Featured

ಉಡುಪಿ:ಎಲ್ಲಾ ಇಲಾಖೆಗಳು ನಿಗಧಿತ ಅವಧಿಯೊಳಗೆ ಸಾರ್ವಜನಿಕರಿಗೆ ಸೇವೆ ಒದಗಿಸಬೇಕು :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ:  ಉಡುಪಿ ಜಿಲ್ಲೆಯಲ್ಲಿ ಸಕಾಲ ವಿಲೇವಾರಿಯಲ್ಲಿ ವಿಳಂಬ ತೋರುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಸಕಾಲ ಅರ್ಜಿ ವಿಲೇವಾರಿಯಲ್ಲಿ ವಿಳಂಬ ತೋರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳೊಂದಿಗೆ ಸಕಾಲ ಪ್ರಗತಿ ಪರಿಶೀಲನಾ ಸಭೆ ಮತ್ತು ಆನ್‍ಲೈನ್‍ನಲ್ಲಿ ಸಕಾಲ ಸ್ವಯಂಚಾಲಿತ ಕಾರಣ ಕೇಳುವ ಪ್ರಕ್ರಿಯೆಯ ತರಬೇತಿ ನೀಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ, ಉಡುಪಿ ಜಿಲ್ಲೆಯು ಜುಲೈನಿಂದ ಅಗಸ್ಟ್ ತಿಂಗಳವರೆಗಿನ ಒಂದನೇ ಸ್ಥಾನ ಮತ್ತು ಅರ್ಜಿ ಸ್ವೀಕರಿಸುವುದರಲ್ಲಿ ಹತ್ತನೇ ಸ್ಥಾನದಲ್ಲಿದ್ದು, ಒಟ್ಟು ಸಾಧನೆಯಲ್ಲಿ ರಾಜ್ಯದಲ್ಲಿ ನಾಲ್ಕನೇ ಸ್ಥಾನದಲ್ಲಿದೆ, ಮುಂದಿನ ದಿನಗಳಲ್ಲಿ ಜಿಲ್ಲೆಯು ಒಂದನೇ ಸ್ಥಾನಕ್ಕೇರುವಂತಾಗಲು, ಎಲ್ಲಾ ಇಲಾಖೆಗಳು ನಿಗಧಿತ ಅವಧಿಯೊಳಗೆ ಸಾರ್ವಜನಿಕರಿಗೆ ಸೇವೆ ಒದಗಿಸಬೇಕು.

ಜಿ.ಪಂ ಅಧಿಕಾರಿಗಳು ಎಲ್ಲಾ ಗ್ರಾಮ ಪಂಚಾಯತ್‍ಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿ, ಸಕಾಲದಲ್ಲಿ ಗುರುತಿಸಲ್ಪಟ್ಟ ಸೇವೆಗಳನ್ನು, ಸಕಾಲ ಹೊರತುಪಡಿಸಿ ನೇರವಾಗಿ ನೀಡುವುದು ಕಂಡು ಬರುತ್ತಿದ್ದು, ಅಂತಹ ಅರ್ಜಿ ಸ್ವೀಕರಿಸಿ, ವಿಲೇವಾರಿ ಮಾಡುವ ಸಿಬ್ಬಂದಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಕಾಲ ಅರ್ಜಿ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವುದಕ್ಕೆ ಕಾರಣ ಕೇಳುವ ನೋಟಿಸ್ ಅನ್ನು ಮುಂದಿನ ದಿನಗಳಲ್ಲಿ ಆನ್‍ಲೈನ್ ಮೂಲಕವೇ ಸಂಬಂದಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುವುದು. ನೋಟೀಸ್ ನೀಡಿದ 7 ದಿನಗಳಲ್ಲಿ ಸಮಂಜಸ ಕಾರಣ ನೀಡಬೇಕು ಇಲ್ಲವಾದಲ್ಲಿ ಸಕ್ಷಮ ಪ್ರಾಧಿಕಾರಕ್ಕೆ ಆನ್‍ಲೈನ್ ಮೂಲಕವೇ ಅರ್ಜಿ ಸಲ್ಲಿಕೆಯಾಗಲಿದ್ದು, ತಪ್ಪಿತಸ್ಥರೆಂದು ಕಂಡುಬಂದಲ್ಲಿ, ದಂಡದ ಮೊತ್ತವನ್ನು ಪ್ರಕರಣ ಇತ್ಯರ್ಥವಾಗುವ ತನಕವೂ, ನೇರವಾಗಿ ಸಂಬಂಧಪಟ್ಟ ಅಧಿಕಾರಿ/ನೌಕರರ ವೇತನದಲ್ಲಿ ಕಡಿತಗೊಳ್ಳುವ ತಂತ್ರಾಂಶ ಸಹ ಸಿದ್ದವಾಗಿದೆ ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago