ಉಡುಪಿ: ಅಂಗನವಾಡಿ ನೌಕರರನ್ನು ಕೊರೊನಾ ವಾರಿಯರ್ಸ್ ಅಂತ ಕರೀತಾರೆ. ಆದ್ರೆ, ಕೊರೊನಾ ಅಟ್ಟಹಾಸದ ಅವಧಿಯಲ್ಲಿ ಸಾವನ್ನಪ್ಪಿದ ಕೊರೊನಾ ವಾರಿಯರ್ಸ್ ಗೆ ಸರಕಾರ ಇನ್ನೂ ಪರಿಹಾರ ನೀಡಿಲ್ಲ.
ಈ ತನಕ ರಾಜ್ಯದಲ್ಲಿ 27 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಸಾವನ್ನಪ್ಪಿದ್ದಾರೆ. ಆದರೆ, 26 ಮಂದಿಗೆ ಸರಕಾರ ಪರಿಹಾರ ನೀಡದೇ ನೆಪ ಹೇಳುತ್ತಿದೆ ಎಂದು ಉಡುಪಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2600 ರೂ. ಸಂಬಳ ಪಡೆಯುವ ಬಿಸಿಯೂಟ ನೌಕರರಿಗೆ ಸೆಪ್ಟೆಂಬರ್ ನಿಂದ ಸಂಬಳವೇ ನೀಡಿಲ್ಲ. ನಾಲ್ಕು ತಿಂಗಳ ಸಂಬಳ ಸರಕಾರ ಬಾಕಿ ಇರಿಸಿದೆ. ಎಲ್ಲ ಕೆಲಸಗಳನ್ನು ಮಾಡಿಸಿ ಸರಕಾರ ನಮಗೆ ಅನ್ಯಾಯ ಎಸಗಿದೆ. ಪ್ರತೀ ಬಾರಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ಮಾತ್ರ ಸಿಗುತ್ತಿದೆ.
ಬೇಡಿಕೆ ಈಡೇರದಿದ್ದರೆ ಈ ಬಾರಿ ಬಜೆಟ್ ಸೆಷನ್ ಸಂದರ್ಭ ವಿಧಾನಸೌಧ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ವರಲಕ್ಷ್ಮೀ ಎಚ್ಚರಿಸಿದರು.
ರಾಜೀನಾಮೆ ಕೊಡಿ ನಾನಿದ್ದೇನೆ ಎಂದು ಸಿದ್ದಾರ್ಥ್ ಅಣ್ಣ ನನಗೆ ಧೈರ್ಯ ತುಂಬಿದ್ದರು : ಅಣ್ಣಾಮಲೈ -Vishwanews24
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…