Featured

ಉಡುಪಿಗೆ ಪ್ರಧಾನಿ ಮೋದಿ ಭೇಟಿ : ನ. 28ರಂದು ವಾಹನ ಸಂಚಾರ ವ್ಯತ್ಯಯ – vishwanews24

ಉಡುಪಿಗೆ ಪ್ರಧಾನಿ ಮೋದಿ ಭೇಟಿ : ನ. 28ರಂದು ವಾಹನ ಸಂಚಾರ ವ್ಯತ್ಯಯ

ಬೆಳಗ್ಗೆ 9 ರಿಂದಲೇ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧ

ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಅಂದು ಬೆಳಗ್ಗೆ9 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಉಡುಪಿ ನಗರದಲ್ಲಿ ವಾಹನ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಆದಿ ಉಡುಪಿ ಹೆಲಿಪ್ಯಾಡ್ ನಿಂದ ಕರಾವಳಿ ಜಂಕ್ಷನ್ -ಬನ್ನಂಜೆ-ಶಿರಿಬೀಡು-ಕಲ್ಸಂಕ-ಶ್ರೀ ಕೃಷ್ಣ ಮಠದವರೆಗೆ ಯಾವುದೇ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಿದೆ.

ಮಣಿಪಾಲದಿಂದ ಉಡುಪಿ ಕಡೆಗೆ ಬರುವ ಎಲ್ಲಾ ವಾಹನಗಳು ಶಾರದಾ ಕಲ್ಯಾಣ ಮಂಟಪ-ಬೀಡಿನಗುಡ್ಡೆ ಮಾರ್ಗವಾಗಿ ಉಡುಪಿಗೆ ಬರುವುದು. ಕುಂದಾಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕರಾವಳಿ ಫೈ ಓರ್ವ- ಅಂಬಲಪಾಡಿ -ಬ್ರಹ್ಮಗಿರಿ-ಜೋಡುಕಟ್ಟೆ ಮಾರ್ಗವಾಗಿ ಉಡುಪಿಗೆ ಬರುವುದು.

ಮಂಗಳೂರಿನಿಂದ ಉಡುಪಿ ಕಡೆಗೆ ಬರುವ ವಾಹನಗಳು ಕಿನ್ನಿಮುಲ್ಕಿ ಸ್ವಾಗತಗೋಪುರ-ಜೋಡುಕಟ್ಟೆ- ಮಾರ್ಗವಾಗಿ ಉಡುಪಿಗೆ ಬರುವುದು.

ಅಂಬಾಗಿಲಿನಿಂದ ಗುಂಡಿಬೈಲ್ ಮಾರ್ಗವಾಗಿ ಉಡುಪಿಗೆ ಬರುವ ಎಲ್ಲಾ ವಾಹನಗಳು ಗುಂಡಿಬೈಲ್ ರಸಿಕಾ ಬಾರ್ ಮುಖೇನಾ ದೊಡ್ಡಣಗುಡ್ಡೆ-ಎಂಜಿಎಂ-ಎಸ್ಕೆಎಂ-ಬೀಡಿನಗು ಡ ಮುಖೇನ ಉಡುಪಿಗೆ ಬರುವುದು.

ಮಲ್ಪೆಯಿಂದ ಬರುವ ಎಲ್ಲಾ ವಾಹನಗಳು ಕುತ್ಪಾಡಿ ಮಾರ್ಗವಾಗಿ ಅಂಬಲಪಾಡಿ ಮುಖೇನಾ ಉಡುಪಿಗೆ ಬರುವುದು. ಈ ನಿಷೇಧವು ವಿವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

13 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

13 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago