ಉಡುಪಿ:ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಸಮಯಪ್ರಜ್ಞೆಯಿಂದ ಮಹಿಳೆಯನ್ನು ರಕ್ಷಿಸಿದ RPF ಮಹಿಳಾ ಸಿಬ್ಬಂದಿಗೆ ಶಾಸಕ ಯಶ್ ಪಾಲ್ ಸುವರ್ಣರಿಂದ ಸನ್ಮಾನ – vishwanews24
ಉಡುಪಿ:ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಸಮಯಪ್ರಜ್ಞೆಯಿಂದ ಮಹಿಳೆಯನ್ನು ರಕ್ಷಿಸಿದ RPF ಮಹಿಳಾ ಸಿಬ್ಬಂದಿಗೆ ಶಾಸಕ ಯಶ್ ಪಾಲ್ ಸುವರ್ಣರಿಂದ ಸನ್ಮಾನ
ಉಡುಪಿ: ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳಾ ಪ್ರಯಾಣಿಕರನ್ನು ತನ್ನ ಸಮಯಪ್ರಜ್ಞೆಯಿಂದ ತಕ್ಷಣ ರಕ್ಷಿಸಿದ RPF ಮಹಿಳಾ ಸಿಬ್ಬಂದಿ ಅಪರ್ಣಾ ರವರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ರವರು ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿದರು. ತುರ್ತು ಸಂದರ್ಭದಲ್ಲಿ ಸಮಯೋಚಿತ ಕಾರ್ಯದ ಮೂಲಕ ಮಹಿಳೆಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ ಅಪರ್ಣಾ ರವರಿಗೆ ಅಭಿನಂದನೆ ಸಲ್ಲಿಸಿದರು.
ಬಿಜೆಪಿಯವರ ಗೋಡ್ಸೆ ಭಾರತ ಮಾಡುವ ಷಡ್ಯಂತ್ರವನ್ನು ಸೋಲಿಸೋಣ : ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24
