ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಅಂದು ಬೆಳಗ್ಗೆ9 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಉಡುಪಿ ನಗರದಲ್ಲಿ ವಾಹನ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಆದಿ ಉಡುಪಿ ಹೆಲಿಪ್ಯಾಡ್ ನಿಂದ ಕರಾವಳಿ ಜಂಕ್ಷನ್ -ಬನ್ನಂಜೆ-ಶಿರಿಬೀಡು-ಕಲ್ಸಂಕ-ಶ್ರೀ ಕೃಷ್ಣ ಮಠದವರೆಗೆ ಯಾವುದೇ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಿದೆ.
ಮಣಿಪಾಲದಿಂದ ಉಡುಪಿ ಕಡೆಗೆ ಬರುವ ಎಲ್ಲಾ ವಾಹನಗಳು ಶಾರದಾ ಕಲ್ಯಾಣ ಮಂಟಪ-ಬೀಡಿನಗುಡ್ಡೆ ಮಾರ್ಗವಾಗಿ ಉಡುಪಿಗೆ ಬರುವುದು. ಕುಂದಾಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕರಾವಳಿ ಫೈ ಓರ್ವ- ಅಂಬಲಪಾಡಿ -ಬ್ರಹ್ಮಗಿರಿ-ಜೋಡುಕಟ್ಟೆ ಮಾರ್ಗವಾಗಿ ಉಡುಪಿಗೆ ಬರುವುದು.
ಮಂಗಳೂರಿನಿಂದ ಉಡುಪಿ ಕಡೆಗೆ ಬರುವ ವಾಹನಗಳು ಕಿನ್ನಿಮುಲ್ಕಿ ಸ್ವಾಗತಗೋಪುರ-ಜೋಡುಕಟ್ಟೆ- ಮಾರ್ಗವಾಗಿ ಉಡುಪಿಗೆ ಬರುವುದು.
ಅಂಬಾಗಿಲಿನಿಂದ ಗುಂಡಿಬೈಲ್ ಮಾರ್ಗವಾಗಿ ಉಡುಪಿಗೆ ಬರುವ ಎಲ್ಲಾ ವಾಹನಗಳು ಗುಂಡಿಬೈಲ್ ರಸಿಕಾ ಬಾರ್ ಮುಖೇನಾ ದೊಡ್ಡಣಗುಡ್ಡೆ-ಎಂಜಿಎಂ-ಎಸ್ಕೆಎಂ-ಬೀಡಿನಗು ಡ ಮುಖೇನ ಉಡುಪಿಗೆ ಬರುವುದು.
ಮಲ್ಪೆಯಿಂದ ಬರುವ ಎಲ್ಲಾ ವಾಹನಗಳು ಕುತ್ಪಾಡಿ ಮಾರ್ಗವಾಗಿ ಅಂಬಲಪಾಡಿ ಮುಖೇನಾ ಉಡುಪಿಗೆ ಬರುವುದು. ಈ ನಿಷೇಧವು ವಿವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…