Featured

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ

ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಘಟನೆಗೆ ಸಂಬಂಧಿಸಿ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಆರೋಪಿಗಳಾದ ಡಾ। ಸುರೇಂದ್ರ ಕಾಮತ್, ಸಂತೆಕಟ್ಟೆ ನೇಜಾರು ನಿವಾಸಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ, ಇತರರ ವಿರುದ್ದ ಪ್ರಕರಣ ದಾಖಲಾಗಿದ್ದು, ವೈದ್ಯರು ಮತ್ತು ಪ್ರಕಾಶ್ ಅವರನ್ನು ಬಂಧಿಸಲಾಗಿದೆ.

ಘಟನೆ ವಿವರ

ಜೂ.19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿಯೋಜನಾಧಿಕಾರಿಗಳ ಕಚೇರಿಯ ವಲಯ ಮೇಲ್ವಿ ಚಾರಕಿ ಸವಿತಾ ಅವರು ಮಕ್ಕಳ ರಕ್ಷಣ ಘಟಕಕ್ಕೆ ಕರೆ ಮಾಡಿ ಸಂತೆಕಟ್ಟೆಯ ನೇಜಾರಿನಲ್ಲಿ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣುಮಗುವನ್ನು ತಂದು ಅನಧಿಕೃತವಾಗಿ ಸಾಕುತ್ತಿದ್ದಾರೆ ಎಂದು ದೂರು ನೀಡಿದ್ದರು.

ಇದನ್ನಾಧರಿಸಿ ಮಕ್ಕಳ ರಕ್ಷಣ ಘಟಕದ ರಕ್ಷಣಾಧಿಕಾರಿ ಯೋಗೀಶ್, ಸುರಕ್ಷಾ ಜತೆ ವಲಯ ಮೇಲ್ವಿಚಾರಕಿ ಸವಿತಾ ಅವರೊಂದಿಗೆ ನೇಜಾರಿಗೆ ತೆರಳಿದಾಗ ಅಲ್ಲಿ ದಂಪತಿ ಇರಲಿಲ್ಲ. ಬಳಿಕ ಮಾಹಿತಿ ಮೇರೆಗೆ ಸಂತೆಕಟ್ಟೆಯ ಸುಬ್ರಹ್ಮಣ್ಯನಗರದ ಮನೆಗೆ ತೆರಳಿದಾಗ ಪೂರ್ಣಿಮಾ, ಪತಿ ಪ್ರಕಾಶ್, ಒಂದು ತಿಂಗಳ ಹೆಣ್ಣು ಮಗು ಹಾಗೂ ಪೂರ್ಣಿಮಾ ಅವರ ಹಿರಿಯ ಸಹೋದರಿ ಲಕ್ಷ್ಮೀ ಅವರು ಮನೆಯಲ್ಲಿ ಹಾಜರಿದ್ದರು. ಅಧಿಕಾರಿಗಳು ವಿಚಾರಣೆ ನಡೆಸಿದಾಗ ಆರೋಪಿಗಳು ಅನುಮಾನಾಸ್ಪದ ಹೇಳಿಕೆ ನೀಡಿದ್ದು, ಬಳಿಕ ಕೂಲಂಕಷವಾಗಿ ವಿಚಾರಿಸಿದಾಗ ನೈಜ ವಿಚಾರ ಬಾಯ್ದಿಟ್ಟಿದ್ದರು.

ಆರೋಪಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಮದುವೆಯಾಗಿ 11 ವರ್ಷಗಳಾದರೂ ಮಕ್ಕಳು ಇರದ ಹಿನ್ನೆಲೆ ನಗರದ ನರ್ಸಿಂಗ್ ಹೋಮ್ ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆ ಸಂದರ್ಭ ನರ್ಸಿಂಗ್ ಹೋಮ್‌ನಲ್ಲಿ ಮಗುವೊಂದು ಇರುವ ವಿಚಾರ ಲಕ್ಷ್ಮೀ ಅವರಿಗೆ ತಿಳಿದು ಬಂದಿತ್ತು. ಪ್ರಕಾಶ್ ಮತ್ತು ಪೂರ್ಣಿಮಾ ಅಲ್ಲಿನ ವೈದ್ಯರನ್ನು ಭೇಟಿಯಾಗಿ ಮಗುವನ್ನು ನೀಡುವಂತೆ ಕೇಳಿಕೊಂಡಿದ್ದರು. ವೈದ್ಯರು ದಂಪತಿಗೆ ಒಂದು ತಿಂಗಳ ಹಿಂದೆ ಜನಿಸಿದ್ದ ಯಾರದ್ದೋ ಹೆಣ್ಣು ಮಗುವನ್ನು ಕೊಟ್ಟಿದ್ದರು.

ಮಗುವಿನ ಜೈವಿಕ ಪೋಷಕರು ಯಾರು ಎಂದು ತಿಳಿದಿಲ್ಲ. ಮಗುವಿನ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಆರೋಪಿ ದಂಪತಿ ಅಧಿಕಾರಿಗಳ ಮುಂದೆ ತಪ್ರೊಪ್ಪಿಕೊಂಡಿದ್ದರು. ಈ ಬಗ್ಗೆ ಜೂ. 20ರಂದು ಪ್ರಕರಣ ದಾಖಲಾಗಿತ್ತು.

Vishwa News 24

Recent Posts

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

1 minute ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago