Featured

ಉಡುಪಿ:ಒಂಟಿ ವೃದ್ಧೆಯ ಕೊಲೆ ಪ್ರಕರಣ: ಆರೋಪಿ ದಂಪತಿಗಳಿಗೆ ಜೀವಾವಧಿ ಶಿಕ್ಷೆ – Vishwanews24

ಉಡುಪಿ:ಒಂಟಿ ವೃದ್ಧೆಯ ಕೊಲೆ ಪ್ರಕರಣ: ಆರೋಪಿ ದಂಪತಿಗಳಿಗೆ ಜೀವಾವಧಿ ಶಿಕ್ಷೆ

ಉಡುಪಿ : ತಾಲೂಕಿನ ಪುತ್ತೂರು ಸುಬ್ರಹ್ಮಣ್ಯ ನಗರದಲ್ಲಿ ನಾಲ್ಕು ವರ್ಷದ ಹಿಂದೆ 80 ವರ್ಷದ ಒಂಟಿ ವೃದ್ಧೆಯನ್ನು ಬರ್ಬರವಾಗಿ ಕೊಲೆ ಮಾಡಿದ ದಂಪತಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಧಾರವಾಡ ತಾಲೂಕಿನ ನವಲಗುಂದ ನಿವಾಸಿಗಳಾದ ಅಂಬಣ್ಣ ಅಲಿಯಾಸ್ ಅಂಬರೀಶ್ ಹಾಗೂ ಆತನ ಪತ್ನಿ ರಶೀದಾ ಅಲಿಯಾಶ್ ಜ್ಯೋತಿ ಶಿಕ್ಷೆಗೆ ಗುರಿಯಾದ ದಂಪತಿಯಾಗಿದ್ದು, ರತ್ನಾವತಿ ಶೇಡ್ತಿ (80) ಕೊಲೆಯಾದವರು. ದಂಪತಿಗೆ ಜೀವಾವಧಿ ಶಿಕ್ಷೆಯ ಜೊತೆಗೆ ತಲಾ 50,0000 ರೂ.ದಂಡ ಸಹ ವಿಧಿಸಲಾಗಿದೆ.

ಪ್ರಕರಣದ ಹಿನ್ನಲೆ: ರತ್ನಾವತಿ ಶೇಡ್ತಿ ಅವರಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದು, ಪುತ್ತೂರಿನ ಸುಬ್ರಹ್ಮಣ್ಯ ನಗರದಲ್ಲಿ ಒಂಟಿಯಾಗಿ ವಾಸವಾಗಿದ್ದರು. ಮೂರು ಕೊಠಡಿಗಳನ್ನು ಬಾಡಿಗೆ ಕೊಟ್ಟು ಜೀವನ ನಿರ್ವಹಣೆ ಮಾಡುತ್ತಿದ್ದರು. ಮಕ್ಕಳು ಆಗಾಗ ಬಂದು ತಾಯಿಯ ಯೋಗಕ್ಷೇಮ ವಿಚಾರಿಸಿ ಕೊಳ್ಳುತ್ತಿದ್ದರು.

2019ರ ಜು.5ರಂದು ಪುತ್ರಿ ಸುಪ್ರಭಾ ತಾಯಿಗೆ ಕಾಲ್ ಮಾಡಿದಾಗ ಅವರು ಸ್ವೀಕರಿಸಲಿಲ್ಲ. ಕೂಡಲೇ ಸಹೋರರಿಗೆ ಕರೆ ಮಾಡಿ ವಿಚಾರಿಸಿದಾಗಲೂ ತಾಯಿಯ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಅದೇ ದಿನ ಸಂಜೆ ಅಮ್ಮನ ಮನೆಗೆ ಬಂದಾಗ ಬೆಡ್‌ರೂಮಿನಲ್ಲಿ ತಾಯಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ತತ್‌ಕ್ಷಣ ಆಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರೋಪಿಗಳು ಬಿಟ್ಟಿದ್ದ ಸುಳಿವಿನ ಜಾಡು ಹಿಡಿದ ಪೊಲೀಸರು ಜು.10ರಂದು ಆರೋಪಿ ದಂಪತಿಯನ್ನು ಬಂಧಿಸಿದ್ದರು. ಆರೋಪಿಗಳನ್ನು ವಿಚಾರಣೆಗೊಳ ಪಡಿಸಿದಾಗ ಜು.2ರಂದು ಅಪರಾಹ್ನ ರತ್ನಾವತಿ ಶೇಡ್ತಿ ಮನೆಗೆ ನುಗ್ಗಿ ಆಭರಣಕ್ಕೆ ಬೇಡಿಕೆ ಇಡಲಾಗಿತ್ತು. ಕೊಡಲು ನಿರಾಕರಿಸಿದಾಗ ಕತ್ತಿಯಿಂದ ಕೊಲೆ ಮಾಡಿ ಮೈಮೇಲಿದ್ದ ಆಭರಣ, ಮನೆಯಲ್ಲಿದ್ದ ಚಿನ್ನಾಭರಣ, ಮೊಬೈಲ್ ಹಾಗೂ 5,000ರೂ. ನಗದನ್ನು ದೋಚಿ ಪರಾರಿಯಾಗಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದರು.

ಅಂದಿನ ಉಡುಪಿ ಇನ್‌ಸ್ಪೆಕ್ಟರ್ ಮಂಜುನಾಥ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಾಯಾಲಯದಲ್ಲಿ ಪ್ರಕರಣ ಸಂಬಂಧ 21 ಸಾಕ್ಷಿಗಳ ವಿಚಾರಣೆ ನಡೆದಿತ್ತು. ಪ್ರಾಸಿಕ್ಯೂಷನ್ ಪರವಾಗಿ ೫೩ ದಾಖಲಾತಿ ಹಾಗೂ 6 ಇತರ ವಸ್ತುಗಳನ್ನು ಗುರುತಿಸಲಾಗಿತ್ತು. ಸಾಕ್ಷಿದಾರರ ವಿಚಾರಣೆಯನ್ನು ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಾಯಾಲಯದ ಸರಕಾರಿ ಅಭಿಯೋಜಕರಾದ ಶಾಂತಿಬಾಯಿ ನಡೆಸಿದ್ದರು.

ಪ್ರಕರಣ 2022ರ ಫೆಬ್ರವರಿಯಲ್ಲಿ ೨ನೇ ಹೆಚ್ಚುವರಿ ಜಿಲ್ಲಾ ನ್ಯಾಾಯಾಲಯಕ್ಕೆ ವರ್ಗಾವಣೆಯಾಯಿತು. ನ್ಯಾಯಾಧೀಶರಾದ ದಿನೇಶ್ ಹೆಗಡೆ ವಾದ- ವಿವಾದಗಳನ್ನು ಆಲಿಸಿ ಆರೋಪಿಗಳ ವಿರುದ್ಧದ ಆರೋಪಗಳು ರುಜುವಾತಾಗಿದೆ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಜಯರಾಮ ಶೆಟ್ಟಿ ವಾದ ಮಂಡಿಸಿದ್ದರು.

ಶಿಕ್ಷೆಯ ವಿವರ: ಆರೋಪಿಗಳ ವಿರುದ್ಧ ಜೀವಾವಧಿ ಶಿಕ್ಷೆ, 7 ವರ್ಷ ಕಠಿನ ಸಜೆ, 7 ವರ್ಷ ಸಾದಾ ಸಜೆ ಹಾಗೂ 6 ತಿಂಗಳು ಶಿಕ್ಷೆ ವಿಧಿಸಲಾಗಿದ್ದು, ಏಕಕಾಲದಲ್ಲಿ ಅವುಗಳನ್ನು ಅನುಭವಿಸುವಂತೆ ಆದೇಶಿಸಲಾಗಿದೆ.

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

20 hours ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

22 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

2 days ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

2 days ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

2 days ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

2 days ago