ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಅಂದು ಬೆಳಗ್ಗೆ9 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಉಡುಪಿ ನಗರದಲ್ಲಿ ವಾಹನ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಆದಿ ಉಡುಪಿ ಹೆಲಿಪ್ಯಾಡ್ ನಿಂದ ಕರಾವಳಿ ಜಂಕ್ಷನ್ -ಬನ್ನಂಜೆ-ಶಿರಿಬೀಡು-ಕಲ್ಸಂಕ-ಶ್ರೀ ಕೃಷ್ಣ ಮಠದವರೆಗೆ ಯಾವುದೇ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಿದೆ.
ಮಣಿಪಾಲದಿಂದ ಉಡುಪಿ ಕಡೆಗೆ ಬರುವ ಎಲ್ಲಾ ವಾಹನಗಳು ಶಾರದಾ ಕಲ್ಯಾಣ ಮಂಟಪ-ಬೀಡಿನಗುಡ್ಡೆ ಮಾರ್ಗವಾಗಿ ಉಡುಪಿಗೆ ಬರುವುದು. ಕುಂದಾಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕರಾವಳಿ ಫೈ ಓರ್ವ- ಅಂಬಲಪಾಡಿ -ಬ್ರಹ್ಮಗಿರಿ-ಜೋಡುಕಟ್ಟೆ ಮಾರ್ಗವಾಗಿ ಉಡುಪಿಗೆ ಬರುವುದು.
ಮಂಗಳೂರಿನಿಂದ ಉಡುಪಿ ಕಡೆಗೆ ಬರುವ ವಾಹನಗಳು ಕಿನ್ನಿಮುಲ್ಕಿ ಸ್ವಾಗತಗೋಪುರ-ಜೋಡುಕಟ್ಟೆ- ಮಾರ್ಗವಾಗಿ ಉಡುಪಿಗೆ ಬರುವುದು.
ಅಂಬಾಗಿಲಿನಿಂದ ಗುಂಡಿಬೈಲ್ ಮಾರ್ಗವಾಗಿ ಉಡುಪಿಗೆ ಬರುವ ಎಲ್ಲಾ ವಾಹನಗಳು ಗುಂಡಿಬೈಲ್ ರಸಿಕಾ ಬಾರ್ ಮುಖೇನಾ ದೊಡ್ಡಣಗುಡ್ಡೆ-ಎಂಜಿಎಂ-ಎಸ್ಕೆಎಂ-ಬೀಡಿನಗು ಡ ಮುಖೇನ ಉಡುಪಿಗೆ ಬರುವುದು.
ಮಲ್ಪೆಯಿಂದ ಬರುವ ಎಲ್ಲಾ ವಾಹನಗಳು ಕುತ್ಪಾಡಿ ಮಾರ್ಗವಾಗಿ ಅಂಬಲಪಾಡಿ ಮುಖೇನಾ ಉಡುಪಿಗೆ ಬರುವುದು. ಈ ನಿಷೇಧವು ವಿವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…
ಪಾಸ್ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…