Featured

ಉಡುಪಿ:ಕಾಂಗ್ರೆಸ್ ಹಿಂದೂ ವಿರೋಧಿ ಹೇಳಿಕೆ ನೀಡಿ, ಹಿಂದೂ ಧರ್ಮದ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸುತ್ತಿದ್ದಾರೆ : ರಘುಪತಿ ಭಟ್

ಅಲ್ಪಸಂಖ್ಯಾತರನ್ನು ಒಲೈಸುವುದು ಹಾಗೂ ಹಿಂದುಗಳನ್ನು ದಮನ ಮಾಡುವಂತದ್ದು ಕಾಂಗ್ರೆಸ್ಸಿಗರ ಸಂಸ್ಕೃತಿ : ಶಾಸಕ ಕೆ. ರಘುಪತಿ ಭಟ್

ಅಶ್ಲೀಲ ಹಿಂದು ಎಂಬ ಹೇಳಿಕೆ ಕಾಂಗ್ರೆಸಿಗರ ಮನಸ್ಥಿತಿ ಹೇಗೆ ಎನ್ನುವುದರ ಬಗ್ಗೆ ಜನತೆಗೆ ತಿಳಿಸುತ್ತಿದೆ : ಕುಯಿಲಾಡಿ ಸುರೇಶ್ ನಾಯಕ್

ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ

ಉಡುಪಿ : ನೆಹರೂ ಕಾಲದಿಂದಲೂ ಅಲ್ಪಸಂಖ್ಯಾತರನ್ನು ಒಲೈಸುವುದು ಹಾಗೂ ಹಿಂದುಗಳನ್ನು ದಮನ ಮಾಡುವಂತದ್ದು ಕಾಂಗ್ರೆಸ್ಸಿಗರ ಸಂಸ್ಕೃತಿ. ಕಾಂಗ್ರೆಸ್ಸಿಗರ ಅಶ್ಲೀಲ ಮನಸ್ಸನ್ನು ಅವರ ಹೇಳಿಕೆಗಳ ಮೂಲಕ ನೋಡಬಹುದು ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.

ಹಿಂದೂ ಎಂಬ ಪದದ ಅರ್ಥ ಪರ್ಷಿಯನ್ ಭಾಷೆಯಲ್ಲಿ ಅಶ್ಲೀಲ ಪದ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ಘಟಕದಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಹಿಂದೂ ಎಂಬುವುದು ಒಂದು ರೋಮಾಂಚನ ಪದ. ಆದರೆ ಕಾಂಗ್ರೆಸ್ಸಿಗರು ಮಾತ್ರ ಪ್ರತಿ ಬಾರಿ ಹಿಂದೂ ವಿರೋಧಿ ಹೇಳಿಕೆ ನೀಡಿ, ಹಿಂದೂ ಧರ್ಮದ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸುತ್ತಿದ್ದಾರೆ. ರಾಮ ಸೇತುವನ್ನು ಒಡೆಯುವ ನಿರ್ಧಾರ ಹಾಗೂ ರಾಮ ಒಬ್ಬ ಕಾಲ್ಪನಿಕ ವ್ಯಕ್ತಿ ಎಂದು ಈ ಕಾಂಗ್ರೆಸ್ಸಿಗರ ಹೇಳಿದ್ದರು.

ಸತೀಶ್ ಜಾರಕಿಹೊಳಿ ಹೇಳಿಕೆಯ ವಿರುದ್ದ ಕಾಂಗ್ರೆಸ್ ಈವರೆಗೆ ತನ್ನ ನಿಲುವನ್ನು ತಿಳಿಸಿಲ್ಲ, ಜಾರಕಿಹೊಳಿ ದೇಶದ ಜನತೆ ಮುಂದೆ ಕ್ಷಮೆ ಯಾಚಿಸಬೇಕು ಇಲ್ಲವಾದಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಸತೀಶ್ ಜಾರಕಿ ಹೊಳಿಯನ್ನು ಕಾಂಗ್ರೆಸ್ ವಜಾ ಮಾಡಬೇಕು ಇಲ್ಲವಾದರೆ ದೊಡ್ಡ ಮಟ್ಟದ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಉಡುಪಿ: ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮುಹಮ್ಮದ್ ಗೌಸ್ ಗೆ ರಾಷ್ಟ್ರಪತಿ ಪದಕ ಪ್ರದಾನ – Vishwanews24

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಅಶ್ಲೀಲ ಹಿಂದು ಎಂಬ ಹೇಳಿಕೆ ಕಾಂಗ್ರೆಸಿಗರ ಮನಸ್ಥಿತಿ ಹೇಗೆ ಎನ್ನುವುದರ ಬಗ್ಗೆ ಜನತೆಗೆ ತಿಳಿಸುತ್ತಿದೆ. ಇದನ್ನು ಭಾರತೀಯ ಜನತಾ ಪಾರ್ಟಿ ಹಾಗೂ ಪ್ರತಿಯೊಬ್ಬ ಹಿಂದೂ ಖಂಡಿಸುತ್ತಾರೆ.

ನೆಹರೂರಿಂದ ಹಿಡಿದು ಸತೀಶ್ ಜಾರಕಿಹೊಳಿ ತನಕ ಎಲ್ಲಾ ಕಾಂಗ್ರೆಸಿಗರ ಹೇಳಿಕೆ ಒಂದೇ ರೀತಿಯದ್ದಾಗಿದೆ. ಕಾಂಗ್ರೆಸಿಗರು ಹಿಂದಿನಿಂದಲೂ ಹಿಂದೂ ವಿರೋಧಿಗಳು, ಹಿಂದೂ ಗಳ ಬಗ್ಗೆ ಅವಹೇಳನ ಹಾಗೂ ಹಿಂದೂ ಭಾವನೆಗಳ ಜೊತೆ ಆಟವಾಡುವುದು ಕಾಂಗ್ರೆಸಿಗರ ಕೀಳು ಮನಸ್ಥಿತಿಯ ಸಂಕೇತ. ಕಾಂಗ್ರೆಸ್ ಈ ಹಿಂದೆಯೂ ರಾಮ ಮಂದಿರ, ರಾಮಸೇತು, ಕಾಶ್ಮೀರದ ವಿಷಯದಲ್ಲಿಯೂ ಕೂಡ ಹಿಂದುಗಳ ಭಾವನೆಗೆ ಧಕ್ಕೆ ಉಂಟು ಮಾಡಿ ವಿವಾದಾತ್ಮಕ ಹೇಳಿಕೆಯನ್ನು ನೀಡಿ, ತನ್ನ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳಲು ನೋಡಿತ್ತು. ಅಶ್ಲೀಲ ಹಿಂದೂ ಎನ್ನುವ ಪದ ಕೇವಲ ಕಾಂಗ್ರೆಸ್‌ನ ಕಾರ್ಯಕರ್ತರಿಗೆ ಮಾತ್ರ ಅನ್ವಯವಾಗುತ್ತದೆ ಹೊರತು ದೇಶದ ಯಾವೊಬ್ಬ ಹಿಂದುವು ಅಶ್ಲೀಲನಲ್ಲ ಎಂದರು.

ಕಾರ್ಕಳ : ನಿಟ್ಟೆ ಕಲ್ಯಾ ಗ್ರಾಮದ ಮೆಸ್ಕಾಂ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ – Vishwanews24

ಪ್ರತಿಭಟನೆಯಲ್ಲಿ ಮೈಸೂರು ಎಲೆಕ್ಟ್ರೀಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಶೆಟ್ಟಿ, ಜಿಲ್ಲ ಎಸ್.ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ನಗರ ಭಾಜಪದ ಅಧ್ಯಕ್ಷ ಮಹೇಶ್ ಠಾಕೂರ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago