Featured

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ

ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಘಟನೆಗೆ ಸಂಬಂಧಿಸಿ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಆರೋಪಿಗಳಾದ ಡಾ। ಸುರೇಂದ್ರ ಕಾಮತ್, ಸಂತೆಕಟ್ಟೆ ನೇಜಾರು ನಿವಾಸಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ, ಇತರರ ವಿರುದ್ದ ಪ್ರಕರಣ ದಾಖಲಾಗಿದ್ದು, ವೈದ್ಯರು ಮತ್ತು ಪ್ರಕಾಶ್ ಅವರನ್ನು ಬಂಧಿಸಲಾಗಿದೆ.

ಘಟನೆ ವಿವರ

ಜೂ.19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿಯೋಜನಾಧಿಕಾರಿಗಳ ಕಚೇರಿಯ ವಲಯ ಮೇಲ್ವಿ ಚಾರಕಿ ಸವಿತಾ ಅವರು ಮಕ್ಕಳ ರಕ್ಷಣ ಘಟಕಕ್ಕೆ ಕರೆ ಮಾಡಿ ಸಂತೆಕಟ್ಟೆಯ ನೇಜಾರಿನಲ್ಲಿ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣುಮಗುವನ್ನು ತಂದು ಅನಧಿಕೃತವಾಗಿ ಸಾಕುತ್ತಿದ್ದಾರೆ ಎಂದು ದೂರು ನೀಡಿದ್ದರು.

ಇದನ್ನಾಧರಿಸಿ ಮಕ್ಕಳ ರಕ್ಷಣ ಘಟಕದ ರಕ್ಷಣಾಧಿಕಾರಿ ಯೋಗೀಶ್, ಸುರಕ್ಷಾ ಜತೆ ವಲಯ ಮೇಲ್ವಿಚಾರಕಿ ಸವಿತಾ ಅವರೊಂದಿಗೆ ನೇಜಾರಿಗೆ ತೆರಳಿದಾಗ ಅಲ್ಲಿ ದಂಪತಿ ಇರಲಿಲ್ಲ. ಬಳಿಕ ಮಾಹಿತಿ ಮೇರೆಗೆ ಸಂತೆಕಟ್ಟೆಯ ಸುಬ್ರಹ್ಮಣ್ಯನಗರದ ಮನೆಗೆ ತೆರಳಿದಾಗ ಪೂರ್ಣಿಮಾ, ಪತಿ ಪ್ರಕಾಶ್, ಒಂದು ತಿಂಗಳ ಹೆಣ್ಣು ಮಗು ಹಾಗೂ ಪೂರ್ಣಿಮಾ ಅವರ ಹಿರಿಯ ಸಹೋದರಿ ಲಕ್ಷ್ಮೀ ಅವರು ಮನೆಯಲ್ಲಿ ಹಾಜರಿದ್ದರು. ಅಧಿಕಾರಿಗಳು ವಿಚಾರಣೆ ನಡೆಸಿದಾಗ ಆರೋಪಿಗಳು ಅನುಮಾನಾಸ್ಪದ ಹೇಳಿಕೆ ನೀಡಿದ್ದು, ಬಳಿಕ ಕೂಲಂಕಷವಾಗಿ ವಿಚಾರಿಸಿದಾಗ ನೈಜ ವಿಚಾರ ಬಾಯ್ದಿಟ್ಟಿದ್ದರು.

ಆರೋಪಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಮದುವೆಯಾಗಿ 11 ವರ್ಷಗಳಾದರೂ ಮಕ್ಕಳು ಇರದ ಹಿನ್ನೆಲೆ ನಗರದ ನರ್ಸಿಂಗ್ ಹೋಮ್ ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆ ಸಂದರ್ಭ ನರ್ಸಿಂಗ್ ಹೋಮ್‌ನಲ್ಲಿ ಮಗುವೊಂದು ಇರುವ ವಿಚಾರ ಲಕ್ಷ್ಮೀ ಅವರಿಗೆ ತಿಳಿದು ಬಂದಿತ್ತು. ಪ್ರಕಾಶ್ ಮತ್ತು ಪೂರ್ಣಿಮಾ ಅಲ್ಲಿನ ವೈದ್ಯರನ್ನು ಭೇಟಿಯಾಗಿ ಮಗುವನ್ನು ನೀಡುವಂತೆ ಕೇಳಿಕೊಂಡಿದ್ದರು. ವೈದ್ಯರು ದಂಪತಿಗೆ ಒಂದು ತಿಂಗಳ ಹಿಂದೆ ಜನಿಸಿದ್ದ ಯಾರದ್ದೋ ಹೆಣ್ಣು ಮಗುವನ್ನು ಕೊಟ್ಟಿದ್ದರು.

ಮಗುವಿನ ಜೈವಿಕ ಪೋಷಕರು ಯಾರು ಎಂದು ತಿಳಿದಿಲ್ಲ. ಮಗುವಿನ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಆರೋಪಿ ದಂಪತಿ ಅಧಿಕಾರಿಗಳ ಮುಂದೆ ತಪ್ರೊಪ್ಪಿಕೊಂಡಿದ್ದರು. ಈ ಬಗ್ಗೆ ಜೂ. 20ರಂದು ಪ್ರಕರಣ ದಾಖಲಾಗಿತ್ತು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

16 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

17 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

17 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

19 hours ago