Featured

ಉಜ್ವಲ ಯೋಜನೆ ಭರ್ಜರಿ ಸಕ್ಸಸ್ .., ಅವಧಿಗೆ ಮುನ್ನವೇ ಗೆದ್ದು ಬೀಗಿದ ಮೋದಿ ಸರಕಾರ..

ರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ `ಪ್ರಧಾನಮಂತ್ರಿ ಉಜ್ವಲ’ ಯೋಜನೆ ಮಹಿಳೆಯರ ಪಾಲಿಗೆ ನಿಜಕ್ಕೂ ವರದಾನವಾಗಿದೆ. ಹೊಗೆ ಗೂಡುಗಳಲ್ಲಿ ಬೇಯುತ್ತಿದ್ದ ಗ್ರಾಮೀಣ ಮಹಿಳೆಯರಿಗೆ ಮುಕ್ತಿ ಸಿಗುವ ರೀತಿ ಮಾಡಿದ್ದು ಮೋದಿ ಸರಕಾರ.. ಇದೀಗ ಪ್ರಧಾನಿ ನರೇಂದ್ರ ಮೋದೀಜಿಯವರ ಉಜ್ವಲ ಯೋಜನೆಯನ್ನು ಇಡೀ ದೇಶವೇ ಹಾಡಿಹೊಗಳುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯವರು ಬಡವರ ಏಳಿಗೆಗಾಗಿ ಈಗಾಗಲೇ ಹತ್ತು ಹಲವಾರು ಯೋಜನೆಗಳನ್ನು ಹೊರತಂದಿದ್ದು, ಬಡ ಕುಟುಂಬದ ಮಹಿಳೆಯರಿಗಾಗಿ ಉಪಯುಕ್ತವಾಗಲಿ ಎಂದು `ಪ್ರಧಾನಮಂತ್ರಿ ಉಜ್ವಲ ಯೋಜನೆ’ಯನ್ನು ಜಾರಿ ಮಾಡುವುದರ ಮೂಲಕ ಕೋಟ್ಯಾಂತರ ಜನರಿಗೆ ಉಪಯೋಗಕಾರಿಯಾಗಿದ್ದಾರೆ.. ಈ ಯೋಜನೆಯಡಿ ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಉಚಿತವಾಗಿ ಎಲ್.ಪಿ.ಜಿ ಸೌಲಭ್ಯ ಕಲ್ಪಿಸಲಾಗಿದ್ದು ಇದೀಗ ಮೋದೀಜೀ ಆಡಳಿತದ ನಾಲ್ಕು ವರ್ಷದಲ್ಲಿ ಅದೆಷ್ಟೋ ಕೋಟಿ ಹೊಸ ಗ್ರಾಹಕರಿಗೆ ಎಲ್‍ಪಿಜಿ ಸೌಲಭ್ಯ ದೊರಕಿಸಿಕೊಡುವ ಮೂಲಕ ಹೊಸ ಇತಿಹಾಸವನ್ನೇ ಸೃಷ್ಟಿಸಿದ್ದಾರೆ.

5 ಕೋಟಿ ಎಲ್.ಪಿ.ಜಿ ವಿತರಣೆ! ಅವಧಿಗೂ ಮುನ್ನವೇ ಟಾರ್ಗೆಟ್ ತಲುಪಿದ ಕೇಂದ್ರ..

5 ಕೋಟಿ ಮನೆಗಳಿಗೆ ಉಚಿತ ಎಲ್‍ಪಿಜಿ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಉಜ್ವಲ ಯೋಜನೆ ಟಾರ್ಗೆಟ್‍ನ್ನು ಅವಧಿಗೂ ಮುನ್ನವೇ ಸರ್ಕಾರ ಪೂರ್ಣಗೊಳಿಸಿದೆ.. ನಿನ್ನೆ ಸಂಸತ್ತಿನಲ್ಲಿ ಇಂಧನ ಸಚಿವ ಧರ್ಮೆಂದ್ರ ಪ್ರಧಾನ್ ಅವರ ಸಮ್ಮುಖದಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಂದ 5 ಕೋಟಿ ಎಲ್‍ಪಿಜಿಯನ್ನು ಫಲಾನುಭವಿಗೆ ಹಸ್ತಾಂತರ ಮಾಡುವ ಮೂಲಕ ಈ ಮಹತ್ವದ ಮೈಲಿಗಲ್ಲನ್ನು ಸರ್ಕಾರ ಸಂಭ್ರಮಿಸಿದೆ. 5 ಕೋಟಿಯ ಟಾರ್ಗೆಟನ್ನು ಸರ್ಕಾರ 8 ತಿಂಗಳು ಮುಂಚಿತವಾಗಿಯೇ ತಲುಪಿದ್ದು ಶ್ಲಾಘನೀಯ ಕಾರ್ಯವಾಗಿದೆ. ಸರ್ಕಾರ ಅಧಿಕಾರಿಗಳ ಶ್ರಮ ಇಲ್ಲಿ ಮಹತ್ವದ ಪಾತ್ರವಹಿಸಿದೆ.. ಬಡ ಕುಟುಂಬಗಳಿಗೆ ಕಟ್ಟಿಗೆ ಹೊಗೆಯಿಂದ ಮುಕ್ತಿ ನೀಡುವ ಉದ್ಧೇಶದೊಂದಿಗೆ ಆರಂಭಗೊಂಡ ಅತ್ಯಂತ ಮಹತ್ವದ ಯೋಜನೆ ಇದಾಗಿದೆ.

ಉರುವಲು ಆಧಾರಿತ ಒಲೆಗಳು ಮಹಿಳೆಯರ ಆಯುಷ್ಯವನ್ನೇ ಮುಕ್ಕುತ್ತಿತ್ತು. ಅವರ ಜೀವನ ಮಟ್ಟವನ್ನೇ ಶಿಥಿಲಗೊಳಿಸುತ್ತಿತ್ತು. ಉಜ್ವಲ ಯೋಜನೆ ಎಲ್ಲೆಡೆ ಪರಿಣಾಮಕಾರಿಯಾಗಿ ಜಾರಿಯಾದರೆ ಇದೊಂದು ದೊಡ್ಡ ಆರೋಗ್ಯ ರಕ್ಷೆ ನೀಡುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಇದು ಕೇವಲ ಹೆಣ್ಣು ಮಕ್ಕಳಷ್ಟೇ ಅಲ್ಲ, ಇಡೀ ಕುಟುಂಬದ ಜೀವನ ಮಟ್ಟ ಸುಧಾರಣೆಯಲ್ಲೂ ಗಣನೀಯ ಕೊಡುಗೆ ನೀಡಬಲ್ಲದು. ಇದರೊಂದಿಗೆ ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಪೂರೈಕೆಯ ಉದ್ಯೋಗ ಕೂಡ ಉಂಟಾಗುತ್ತದೆ.

ಗ್ಯಾಸ್ ಸಂಪರ್ಕ ಕೇವಲ ಶ್ರೀಮಂತರಿಗೆ ಮಾತ್ರ ಎನ್ನುವ ಭಾವನೆ ಹಿಂದೆ ಇತ್ತು. ಆದರೆ, ಇದೀಗ ಕಾಲ ಬದಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಂದ ಬಡವರಿಗೆ, ಮಹಿಳೆಯರಿಗೆ ಗೌರವ ದೊರಕುತ್ತಿದೆ. ಇದೀಗಾಗಲೇ ದೇಶದ 4 ಕೋಟಿಗಿಂತಲೂ ಹೆಚ್ಚಿನ ಬಡ ಕುಟುಂಬಗಳಿಗೆ ಉಚಿತ ಎಲ್.ಪಿ.ಜಿ ಸಂಪರ್ಕ ಕಲ್ಪಿಸಿ ಅದನ್ನು ಅವರ ಮನೆ ಬಾಗಿಲಿಗೆ ಕೊಂಡೊಯ್ಯಲಾಗಿದ್ದು ಮೋದಿ ಅವರ ಯೋಜನೆಗಳು ಬಡವರ ಪಾಲಿಗೆ ವರದಾನವಾಗಿದ್ದಂತೂ  ನಿಜ..

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

13 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago