ಉಡಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದ ಹೊಂಡಗಳು ಉಂಟಾಗಿರುವುದಿರಿಂದ ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ. ಹೆದ್ದಾರಿಯಲ್ಲಿ ಉಂಟಾಗಿರುವ ಈ ಹೊಂಡಗಳನ್ನು ಮುಚ್ಚಲು 10 ದಿನಗಳ ಗಡುವು ನೀಡಲಾಗುವುದು. ಇಲ್ಲದಿದ್ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ ೬೬ ಹೆಜಮಾಡಿಯಿಂದ ಉದ್ಯಾವರದ ವರೆಗೆ ವಿನೂತನ ರೀತಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಎಚ್ಚರಿಸಿದೆ.
ಈ ಮಳೆಗಾಲ ಆರಂಭದಿಂದ ಇದುವರೆಗೆ ಹಲವಾರು ಅಪಘಾತಗಳು ನಡೆದಿದ್ದು, ಹೆಚ್ಚಿನ ಅಪಘಾತಗಳು ಹೊಂಡ ತಪ್ಪಿಸಲು ಹೋಗಿ ನಡೆದಿದೆ. ಅಲ್ಲದೆ ಈ ಅಪಘಾತಗಳಲ್ಲಿ ಹೆಚ್ಚಿನ ಸಾವು ನೋವು ಉಂಟಾಗಿದೆ. ಮೂರು ಮೂರು ಕಡೆ ಟೋಲ್ ಪಾವತಿಸಿಯೂ ಹೊಂಡಗಳಿಗೆ ಮುಕ್ತಿ ನೀಡದೆ ಇರುವುದು ದುರಾದೃಷ್ಟ. ಜನಪ್ರತಿನಿಧಿಗಳು, ಜಿಲ್ಲಾಡಳಿತ ಹಾಗೂ ಹೆದ್ದಾರಿ ಪ್ರಾಧಿಕಾರವು ಎಚ್ಚೆತ್ತು ಕೂಡಲೇ ಹೊಂಡಗನ್ನು ಮುಚ್ಚಿಸಿ ಅಮಾಯಕ ವಾಹನ ಸವಾರರ ಜೀವ ರಕ್ಷಿಸುವಂತೆ ಯುವಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್ ಆಗ್ರಹಿಸಿದ್ದಾರೆ.
ಇದನ್ನೂ ಓದಿ :ಮಂಗಳೂರು: ಪಬ್ ಮೇಲೆ ಯಾವುದೇ ದಾಳಿ ನಡೆದಿಲ್ಲ : ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…