ಉಡುಪಿ

ಉಡುಪಿಗೆ ಬರಲಿದೆ ಸಾಯಿಬಾಬಾರ ಮೂಲ ಪಾದುಕೆ, ಭಕ್ತರಿಗೆ ಸಿಗಲಿದೆ ದರ್ಶನ ಭಾಗ್ಯ.

ಉಡುಪಿ, : ಶಿರಡಿ ಸಾಯಿಬಾಬಾರ ಮೂಲ ಸಂಸ್ಥಾನದಲ್ಲಿ ಸಮಾಧಿಗೆ 100 ವರ್ಷ ತುಂಬಿದ ಪ್ರಯುಕ್ತ ಸಾಯಿಬಾಬಾ ಧರಿಸಿದ ಪಾದುಕೆ ಯನ್ನು ದೇಶದ ಆಯ್ದ ಭಾಗಗಳಲ್ಲಿ ಸಾರ್ವಜನಿಕರ ಹಾಗೂ ಭಕ್ತರ ವೀಕ್ಷಣೆಗಾಗಿ ‘ಪಾದುಕಾ ದರ್ಶನಂ’ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದು ಮೇ 24 ಮತ್ತು 25ರಂದು ಉಡುಪಿಯಲ್ಲಿರುತ್ತದೆ ಎಂದು ಶ್ರೀಸಾಯಿಬಾಬಾ ಪಾದುಕಾ ದರ್ಶನ ವ್ಯವಸ್ಥಾಪನಾ ಸಮಿತಿಯ ಕಾರ್ಯಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.
ಕೊಡವೂರಿನ ಸಾಯಿಬಾಬಾ ನಗರದ ತೋಟದಮನೆಯಲ್ಲಿರುವ ಶಿರಡಿ ಶ್ರೀಸಾಯಿಬಾಬಾ ಮಂದಿರದಲ್ಲಿ  ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಉಡುಪಿಯಲ್ಲಿ ಪ್ರಥಮ ಬಾರಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಶಿರಡಿ ಸಾಯಿಬಾಬಾ ಅವರ ಮೂಲ ಪಾದುಕೆಯನ್ನು ಮೇ 24ರ ಸಂಜೆ 4 ಗಂಟೆಗೆ ಉಡುಪಿಯ ಜೋಡುಕಟ್ಟೆಯಲ್ಲಿ ಸ್ವಾಗತಿಸಿ ವೈಭವದ ಮೆರವಣಿಗೆಯಲ್ಲಿ ಕೊಡವೂರಿನ ಸಾಯಿಬಾಬ ಮಂದಿರಕ್ಕೆ ಕೊಂಡೊಯ್ಯಲಾಗುವುದು ಎಂದವರು ನುಡಿದರು.
ಮೆರವಣಿ ಜೋಡುಕಟ್ಟೆಯಿಂದ ಡಯಾನ ಸರ್ಕಲ್, ಕೆಎಂ ಮಾರ್ಗದ ಮೂಲಕ ಸರ್ವಿಸ್ ಬಸ್‌ನಿಲ್ದಾಣ, ಕಿದಿಯೂರು ಹೊಟೇಲ್, ಬನ್ನಂಜೆ ರಸ್ತೆಯಾಗಿ ಕರಾವಳಿ ಜಂಕ್ಷನ್‌ನಿಂದ ಆದಿಉಡುಪಿಗೆ ಆಗಮಿಸಿ ಅಲ್ಲಿಂದ ಕಾಲುನಡಿಗೆಯ ಮೆರವಣಿಗೆ ಮೂಲಕ ಕೊಡವೂರಿನ ಸಾಯಿಬಾಬಾ ಮಂದಿರಕ್ಕೆ ಬರಲಿದೆ ಎಂದರು.
ಮೆರವಣಿಗೆಯಲ್ಲಿ ಹಲವು ಭಜನಾ ತಂಡಗಳು, ಬಿರುದಾವಳಿ, ಸಾರೋಟು, ಶಂಖ ಜಾಗಟೆ, ಕೊಂಬು, ಡೋಲು ವಾದನ, ನಾಸಿಕ್ ಬ್ಯಾಂಡ್, ಚಿತ್ರದುರ್ಗದ ವಾದ್ಯ ಸಂಗೀತ, ಚಂಡೆವಾದನ, ನಾಗಸ್ವರಗಳಿರುತ್ತವೆ. ಸಾಯಿಬಾಬ ಮಂದಿರದಲ್ಲಿ ರಾತ್ರಿ 8ಗಂಟೆಯಿಂದ 10ರವರೆಗೆ ಪಾದುಕಾ ದರ್ಶನವಿರುತ್ತದೆ ಎಂದರು.
ಮರುದಿನ ಮೇ 25ರಂದು ಶುಕ್ರವಾರ ಬೆಳಗ್ಗೆ 8:00ರಿಂದ ರಾತ್ರಿ 10:00 ಗಂಟೆಯವರೆಗೆ ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಯಿಬಾಬರ ಪಾದುಕೆ ದರ್ಶನ ಲಭ್ಯವಿರುತ್ತದೆ. ಅಲ್ಲದೇ ಭಜನೆ, ಧಾರ್ಮಿಕ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮಗಳು ಸಹ ನಡೆಯಲಿದೆ ಎಂದು ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಅಧ್ಯಕ್ಷ ಮನೋಹರ ಶೆಟ್ಟಿ ಬಿಡುಗಡೆಗೊಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೊಡವೂರು ದಿವಾಕರ ಶೆಟ್ಟಿ,ಗುರೂಜಿ ಸಾಯಿ ಈಶ್ವರ್ , ಈಶ್ವರ ಶೆಟ್ಟಿ ಚಿಟ್ಪಾಡಿ, ದೇವದಾಸ ಸುವರ್ಣ ಕಡೆಕಾರು, ಹರ್ಷ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
Vishwa News 24

Recent Posts

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

17 minutes ago

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  – vishwanews24

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  ಉಡುಪಿ :…

34 minutes ago

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ – vishwanews24

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…

42 minutes ago

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…

54 minutes ago

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…

1 hour ago

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ – vishwanews24

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ  ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…

1 hour ago