ಉಡುಪಿ: ಎರಡು ದಿನ ಹಿಂದಷ್ಟೇ ಅಯೋಧ್ಯೆಯ ರಾಮ ಮಂದಿರದಲ್ಲಿ ಧರ್ಮ ಧ್ವಜ ಸ್ಥಾಪಿಸಿದ್ದ ಪ್ರಧಾನಿ ಮೋದಿಇವತ್ತು ಕೃಷ್ಣನೂರು ಉಡುಪಿಗೆ ಬರುತ್ತಿದ್ದಾರೆ. ಕೃಷ್ಣಮಠದ ವಿಶ್ವಪರ್ಯಾಯ ನಡೆಯುತ್ತಿದ್ದು, ಇದರ ಭಾಗವಾಗಿ ಲಕ್ಷ ಕಂಠ ಗೀತಾ ಪರಾಯಣ ಹಮ್ಮಿಕೊಳ್ಳಲಾಗಿದೆ. ಅಂದರೆ ಒಂದು ಲಕ್ಷಕ್ಕೂ ಹೆಚ್ಚು ಜನ ಭಕ್ತರು ಇಂದು ಕೃಷ್ಣಮಠದ ಕಾರ್ಯಕ್ರಮದಲ್ಲಿ ಭಗವದ್ಗೀತೆ ಪಠಿಸಲಿದ್ದಾರೆ. ಇದೇ ಐತಿಹಾಸಿಕ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಸಾಕ್ಷಿ ಆಗಲಿದ್ದಾರೆ. ಸ್ವತಃ ಮೋದಿಯೇ ಭಗವದ್ಗೀತೆಯ 15 ನೇ ಅಧ್ಯಾಯದ ಶ್ಲೋಕಗಳನ್ನು ಪಠಿಸಲಿದ್ದಾರೆ. ಗೀತೆಯಲ್ಲಿ ಹೆಚ್ಚಿನ ಮಹತ್ವ ಹೊಂದಿರುವ 15 ನೇ ಅಧ್ಯಾಯದ ಕೊನೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ..
ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ
ಬೆಳಗ್ಗೆ 11:05ಕ್ಕೆ ಪ್ರಧಾನಿ ಮೋದಿ ಮಂಗಳೂರಿಗೆ ಆಗಮನ
ಬೆಳಗ್ಗೆ 11:15ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ
ಬೆಳಗ್ಗೆ 11:30ಕ್ಕೆ ಉಡುಪಿಯ ಹೆಲಿಪ್ಯಾಡ್ಗೆ ಪ್ರಧಾನಿ ಆಗಮನ
ಬೆಳಗ್ಗೆ 11:40ರಿಂದ ಮಧ್ಯಾಹ್ನ 12 ಗಂಟೆಯವರೆಗೆ ರೋಡ್ ಶೋ (ಬನ್ನಂಜೆ ವೃತ್ತದಿಂದ ಕಲ್ಸಂಕ ಜಂಕ್ಷನ್ ವರೆಗೆ)
ಮಧ್ಯಾಹ್ನ 12:00 ಗಂಟೆಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ , ಸ್ವರ್ಣ ಲೇಪಿತ ತೀರ್ಥ ಮಂಟಪ ಮೋದಿಯಿಂದ ಉದ್ಘಾಟನೆ
ಮಧ್ಯಾಹ್ನ 1ಗಂಟೆಗೆ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿಯಿಂದ ಭಾಷಣ
ಸ್ವರ್ಣ ಲೇಪಿತ ತೀರ್ಥ ಮಂಟಪವನ್ನು ಮೋದಿ ಉದ್ಘಾಟಿಸಲಿದ್ದಾರೆ. ಪುತ್ತಿಗೆ ಸ್ವಾಮೀಜಿಯವರ ಸನ್ಯಾಸ ಜೀವನದ 50ನೇ ವರ್ಷ ಪೂರ್ಣಗೊಂಡ ಹಿನ್ನೆಲೆ 2 ಕೋಟಿ ರೂ. ವೆಚ್ಚದಲ್ಲಿ ತೀರ್ಥ ಮಂಟಪಕ್ಕೆ ಸ್ವರ್ಣ ಲೇಪನ ಮಾಡಲಾಗಿದ್ದು, ಇದು ಇವತ್ತು ಉದ್ಘಾಟನೆಯಾಗಲಿದೆ. ನಂತರ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನ ಮಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.
ಪ್ರಧಾನಿ ಮೋದಿಯನ್ನ ಸ್ವಾಗತಿಸಲು ಉಡುಪಿ ಸಜ್ಜಾಗಿ ನಿಂತಿದ್ದು, ಪ್ರಧಾನಿ ಮೋದಿ ಕೂಡ ಈ ಬಗ್ಗೆ ಕನ್ನಡದಲ್ಲೇ ಎಕ್ಸ್ ಸಂದೇಶ ಪ್ರಕಟಿಸಿ ಮಾಡಿ ಸಂತಸ ಹಂಚಿಕೊಂಡಿದ್ದಾರೆ.
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ನರೇಂದ್ರ ಮೋದಿ ಉಲ್ಲೇಖಿಸಿದ್ದಾರೆ.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಉಡುಪಿ ನಗರದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಮಠದ ಆಸುಪಾಸಿನ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…