Featured

ಉಜ್ವಲ ಯೋಜನೆಯ ಫಲಾನುಭವಿಗಳ ವಾರ್ಷಿಕ ಸಿಲಿಂಡರ್‌ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ – vishwanews24

ಉಜ್ವಲ ಯೋಜನೆಯ ಫಲಾನುಭವಿಗಳ ವಾರ್ಷಿಕ ಸಿಲಿಂಡರ್‌ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ವಾರ್ಷಿಕ ಸಬ್ಸಿಡಿ ಸಿಲಿಂಡರ್‌ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಕಡಿತಗೊಳಿಸಿದೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಎಲ್‌ಪಿಜಿ ಕೊರತೆಯಿಂದಾಗಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

2016 ರಲ್ಲಿ ಯೋಜನೆ ಆರಂಭವಾದಾಗ ವರ್ಷಕ್ಕೆ 12 ಸಿಲಿಂಡರ್ ನೀಡಲಾಗುತ್ತಿತ್ತು. ಕಳೆದ ವರ್ಷ ಇದನ್ನು 9 ಕ್ಕೆ ಇಳಿಸಲಾಗಿತ್ತು. ಈಗ ಅದನ್ನು ಮತ್ತೆ 4 ಕ್ಕೆ ಕಡಿಮೆ ಮಾಡಲಾಗಿದೆ. 14.2 ಕೆಜಿ ಸಿಲಿಂಡರ್‌ಗೆ ಸಿಗುವ 300 ರೂ. ಸಬ್ಸಿಡಿ ಮುಂದುವರಿಯಲಿದೆ. ಈ ಹಣ ನೇರವಾಗಿ ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ.

ಇದನ್ನೂ ಓದಿ:

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 942 ರೂ.ಗೆ ಏರಿಕೆಯಾಗಿದೆ. ಹೀಗಾಗಿ 300 ರೂ. ಸಬ್ಸಿಡಿ ಕಡಿತದ ನಂತರ ಉಜ್ವಲ ಗ್ರಾಹಕರು ಪ್ರತಿ ಸಿಲಿಂಡರ್‌ಗೆ 642 ರೂ. ಪಾವತಿಸಬೇಕಾಗುತ್ತದೆ.

ಉಜ್ವಲ ಯೋಜನೆಯಡಿ ಬರುವ ಬಡ ಕುಟುಂಬಗಳು ವರ್ಷಕ್ಕೆ ಸರಾಸರಿ 4 ಸಿಲಿಂಡರ್‌ಗಳಿಗಿಂತ ಹೆಚ್ಚು ಬಳಸುತ್ತಿಲ್ಲ ಎಂದು ಸರ್ಕಾರದ ಸಮೀಕ್ಷೆ ಹೇಳಿದೆ. ಹಾಗಾಗಿ ಸಬ್ಸಿಡಿಯನ್ನು ನಿಜವಾದ ಬಳಕೆಗೆ ತಕ್ಕಂತೆ ಹೊಂದಿಸಲಾಗಿದೆ.

ಒಂದು ಗ್ಯಾಸ್ ಸಿಲಿಂಡರ್ ಪೂರೈಸಲು ಸರ್ಕಾರಕ್ಕೆ ಒಟ್ಟು 1,600 ರೂ. ಕ್ಕಿಂತ ಹೆಚ್ಚು ವೆಚ್ಚವಾಗುತ್ತಿದೆ. ಸರ್ಕಾರ ಇದನ್ನು ಸಾಮಾನ್ಯ ಜನರಿಗೆ 942 ರೂ.ಗೆ ಮಾರಾಟ ಮಾಡುತ್ತಿದೆ. ಇದರಿಂದಾಗಿ ಸರ್ಕಾರಿ ತೈಲ ಕಂಪನಿಗಳು ಪ್ರತಿ ಸಿಲಿಂಡರ್ ಮೇಲೆ ಸುಮಾರು 700 ರೂ. ನಷ್ಟ ಅನುಭವಿಸುತ್ತಿವೆ.

ಇದನ್ನೂ ಓದಿ:

ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ಸಿಲಿಂಡರ್ ಮಾರಾಟದಲ್ಲಿ ದೊಡ್ಡ ನಷ್ಟ ಅನುಭವಿಸುತ್ತಿರುವುದರಿಂದ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

4 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

5 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

5 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

6 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

7 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

7 hours ago