ಉಡುಪಿ : ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಜ. 22 ರಂದು ನೆರವೆರಲಿದ್ದು, ಈ ಅದ್ಭುತ ಕ್ಷಣದಲ್ಲಿ ಸಾವಿರರು ಭಕ್ತರು ಪಾಲ್ಗೊಳ್ಳಲಿದ್ದಾರೆ. ಆದರೆ ಕರಾವಳಿ ಭಾಗದಿಂದ ಅಲ್ಲಿಗೆ ತೆರಳುವ ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ಯಾವುದೇ ನೇರ ರೈಲುಗಳು ಇಲ್ಲದಿರುವುದು ಕರಾವಳಿ ಜನರ ಬೇಸರಕ್ಕೆ ಕಾರಣವಾಗಿದೆ.
ಭಾರತೀಯ ರೈಲ್ವೆ ಈಗಾಗಲೇ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ದೇಶದ ವಿವಿಧ ಭಾಗಗಳಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕವನ್ನು ಆರಂಭಿಸಿದೆ. ಕರ್ನಾಟಕದಲ್ಲಿ ಮೈಸೂರು, ಹುಬ್ಬಳ್ಳಿ ಮತ್ತು ಬೆಂಗಳೂರು ಮೂಲಕ ಅಯೋಧ್ಯೆಗೆ ರೈಲು ಸಂಪರ್ಕ ಮಾಡಲು ಉದ್ದೇಶಿಸಿದೆ.
ಆದರೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಂದ ಅಯೋಧ್ಯೆ ಯಾತ್ರೆ ಕೈಗೊಳ್ಳುವ ಭಕ್ತರಿಗೆ ನೇರ ಸಂಪರ್ಕ ವ್ಯವಸ್ಥೆ ಇಲ್ಲ. ಕರಾವಳಿ ಭಾಗದವರು ಮುಂಬಯಿಗೆ ತೆರಳಿ ಅಲ್ಲಿಂದ ಅಯೋಧ್ಯೆಗೆ ತೆರಳಬೇಕು. ಇಲ್ಲವೇ ಬೆಂಗಳೂರಿಗೆ ತೆರಳಿ ರೈಲುಗಳನ್ನು ಹಿಡಿಯಬೇಕು. ಇದರಿಂದ ಸಮಯ ವ್ಯರ್ಥದ ಜೊತೆಗೆ ವೆಚ್ಚವು ಹೆಚ್ಚಳವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ತಮಿಳುನಾಡು -ಅಯೋಧ್ಯೆ ಎಕ್ಸ್ಪ್ರೆಸ್ ಮಂಗಳೂರು ಜಂಕ್ಷನ್ ನಿಲ್ದಾಣದ ಮೂಲಕ ಹಾದುಹೋಗಲಿದ್ದರೂ ಇದರಿಂದ ಕರಾವಳಿಯ ಪ್ರಯಾಣಿಕರಿಗೆ ಯಾವುದೇ ರೀತಿಯ ಅನುಕೂಲವಿಲ್ಲ. ಈ ರೈಲು ಕೇರಳ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಹೆಚ್ಚಿನ ಸೀಟುಗಳನ್ನು ಅಲ್ಲಿನವರೇ ಕಾಯ್ದಿರಿಸುವುದರಿಂದ ಕರಾವಳಿ ಜನರಿಗೆ ಸೀಟು ಸಿಗುವುದೇ ಅನುಮಾನ. ಕನಿಷ್ಠ ವಾರದಲ್ಲಿ ಒಂದು ದಿನವಾದರೂ ಕರಾವಳಿ ಭಾಗದಿಂದ ಉಡುಪಿ ಮಾರ್ಗವಾಗಿ ಅಯೋಧ್ಯೆಗೆ ನೇರ ರೈಲು ಸಂಪರ್ಕ ಒದಗಿಸಬೇಕು ಎಂದು ಕರಾವಳಿ ಜನರು ಮನವಿ ಮಾಡಿದ್ದಾರೆ.
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ…
ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ…
ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…
ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್ಆರ್ಟಿಸಿ…
ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…
ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ…