Featured

ಉಡುಪಿ:ಕೊರೊನಾ ಅವಧಿಯಲ್ಲಿ ಸಾವನ್ನಪ್ಪಿದ ಅಂಗನವಾಡಿ ಕೊರೊನಾ ವಾರಿಯರ್ಸ್ ಗೆ ಸರಕಾರ ಇನ್ನೂ ಪರಿಹಾರ ನೀಡಿಲ್ಲ : ಸಂಘದ ರಾಜ್ಯಾಧ್ಯಕ್ಷೆ ಆಕ್ರೋಶ -Vishwanews24

ಉಡುಪಿ: ಕೊರೊನಾ ಅವಧಿಯಲ್ಲಿ ಸಾವನ್ನಪ್ಪಿದ ಅಂಗನವಾಡಿ ಕೊರೊನಾ ವಾರಿಯರ್ಸ್ ಗೆ ಸರಕಾರ ಇನ್ನೂ ಪರಿಹಾರ ನೀಡಿಲ್ಲ : ಸಂಘದ ರಾಜ್ಯಾಧ್ಯಕ್ಷೆ ಆಕ್ರೋಶ -Vishwanews24

ಉಡುಪಿ: ಅಂಗನವಾಡಿ ನೌಕರರನ್ನು ಕೊರೊನಾ ವಾರಿಯರ್ಸ್ ಅಂತ ಕರೀತಾರೆ. ಆದ್ರೆ, ಕೊರೊನಾ ಅಟ್ಟಹಾಸದ ಅವಧಿಯಲ್ಲಿ ಸಾವನ್ನಪ್ಪಿದ ಕೊರೊನಾ ವಾರಿಯರ್ಸ್ ಗೆ ಸರಕಾರ ಇನ್ನೂ ಪರಿಹಾರ ನೀಡಿಲ್ಲ.

ಈ ತನಕ ರಾಜ್ಯದಲ್ಲಿ 27 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಸಾವನ್ನಪ್ಪಿದ್ದಾರೆ. ಆದರೆ, 26 ಮಂದಿಗೆ ಸರಕಾರ ಪರಿಹಾರ ನೀಡದೇ ನೆಪ ಹೇಳುತ್ತಿದೆ ಎಂದು ಉಡುಪಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2600 ರೂ. ಸಂಬಳ ಪಡೆಯುವ ಬಿಸಿಯೂಟ ನೌಕರರಿಗೆ ಸೆಪ್ಟೆಂಬರ್ ನಿಂದ ಸಂಬಳವೇ ನೀಡಿಲ್ಲ. ನಾಲ್ಕು ತಿಂಗಳ ಸಂಬಳ ಸರಕಾರ ಬಾಕಿ ಇರಿಸಿದೆ. ಎಲ್ಲ ಕೆಲಸಗಳನ್ನು ಮಾಡಿಸಿ ಸರಕಾರ ನಮಗೆ ಅನ್ಯಾಯ ಎಸಗಿದೆ. ಪ್ರತೀ ಬಾರಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ಮಾತ್ರ ಸಿಗುತ್ತಿದೆ.

ಬೇಡಿಕೆ ಈಡೇರದಿದ್ದರೆ ಈ ಬಾರಿ ಬಜೆಟ್ ಸೆಷನ್ ಸಂದರ್ಭ ವಿಧಾನಸೌಧ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ವರಲಕ್ಷ್ಮೀ ಎಚ್ಚರಿಸಿದರು.

ರಾಜೀನಾಮೆ ಕೊಡಿ ನಾನಿದ್ದೇನೆ ಎಂದು ಸಿದ್ದಾರ್ಥ್ ಅಣ್ಣ ನನಗೆ ಧೈರ್ಯ ತುಂಬಿದ್ದರು : ಅಣ್ಣಾಮಲೈ -Vishwanews24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago