ಉಡುಪಿ

ಉಡುಪಿಗೆ ಬರಲಿದೆ ಸಾಯಿಬಾಬಾರ ಮೂಲ ಪಾದುಕೆ, ಭಕ್ತರಿಗೆ ಸಿಗಲಿದೆ ದರ್ಶನ ಭಾಗ್ಯ.

ಉಡುಪಿ, : ಶಿರಡಿ ಸಾಯಿಬಾಬಾರ ಮೂಲ ಸಂಸ್ಥಾನದಲ್ಲಿ ಸಮಾಧಿಗೆ 100 ವರ್ಷ ತುಂಬಿದ ಪ್ರಯುಕ್ತ ಸಾಯಿಬಾಬಾ ಧರಿಸಿದ ಪಾದುಕೆ ಯನ್ನು ದೇಶದ ಆಯ್ದ ಭಾಗಗಳಲ್ಲಿ ಸಾರ್ವಜನಿಕರ ಹಾಗೂ ಭಕ್ತರ ವೀಕ್ಷಣೆಗಾಗಿ ‘ಪಾದುಕಾ ದರ್ಶನಂ’ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದು ಮೇ 24 ಮತ್ತು 25ರಂದು ಉಡುಪಿಯಲ್ಲಿರುತ್ತದೆ ಎಂದು ಶ್ರೀಸಾಯಿಬಾಬಾ ಪಾದುಕಾ ದರ್ಶನ ವ್ಯವಸ್ಥಾಪನಾ ಸಮಿತಿಯ ಕಾರ್ಯಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.
ಕೊಡವೂರಿನ ಸಾಯಿಬಾಬಾ ನಗರದ ತೋಟದಮನೆಯಲ್ಲಿರುವ ಶಿರಡಿ ಶ್ರೀಸಾಯಿಬಾಬಾ ಮಂದಿರದಲ್ಲಿ  ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಉಡುಪಿಯಲ್ಲಿ ಪ್ರಥಮ ಬಾರಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಶಿರಡಿ ಸಾಯಿಬಾಬಾ ಅವರ ಮೂಲ ಪಾದುಕೆಯನ್ನು ಮೇ 24ರ ಸಂಜೆ 4 ಗಂಟೆಗೆ ಉಡುಪಿಯ ಜೋಡುಕಟ್ಟೆಯಲ್ಲಿ ಸ್ವಾಗತಿಸಿ ವೈಭವದ ಮೆರವಣಿಗೆಯಲ್ಲಿ ಕೊಡವೂರಿನ ಸಾಯಿಬಾಬ ಮಂದಿರಕ್ಕೆ ಕೊಂಡೊಯ್ಯಲಾಗುವುದು ಎಂದವರು ನುಡಿದರು.
ಮೆರವಣಿ ಜೋಡುಕಟ್ಟೆಯಿಂದ ಡಯಾನ ಸರ್ಕಲ್, ಕೆಎಂ ಮಾರ್ಗದ ಮೂಲಕ ಸರ್ವಿಸ್ ಬಸ್‌ನಿಲ್ದಾಣ, ಕಿದಿಯೂರು ಹೊಟೇಲ್, ಬನ್ನಂಜೆ ರಸ್ತೆಯಾಗಿ ಕರಾವಳಿ ಜಂಕ್ಷನ್‌ನಿಂದ ಆದಿಉಡುಪಿಗೆ ಆಗಮಿಸಿ ಅಲ್ಲಿಂದ ಕಾಲುನಡಿಗೆಯ ಮೆರವಣಿಗೆ ಮೂಲಕ ಕೊಡವೂರಿನ ಸಾಯಿಬಾಬಾ ಮಂದಿರಕ್ಕೆ ಬರಲಿದೆ ಎಂದರು.
ಮೆರವಣಿಗೆಯಲ್ಲಿ ಹಲವು ಭಜನಾ ತಂಡಗಳು, ಬಿರುದಾವಳಿ, ಸಾರೋಟು, ಶಂಖ ಜಾಗಟೆ, ಕೊಂಬು, ಡೋಲು ವಾದನ, ನಾಸಿಕ್ ಬ್ಯಾಂಡ್, ಚಿತ್ರದುರ್ಗದ ವಾದ್ಯ ಸಂಗೀತ, ಚಂಡೆವಾದನ, ನಾಗಸ್ವರಗಳಿರುತ್ತವೆ. ಸಾಯಿಬಾಬ ಮಂದಿರದಲ್ಲಿ ರಾತ್ರಿ 8ಗಂಟೆಯಿಂದ 10ರವರೆಗೆ ಪಾದುಕಾ ದರ್ಶನವಿರುತ್ತದೆ ಎಂದರು.
ಮರುದಿನ ಮೇ 25ರಂದು ಶುಕ್ರವಾರ ಬೆಳಗ್ಗೆ 8:00ರಿಂದ ರಾತ್ರಿ 10:00 ಗಂಟೆಯವರೆಗೆ ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಯಿಬಾಬರ ಪಾದುಕೆ ದರ್ಶನ ಲಭ್ಯವಿರುತ್ತದೆ. ಅಲ್ಲದೇ ಭಜನೆ, ಧಾರ್ಮಿಕ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮಗಳು ಸಹ ನಡೆಯಲಿದೆ ಎಂದು ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಅಧ್ಯಕ್ಷ ಮನೋಹರ ಶೆಟ್ಟಿ ಬಿಡುಗಡೆಗೊಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೊಡವೂರು ದಿವಾಕರ ಶೆಟ್ಟಿ,ಗುರೂಜಿ ಸಾಯಿ ಈಶ್ವರ್ , ಈಶ್ವರ ಶೆಟ್ಟಿ ಚಿಟ್ಪಾಡಿ, ದೇವದಾಸ ಸುವರ್ಣ ಕಡೆಕಾರು, ಹರ್ಷ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

13 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

14 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

15 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

16 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

16 hours ago