Featured

ಉಡುಪಿಗೆ 100 ಹಾಸಿಗೆ ಸಾಮರ್ಥ್ಯದ ಇಎಸ್‌ಐ ಆಸ್ಪತ್ರೆ ಮಂಜೂರು – Vishwanews24

ಉಡುಪಿಗೆ 100 ಹಾಸಿಗೆ ಸಾಮರ್ಥ್ಯದ ಇಎಸ್‌ಐ ಆಸ್ಪತ್ರೆ ಮಂಜೂರು

ಉಡುಪಿ: ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ ದೇಶದಾದ್ಯಂತ 23 ಇಎಸ್‌ಐ ಆಸ್ಪತ್ರೆಗಳನ್ನು ಮಂಜೂರು ಮಾಡಿದ್ದು, ಇವುಗಳಲ್ಲಿ ಉಡುಪಿಗೂ 100 ಹಾಸಿಗೆ ಸಾಮರ್ಥ್ಯದ ಇಎಸ್‌ಐ ಆಸ್ಪತ್ರೆಯೊಂದು ಮಂಜೂರುಗೊಂಡಿದೆ. ಇದರೊಂದಿಗೆ ದೇಶಾದ್ಯಂತ 62 ನೂತನ ಡಿಸ್ಪೆಸ್ಸರಿಗಳನ್ನು ಸಹ ಪ್ರಾರಂಭಿಸಲಾಗುತ್ತದೆ.

ಇಎಸ್‌ಐಸಿಯ 188ನೇ ಸಭೆಯಲ್ಲಿ ಒಟ್ಟು 23 ನೂತನ ಇಎಸ್‌ಐ ಆಸ್ಪತ್ರೆಗಳಿಗೆ ಅನುಮತಿ ನೀಡಲಾಗಿದ್ದು, ಇವುಗಳಲ್ಲಿ ಎರಡು ಆಸ್ಪತ್ರೆಗಳು ಕರ್ನಾಟಕಕ್ಕೆ ಸಂದಿವೆ. ಉಡುಪಿಯಲ್ಲದೇ, ತುಮಕೂರು ಜಿಲ್ಲೆಗೂ 100 ಹಾಸಿಗೆ ಸಾಮರ್ಥ್ಯದ ಇಎಸ್‌ಐ ಆಸ್ಪತ್ರೆಯನ್ನು ಮಂಜೂರು ಮಾಡಲಾಗಿದೆ.

ಮಹಾರಾಷ್ಟ್ರಕ್ಕೆ ಒಟ್ಟು ಆರು ಇಎಸ್‌ಐ ಆಸ್ಪತ್ರೆಗಳು ಮಂಜೂರಾಗಿದ್ದರೆ, ಹರ್ಯಾಣ ರಾಜ್ಯಕ್ಕೆ ನಾಲ್ಕನ್ನು ನೀಡಲಾಗಿದೆ. ಉತ್ತರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಿಗೂ ತಲಾ ಎರಡನ್ನು ಮಂಜೂರು ಮಾಡಲಾಗಿದೆ. ಪಶ್ಚಿಮ ಬಂಗಾಳ, ಒಡಿಶಾ, ಗುಜರಾತ್, ಗೋವಾ, ಛತ್ತೀಸ್‌ಗಢ, ಆಂಧ್ರ ಪ್ರದೇಶ, ಮಧ್ಯಪ್ರದೇಶಗಳಿಗೆ ತಲಾ ಒಂದು ಇಎಸ್‌ಐ ಆಸ್ಪತ್ರೆ ಮಂಜೂರಾಗಿದೆ.

ಉಡುಪಿಗೆ ಮಂಜೂರಾಗಿರುವ ಇಎಸ್‌ಐ ಆಸ್ಪತ್ರೆಯನ್ನು ಇಎಸ್‌ಐ ಕಾರ್ಪೋರೇಷನ್ ನಡೆಸಿದರೆ, ತುಮಕೂರಿನ ಇಎಸ್‌ಐ ಆಸ್ಪತ್ರೆಯನ್ನು ರಾಜ್ಯ ಸರಕಾರ ನಿರ್ವಹಿಸಲು ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ಹರ್ಯಾಣದ ನಾಲ್ಕು, ಛತ್ತೀಸ್‌ಗಢ ಮತ್ತು ಒರಿಸ್ಸಾ ಆಸ್ಪತ್ರೆಗಳನ್ನು ಆಯಾ ರಾಜ್ಯ ಸರಕಾರ ನಿರ್ವಹಿಸಲಿವೆ.

ಇಎಸ್‌ಐ ಆಸ್ಪತ್ರೆ ಉಡುಪಿ ಭಾಗದ ಜನತೆಯ ಹಲವಾರು ವರ್ಷಗಳ ಬೇಡಿಕೆಯಾಗಿದ್ದು, ಇದೀಗ ಉಡುಪಿಗೆ 100 ಬೆಡ್ ಸಾಮರ್ಥ್ಯದ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಿದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭುಪೇಂದ್ರ ಯಾದವ್ ಅವರಿಗೆ, ಈ ಬಗ್ಗೆ ಶ್ರಮಿಸಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೃತಜ್ಞತೆ ಸಲ್ಲಿಸಿದ್ದಾರೆ.

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

5 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

5 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

6 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

6 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

7 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

7 hours ago