Featured

ಉಡುಪಿ:ಕೇರಳ ಮತ್ತು ಮುಂಬೈಯಿ0ದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ಕಡ್ಡಾಯ : ಸಂಸದೆ ಶೋಭಾ ಕರಂದ್ಲಾಜೆ-Vishwanews24

ಉಡುಪಿ: ಕೇರಳ ಮತ್ತು ಮುಂಬೈಯಿ0ದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ಕಡ್ಡಾಯ : ಸಂಸದೆ ಶೋಭಾ -Vishwanews24

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ರೂಪಾಂತರ ವೈರಸ್ ಹರಡದಂತೆ ಮುನ್ನೆಚ್ಚರಿಕೆಯಾಗಿ, ಜಿಲ್ಲೆಗೆ ಕೇರಳ ಮತ್ತು ಮುಂಬೈಯಿಂದ ಬರುವವರ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ವರದಿಯನ್ನು ಕಡ್ಡಾಯವಾಗಿ ಪರಿಶೀಲನೆ ನಡೆಸುವಂತೆ ಸಂಸದೆ ಶೋಭಾ ಕರಂದ್ಲಾಜೆ ಸೂಚಿಸಿದರು.

ಅವರು ಸೋಮವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

”ರೂಪಾಂತರಿ ಕೊರೊನಾ ವೈರಸ್ ಹರಡುವುದನ್ನು ತಡೆಯಲು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ, ಈ ಹಿಂದೆ ಕೊರೊನಾ ಚಿಕಿತ್ಸೆಗೆ ಗುರುತಿಸಿದ್ದ ಆಸ್ಪತ್ರೆಗಳಲ್ಲಿ, ಚಿಕಿತ್ಸೆ ನೀಡಲು ಬೇಕಾದ ಎಲ್ಲಾ ಅಗತ್ಯ ಸಿದ್ದತೆಗಳನ್ನು ಹಾಗೂ ಉಪಕರಣಗಳನ್ನು ಸಿದ್ದ ಮಾಡಿಟ್ಟುಕೊಳ್ಳಿ, ಸಾರ್ವಜನಿಕರು ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದರ ಕುರಿತಂತೆ ಹೆಚ್ಚು ಜಾಗೃತಿ ಮೂಡಿಸಿ, ಬಾಂಬೆ ಮತ್ತು ಕೇರಳದಿಂದ ಬರುವವರು 72 ಗಂಟೆಗಳ ಮೊದಲು ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ವರದಿ ಪಡೆದಿರುವ ಕುರಿತು ಪರಿಶೀಲನೆ ನಡೆಸಿ” ಎಂದರು.

”ಜಿಲ್ಲೆಯಲ್ಲಿ ಇದುವರೆಗೆ 3,59,039 ಮಂದಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, 3,35,501 ನೆಗೆಟಿವ್ ವರದಿ ಬಂದಿದೆ, 23,538 ಮಂದಿ ಪಾಸಿಟಿವ್ ಬಂದಿದ್ದು, 189 ಮಂದಿ ಮೃತಪಟ್ಟಿದ್ದಾರೆ, ಇಷ್ಟೊಂದು ಪ್ರಮಾಣದ ಪಾಸಿಟಿವ್ ಇದ್ದರೂ ಸಹ ಜಿಲ್ಲೆಯಲ್ಲಿನ ಮರಣ ಪ್ರಮಾಣ ರಾಜ್ಯದಲ್ಲೇ ಅತ್ಯಂತ ಕಡಿಮೆಯಿದ್ದು ಇದಕ್ಕೆ ಕಾರಣವಾದ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ” ಡಿಸಿ ಜಿ.ಜಗದೀಶ್ ಹೇಳಿದರು.

”ಜಿಲ್ಲೆಯಲ್ಲಿ ನರೇಗಾ ಯೋಜನೆಯಲ್ಲಿ 51000 ಮಾನವದಿನಗಳ ಸೃಜನೆಯ ಗುರಿಗೆ 51200 ಸಾಧನೆ ಮಾಡಿರುವುದನ್ನು ಅಭಿನಂದಿಸಿದ ಸಂಸದರು, ಜಿಲ್ಲೆಯಲ್ಲಿ ಹೊಸದಾಗಿ ಆಯ್ಕೆಯದ ಗ್ರಾಮ ಪಂಚಾಯತ್ ಸದಸ್ಯರಿಗೆ ನರೇಗಾದಲ್ಲಿ ಕೈಗೊಳ್ಳಬಹುದಾದ ಕಾರ್ಯಗಳ ಕುರಿತು ವಿವರವಾದ ಮಾಹಿತಿ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಕೆರೆ ಮತ್ತು ತೋಡುಗಳ ಹೊಳೆತ್ತಲು ಕ್ರಮ ಕೈಗೊಳ್ಳಿ ಇದರಿಂದ ಮಳೆಗಾಲದಲ್ಲಿ ನೀರು ಸಂಗ್ರಹಿಸಲು ಹಾಗೂ ನೀರು ಸರಾಗವಾಗಿ ಹರಿದುಹೋಗಲು ಸಾಧ್ಯವಾಗಲಿದೆ” ಎಂದರು.

ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸ್ವಸಹಾಯ ಸಂಘಗಳಿಗೆ ಸಾಲ ನೀಡುತ್ತಿಲ್ಲ ಹಾಗೂ ಸಾಲ ನೀಡಲು ಅನಗತ್ಯ ವಿಳಂಬ ಮಾಡುತ್ತಿರುವ ಬಗ್ಗೆ ದೂರುಗಳಿವೆ ಆದ್ದರಿಂದ ಬ್ಯಾಂಕ್ ಗಳಲ್ಲಿ ಸರ್ಕಾರಿ ಯೋಜನೆಯ ಫಲಾನುಭವಿಗಳಿಗೆ ನೀಡಿರುವ ಸಾಲದ ವಿವರಗಳನ್ನು ನೀಡಿ ಎಂದು ಸಂಸದರು ಲೀಢ್ ಬ್ಯಾಂಕ್ ಮೆನೆಜರ್ ಗೆ ಸೂಚಿಸಿದರು.

”ರಸ್ತೆ ಮತ್ತು ಕುಡಿಯುವ ನೀರು ಯೋಜನೆಗಳನ್ನು ಮಳೆಗಲದ ಮೊದಲು ಮುಕ್ತಾಯಗೊಳಿಸುವಂತೆ ಸೂಚಿಸಿದ ಸಂಸದರು, ಬೇಸಿಗೆಯಲ್ಲಿ ಟ್ಯಾಂಕರ್ ಮೂಲಕ ನೀರು ನೀಡಬೇಕಾದ ಗ್ರಾಮಗಳಲ್ಲಿ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಿ” ಎಂದರು.

”ಜಿಲ್ಲೆಯಲ್ಲಿ ನಡೆಯುತ್ತಿರುವ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಸಕಾಲದಲ್ಲಿ ಮುಕ್ತಾಯಗೊಳಿಸಿ, ಸಾರ್ವಜನಿಕರಿಗೆ ಅದರ ಪ್ರಯೋಜನ ದೊರೆಯುವಂತೆ ಕಾರ್ಯ ನಿರ್ವಹಿಸಿ” ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಸಭೆಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್. ಲಾಲಾಜಿ ಆರ್ ಮೆಂಡನ್, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಜಿಲ್ಲಾಧಿಕಾರಿ ಜಿ.ಜಗದೀಶ್, ಸಿಇಓ ಡಾ.ನವೀನ್ ಭಟ್ ಉಪಸ್ಥಿತರಿದ್ದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

13 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

16 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

17 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

17 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

17 hours ago