Featured

ಉಡುಪಿಗೆ 100 ಹಾಸಿಗೆ ಸಾಮರ್ಥ್ಯದ ಇಎಸ್‌ಐ ಆಸ್ಪತ್ರೆ ಮಂಜೂರು – Vishwanews24

ಉಡುಪಿಗೆ 100 ಹಾಸಿಗೆ ಸಾಮರ್ಥ್ಯದ ಇಎಸ್‌ಐ ಆಸ್ಪತ್ರೆ ಮಂಜೂರು

ಉಡುಪಿ: ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ ದೇಶದಾದ್ಯಂತ 23 ಇಎಸ್‌ಐ ಆಸ್ಪತ್ರೆಗಳನ್ನು ಮಂಜೂರು ಮಾಡಿದ್ದು, ಇವುಗಳಲ್ಲಿ ಉಡುಪಿಗೂ 100 ಹಾಸಿಗೆ ಸಾಮರ್ಥ್ಯದ ಇಎಸ್‌ಐ ಆಸ್ಪತ್ರೆಯೊಂದು ಮಂಜೂರುಗೊಂಡಿದೆ. ಇದರೊಂದಿಗೆ ದೇಶಾದ್ಯಂತ 62 ನೂತನ ಡಿಸ್ಪೆಸ್ಸರಿಗಳನ್ನು ಸಹ ಪ್ರಾರಂಭಿಸಲಾಗುತ್ತದೆ.

ಇಎಸ್‌ಐಸಿಯ 188ನೇ ಸಭೆಯಲ್ಲಿ ಒಟ್ಟು 23 ನೂತನ ಇಎಸ್‌ಐ ಆಸ್ಪತ್ರೆಗಳಿಗೆ ಅನುಮತಿ ನೀಡಲಾಗಿದ್ದು, ಇವುಗಳಲ್ಲಿ ಎರಡು ಆಸ್ಪತ್ರೆಗಳು ಕರ್ನಾಟಕಕ್ಕೆ ಸಂದಿವೆ. ಉಡುಪಿಯಲ್ಲದೇ, ತುಮಕೂರು ಜಿಲ್ಲೆಗೂ 100 ಹಾಸಿಗೆ ಸಾಮರ್ಥ್ಯದ ಇಎಸ್‌ಐ ಆಸ್ಪತ್ರೆಯನ್ನು ಮಂಜೂರು ಮಾಡಲಾಗಿದೆ.

ಮಹಾರಾಷ್ಟ್ರಕ್ಕೆ ಒಟ್ಟು ಆರು ಇಎಸ್‌ಐ ಆಸ್ಪತ್ರೆಗಳು ಮಂಜೂರಾಗಿದ್ದರೆ, ಹರ್ಯಾಣ ರಾಜ್ಯಕ್ಕೆ ನಾಲ್ಕನ್ನು ನೀಡಲಾಗಿದೆ. ಉತ್ತರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಿಗೂ ತಲಾ ಎರಡನ್ನು ಮಂಜೂರು ಮಾಡಲಾಗಿದೆ. ಪಶ್ಚಿಮ ಬಂಗಾಳ, ಒಡಿಶಾ, ಗುಜರಾತ್, ಗೋವಾ, ಛತ್ತೀಸ್‌ಗಢ, ಆಂಧ್ರ ಪ್ರದೇಶ, ಮಧ್ಯಪ್ರದೇಶಗಳಿಗೆ ತಲಾ ಒಂದು ಇಎಸ್‌ಐ ಆಸ್ಪತ್ರೆ ಮಂಜೂರಾಗಿದೆ.

ಉಡುಪಿಗೆ ಮಂಜೂರಾಗಿರುವ ಇಎಸ್‌ಐ ಆಸ್ಪತ್ರೆಯನ್ನು ಇಎಸ್‌ಐ ಕಾರ್ಪೋರೇಷನ್ ನಡೆಸಿದರೆ, ತುಮಕೂರಿನ ಇಎಸ್‌ಐ ಆಸ್ಪತ್ರೆಯನ್ನು ರಾಜ್ಯ ಸರಕಾರ ನಿರ್ವಹಿಸಲು ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ಹರ್ಯಾಣದ ನಾಲ್ಕು, ಛತ್ತೀಸ್‌ಗಢ ಮತ್ತು ಒರಿಸ್ಸಾ ಆಸ್ಪತ್ರೆಗಳನ್ನು ಆಯಾ ರಾಜ್ಯ ಸರಕಾರ ನಿರ್ವಹಿಸಲಿವೆ.

ಇಎಸ್‌ಐ ಆಸ್ಪತ್ರೆ ಉಡುಪಿ ಭಾಗದ ಜನತೆಯ ಹಲವಾರು ವರ್ಷಗಳ ಬೇಡಿಕೆಯಾಗಿದ್ದು, ಇದೀಗ ಉಡುಪಿಗೆ 100 ಬೆಡ್ ಸಾಮರ್ಥ್ಯದ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಿದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭುಪೇಂದ್ರ ಯಾದವ್ ಅವರಿಗೆ, ಈ ಬಗ್ಗೆ ಶ್ರಮಿಸಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೃತಜ್ಞತೆ ಸಲ್ಲಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

12 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

12 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

13 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago