ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸಕಾಲ ವಿಲೇವಾರಿಯಲ್ಲಿ ವಿಳಂಬ ತೋರುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಸಕಾಲ ಅರ್ಜಿ ವಿಲೇವಾರಿಯಲ್ಲಿ ವಿಳಂಬ ತೋರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳೊಂದಿಗೆ ಸಕಾಲ ಪ್ರಗತಿ ಪರಿಶೀಲನಾ ಸಭೆ ಮತ್ತು ಆನ್ಲೈನ್ನಲ್ಲಿ ಸಕಾಲ ಸ್ವಯಂಚಾಲಿತ ಕಾರಣ ಕೇಳುವ ಪ್ರಕ್ರಿಯೆಯ ತರಬೇತಿ ನೀಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ, ಉಡುಪಿ ಜಿಲ್ಲೆಯು ಜುಲೈನಿಂದ ಅಗಸ್ಟ್ ತಿಂಗಳವರೆಗಿನ ಒಂದನೇ ಸ್ಥಾನ ಮತ್ತು ಅರ್ಜಿ ಸ್ವೀಕರಿಸುವುದರಲ್ಲಿ ಹತ್ತನೇ ಸ್ಥಾನದಲ್ಲಿದ್ದು, ಒಟ್ಟು ಸಾಧನೆಯಲ್ಲಿ ರಾಜ್ಯದಲ್ಲಿ ನಾಲ್ಕನೇ ಸ್ಥಾನದಲ್ಲಿದೆ, ಮುಂದಿನ ದಿನಗಳಲ್ಲಿ ಜಿಲ್ಲೆಯು ಒಂದನೇ ಸ್ಥಾನಕ್ಕೇರುವಂತಾಗಲು, ಎಲ್ಲಾ ಇಲಾಖೆಗಳು ನಿಗಧಿತ ಅವಧಿಯೊಳಗೆ ಸಾರ್ವಜನಿಕರಿಗೆ ಸೇವೆ ಒದಗಿಸಬೇಕು.
ಜಿ.ಪಂ ಅಧಿಕಾರಿಗಳು ಎಲ್ಲಾ ಗ್ರಾಮ ಪಂಚಾಯತ್ಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿ, ಸಕಾಲದಲ್ಲಿ ಗುರುತಿಸಲ್ಪಟ್ಟ ಸೇವೆಗಳನ್ನು, ಸಕಾಲ ಹೊರತುಪಡಿಸಿ ನೇರವಾಗಿ ನೀಡುವುದು ಕಂಡು ಬರುತ್ತಿದ್ದು, ಅಂತಹ ಅರ್ಜಿ ಸ್ವೀಕರಿಸಿ, ವಿಲೇವಾರಿ ಮಾಡುವ ಸಿಬ್ಬಂದಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಕಾಲ ಅರ್ಜಿ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವುದಕ್ಕೆ ಕಾರಣ ಕೇಳುವ ನೋಟಿಸ್ ಅನ್ನು ಮುಂದಿನ ದಿನಗಳಲ್ಲಿ ಆನ್ಲೈನ್ ಮೂಲಕವೇ ಸಂಬಂದಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುವುದು. ನೋಟೀಸ್ ನೀಡಿದ 7 ದಿನಗಳಲ್ಲಿ ಸಮಂಜಸ ಕಾರಣ ನೀಡಬೇಕು ಇಲ್ಲವಾದಲ್ಲಿ ಸಕ್ಷಮ ಪ್ರಾಧಿಕಾರಕ್ಕೆ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಕೆಯಾಗಲಿದ್ದು, ತಪ್ಪಿತಸ್ಥರೆಂದು ಕಂಡುಬಂದಲ್ಲಿ, ದಂಡದ ಮೊತ್ತವನ್ನು ಪ್ರಕರಣ ಇತ್ಯರ್ಥವಾಗುವ ತನಕವೂ, ನೇರವಾಗಿ ಸಂಬಂಧಪಟ್ಟ ಅಧಿಕಾರಿ/ನೌಕರರ ವೇತನದಲ್ಲಿ ಕಡಿತಗೊಳ್ಳುವ ತಂತ್ರಾಂಶ ಸಹ ಸಿದ್ದವಾಗಿದೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…