು. ಯಾರೋ ಬಣ್ಣದ ಗುಲಾಲನ್ನು ಮಣ್ಣಿನ ದೀಪದ ಮೇಲೆ ಎಸೆದರು. ಈ ವೇಳೆ ಗುಲಾಲ್ನೊಳಗಿನ ರಾಸಾಯನಿಕಗಳು ಬೆಂಕಿಗೆ ತಗುಲಿ ಒಮ್ಮಿಂದೊಮ್ಮೆಲೆ ಬೆಂಕಿ ಹೆಚ್ಚಾಗಿ ಈ ಘಟನೆ ನಡೆದಿರಬಹುದು ಎಂದು ಊಹಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…