ಮಧ್ಯಪ್ರದೇಶ : ಭಸ್ಮ ಆರತಿ ವೇಳೆ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಭೀಕರ ದುರಂತ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 13 ಪುರೋಹಿತರಿಗೆ ಸುಟ್ಟ ಗಾಯಗಳಾಗಿವೆ. ಹೋಳಿ ಆರತಿ ವೇಳೆ ಗುಲಾಲ್ ಊದಿದಾಗ ಬೆಂಕಿ ವ್ಯಾಪಿಸಿ ಈ ದುರಂತ ನಡೆದಿದೆ ಎಂದು ತಿಳಿದುಬಂದಿದೆ. ಹಲವಾರು ಅರ್ಚಕರು ಮತ್ತು ಭಕ್ತರಿಗೆ ಸುಟ್ಟ ಗಾಯಗಳಾಗಿದ್ದು, ಉಜ್ಜಯಿನಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯಲ್ಲಿ ಮುಖ್ಯ ಅರ್ಚಕ ಸಂಜಯ್ ಗುರು, ವಿಕಾಸ್ ಪೂಜಾರಿ, ಮನೋಜ್ ಪೂಜಾರಿ, ಅಂಶ್ ಪುರೋಹಿತ್, ಸೇವಕ ಮಹೇಶ್ ಶರ್ಮಾ, ಚಿಂತಾಮನ್ ಗೆಹ್ಲೋಟ್ ಮತ್ತಿತರರು ಗಾಯಗೊಂಡಿದ್ದಾರೆ. ಒಂಬತ್ತು ಜನರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಅವರನ್ನು ಇಂದೋರ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಹೋಳಿ ಆಚರಣೆಯ ಅಂಗವಾಗಿ ಗರ್ಭಗುಡಿಯೊಳಗೆ ‘ಗುಲಾಲ್’ (ಆಚರಣೆಗಳು ಮತ್ತು ಹೋಳಿ ಸಮಯದಲ್ಲಿ ಬಳಸುವ ಬಣ್ಣದ ಪುಡಿ)ಎಸೆಯಲಾಗುತ್ತಿತ್ತು. ಯಾರೋ ಬಣ್ಣದ ಗುಲಾಲನ್ನು ಮಣ್ಣಿನ ದೀಪದ ಮೇಲೆ ಎಸೆದರು. ಈ ವೇಳೆ ಗುಲಾಲ್ನೊಳಗಿನ ರಾಸಾಯನಿಕಗಳು ಬೆಂಕಿಗೆ ತಗುಲಿ ಒಮ್ಮಿಂದೊಮ್ಮೆಲೆ ಬೆಂಕಿ ಹೆಚ್ಚಾಗಿ ಈ ಘಟನೆ ನಡೆದಿರಬಹುದು ಎಂದು ಊಹಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…