ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ `ಪ್ರಧಾನಮಂತ್ರಿ ಉಜ್ವಲ’ ಯೋಜನೆ ಮಹಿಳೆಯರ ಪಾಲಿಗೆ ನಿಜಕ್ಕೂ ವರದಾನವಾಗಿದೆ. ಹೊಗೆ ಗೂಡುಗಳಲ್ಲಿ ಬೇಯುತ್ತಿದ್ದ ಗ್ರಾಮೀಣ ಮಹಿಳೆಯರಿಗೆ ಮುಕ್ತಿ ಸಿಗುವ ರೀತಿ ಮಾಡಿದ್ದು ಮೋದಿ ಸರಕಾರ.. ಇದೀಗ ಪ್ರಧಾನಿ ನರೇಂದ್ರ ಮೋದೀಜಿಯವರ ಉಜ್ವಲ ಯೋಜನೆಯನ್ನು ಇಡೀ ದೇಶವೇ ಹಾಡಿಹೊಗಳುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರು ಬಡವರ ಏಳಿಗೆಗಾಗಿ ಈಗಾಗಲೇ ಹತ್ತು ಹಲವಾರು ಯೋಜನೆಗಳನ್ನು ಹೊರತಂದಿದ್ದು, ಬಡ ಕುಟುಂಬದ ಮಹಿಳೆಯರಿಗಾಗಿ ಉಪಯುಕ್ತವಾಗಲಿ ಎಂದು `ಪ್ರಧಾನಮಂತ್ರಿ ಉಜ್ವಲ ಯೋಜನೆ’ಯನ್ನು ಜಾರಿ ಮಾಡುವುದರ ಮೂಲಕ ಕೋಟ್ಯಾಂತರ ಜನರಿಗೆ ಉಪಯೋಗಕಾರಿಯಾಗಿದ್ದಾರೆ.. ಈ ಯೋಜನೆಯಡಿ ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಉಚಿತವಾಗಿ ಎಲ್.ಪಿ.ಜಿ ಸೌಲಭ್ಯ ಕಲ್ಪಿಸಲಾಗಿದ್ದು ಇದೀಗ ಮೋದೀಜೀ ಆಡಳಿತದ ನಾಲ್ಕು ವರ್ಷದಲ್ಲಿ ಅದೆಷ್ಟೋ ಕೋಟಿ ಹೊಸ ಗ್ರಾಹಕರಿಗೆ ಎಲ್ಪಿಜಿ ಸೌಲಭ್ಯ ದೊರಕಿಸಿಕೊಡುವ ಮೂಲಕ ಹೊಸ ಇತಿಹಾಸವನ್ನೇ ಸೃಷ್ಟಿಸಿದ್ದಾರೆ.
5 ಕೋಟಿ ಎಲ್.ಪಿ.ಜಿ ವಿತರಣೆ! ಅವಧಿಗೂ ಮುನ್ನವೇ ಟಾರ್ಗೆಟ್ ತಲುಪಿದ ಕೇಂದ್ರ..
5 ಕೋಟಿ ಮನೆಗಳಿಗೆ ಉಚಿತ ಎಲ್ಪಿಜಿ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಉಜ್ವಲ ಯೋಜನೆ ಟಾರ್ಗೆಟ್ನ್ನು ಅವಧಿಗೂ ಮುನ್ನವೇ ಸರ್ಕಾರ ಪೂರ್ಣಗೊಳಿಸಿದೆ.. ನಿನ್ನೆ ಸಂಸತ್ತಿನಲ್ಲಿ ಇಂಧನ ಸಚಿವ ಧರ್ಮೆಂದ್ರ ಪ್ರಧಾನ್ ಅವರ ಸಮ್ಮುಖದಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಂದ 5 ಕೋಟಿ ಎಲ್ಪಿಜಿಯನ್ನು ಫಲಾನುಭವಿಗೆ ಹಸ್ತಾಂತರ ಮಾಡುವ ಮೂಲಕ ಈ ಮಹತ್ವದ ಮೈಲಿಗಲ್ಲನ್ನು ಸರ್ಕಾರ ಸಂಭ್ರಮಿಸಿದೆ. 5 ಕೋಟಿಯ ಟಾರ್ಗೆಟನ್ನು ಸರ್ಕಾರ 8 ತಿಂಗಳು ಮುಂಚಿತವಾಗಿಯೇ ತಲುಪಿದ್ದು ಶ್ಲಾಘನೀಯ ಕಾರ್ಯವಾಗಿದೆ. ಸರ್ಕಾರ ಅಧಿಕಾರಿಗಳ ಶ್ರಮ ಇಲ್ಲಿ ಮಹತ್ವದ ಪಾತ್ರವಹಿಸಿದೆ.. ಬಡ ಕುಟುಂಬಗಳಿಗೆ ಕಟ್ಟಿಗೆ ಹೊಗೆಯಿಂದ ಮುಕ್ತಿ ನೀಡುವ ಉದ್ಧೇಶದೊಂದಿಗೆ ಆರಂಭಗೊಂಡ ಅತ್ಯಂತ ಮಹತ್ವದ ಯೋಜನೆ ಇದಾಗಿದೆ.
ಉರುವಲು ಆಧಾರಿತ ಒಲೆಗಳು ಮಹಿಳೆಯರ ಆಯುಷ್ಯವನ್ನೇ ಮುಕ್ಕುತ್ತಿತ್ತು. ಅವರ ಜೀವನ ಮಟ್ಟವನ್ನೇ ಶಿಥಿಲಗೊಳಿಸುತ್ತಿತ್ತು. ಉಜ್ವಲ ಯೋಜನೆ ಎಲ್ಲೆಡೆ ಪರಿಣಾಮಕಾರಿಯಾಗಿ ಜಾರಿಯಾದರೆ ಇದೊಂದು ದೊಡ್ಡ ಆರೋಗ್ಯ ರಕ್ಷೆ ನೀಡುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಇದು ಕೇವಲ ಹೆಣ್ಣು ಮಕ್ಕಳಷ್ಟೇ ಅಲ್ಲ, ಇಡೀ ಕುಟುಂಬದ ಜೀವನ ಮಟ್ಟ ಸುಧಾರಣೆಯಲ್ಲೂ ಗಣನೀಯ ಕೊಡುಗೆ ನೀಡಬಲ್ಲದು. ಇದರೊಂದಿಗೆ ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಪೂರೈಕೆಯ ಉದ್ಯೋಗ ಕೂಡ ಉಂಟಾಗುತ್ತದೆ.
ಗ್ಯಾಸ್ ಸಂಪರ್ಕ ಕೇವಲ ಶ್ರೀಮಂತರಿಗೆ ಮಾತ್ರ ಎನ್ನುವ ಭಾವನೆ ಹಿಂದೆ ಇತ್ತು. ಆದರೆ, ಇದೀಗ ಕಾಲ ಬದಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಂದ ಬಡವರಿಗೆ, ಮಹಿಳೆಯರಿಗೆ ಗೌರವ ದೊರಕುತ್ತಿದೆ. ಇದೀಗಾಗಲೇ ದೇಶದ 4 ಕೋಟಿಗಿಂತಲೂ ಹೆಚ್ಚಿನ ಬಡ ಕುಟುಂಬಗಳಿಗೆ ಉಚಿತ ಎಲ್.ಪಿ.ಜಿ ಸಂಪರ್ಕ ಕಲ್ಪಿಸಿ ಅದನ್ನು ಅವರ ಮನೆ ಬಾಗಿಲಿಗೆ ಕೊಂಡೊಯ್ಯಲಾಗಿದ್ದು ಮೋದಿ ಅವರ ಯೋಜನೆಗಳು ಬಡವರ ಪಾಲಿಗೆ ವರದಾನವಾಗಿದ್ದಂತೂ ನಿಜ..
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…