ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಅಂದು ಬೆಳಗ್ಗೆ9 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಉಡುಪಿ ನಗರದಲ್ಲಿ ವಾಹನ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಆದಿ ಉಡುಪಿ ಹೆಲಿಪ್ಯಾಡ್ ನಿಂದ ಕರಾವಳಿ ಜಂಕ್ಷನ್ -ಬನ್ನಂಜೆ-ಶಿರಿಬೀಡು-ಕಲ್ಸಂಕ-ಶ್ರೀ ಕೃಷ್ಣ ಮಠದವರೆಗೆ ಯಾವುದೇ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಿದೆ.
ಮಣಿಪಾಲದಿಂದ ಉಡುಪಿ ಕಡೆಗೆ ಬರುವ ಎಲ್ಲಾ ವಾಹನಗಳು ಶಾರದಾ ಕಲ್ಯಾಣ ಮಂಟಪ-ಬೀಡಿನಗುಡ್ಡೆ ಮಾರ್ಗವಾಗಿ ಉಡುಪಿಗೆ ಬರುವುದು. ಕುಂದಾಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕರಾವಳಿ ಫೈ ಓರ್ವ- ಅಂಬಲಪಾಡಿ -ಬ್ರಹ್ಮಗಿರಿ-ಜೋಡುಕಟ್ಟೆ ಮಾರ್ಗವಾಗಿ ಉಡುಪಿಗೆ ಬರುವುದು.
ಮಂಗಳೂರಿನಿಂದ ಉಡುಪಿ ಕಡೆಗೆ ಬರುವ ವಾಹನಗಳು ಕಿನ್ನಿಮುಲ್ಕಿ ಸ್ವಾಗತಗೋಪುರ-ಜೋಡುಕಟ್ಟೆ- ಮಾರ್ಗವಾಗಿ ಉಡುಪಿಗೆ ಬರುವುದು.
ಅಂಬಾಗಿಲಿನಿಂದ ಗುಂಡಿಬೈಲ್ ಮಾರ್ಗವಾಗಿ ಉಡುಪಿಗೆ ಬರುವ ಎಲ್ಲಾ ವಾಹನಗಳು ಗುಂಡಿಬೈಲ್ ರಸಿಕಾ ಬಾರ್ ಮುಖೇನಾ ದೊಡ್ಡಣಗುಡ್ಡೆ-ಎಂಜಿಎಂ-ಎಸ್ಕೆಎಂ-ಬೀಡಿನಗು ಡ ಮುಖೇನ ಉಡುಪಿಗೆ ಬರುವುದು.
ಮಲ್ಪೆಯಿಂದ ಬರುವ ಎಲ್ಲಾ ವಾಹನಗಳು ಕುತ್ಪಾಡಿ ಮಾರ್ಗವಾಗಿ ಅಂಬಲಪಾಡಿ ಮುಖೇನಾ ಉಡುಪಿಗೆ ಬರುವುದು. ಈ ನಿಷೇಧವು ವಿವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…