ಉಡುಪಿ

ಉಡುಪಿಗೊಂದು ಏರ್‌ಪೋರ್ಟ್: ಗರಿಗೆದರಿದ ಕನಸು

ಬೈಂದೂರು: ವ್ಯಾಪಾರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಸೂಕ್ತ ಸ್ಥಳದಲ್ಲಿ ಸುಸಜ್ಜಿತ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ನಿಟ್ಟಿನಲ್ಲಿ ಮಹತ್ವದ ಯೋಜನೆ ರೂಪುಗೊಂಡಿದೆ. ಈ ಯೋಜನೆಗೆ ಅಗತ್ಯದ ಜಮೀನು ಗುರುತಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆದಿದ್ದು, ಬೈಂದೂರು ತಾಲೂಕಿನ ಒತ್ತಿನೆಣೆಗೆ ಅದೃಷ್ಟ ಒಲಿಯುವ ಕನಸೊಂದು ಗರಿಗೆದರಿದೆ.
ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಪತ್ರದಂತೆ ದ.ಕ. ಮತ್ತು ಉಡುಪಿ ಜಿಲ್ಲೆಯ ಮಧ್ಯಭಾಗದಲ್ಲಿ ಮಲ್ಟಿ ಮಾಡೆಲ್‌ ನ್ಯೂ ಇಂಟರ್‌ನ್ಯಾಶನಲ್‌ ಏರ್‌ಪೋರ್ಟ್‌ ಮತ್ತು ಕಾರ್ಗೋ ಹಬ್‌ ನಿರ್ಮಾಣಕ್ಕಾಗಿ ಅವಶ್ಯಕ ಜಮೀನು ಗುರುತಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದಾರೆ. ಉಡುಪಿ ತಾಲೂಕಿನ ಪಲಿಮಾರು ಮತ್ತು ಕಾರ್ಕಳ ತಾಲೂಕಿನ ಇನ್ನಾ, ಮುಂಡ್ಕೂರು, ಮುಲ್ಲಡ್ಕ ಗ್ರಾಮಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಆದರೆ ಅಲ್ಲಿ ಜನವಾಸ್ತವ್ಯ ಮತ್ತು ಕೃಷಿಭೂಮಿ ಹೆಚ್ಚಿದ್ದರಿಂದ ಯೋಜನೆಗೆ ಜಮೀನು ಪೂರಕವಾಗಿಲ್ಲ ಎನ್ನಲಾಗಿದ್ದು, ಒತ್ತಿನೆಣೆ ಗುಡ್ಡಪ್ರದೇಶದಲ್ಲಿ ವಿಮಾನ ನಿಲ್ದಾಣದ ಕನಸು ಚಿಗುರಿದೆ.

ಅದೃಷ್ಟ ಖುಲಾಯಿಸುವುದೇ?: ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಒತ್ತಿನೆಣೆ ಪ್ರದೇಶದ ಸ.ನಂ. 268/1ರಲ್ಲಿ 454.81 ಎಕರೆ, ಸ.ನಂ. 241/1ರಲ್ಲಿ 1314.87 ಎಕರೆ ಜಾಗ ಇದೆ. ಸ.ನಂ. 268ರಲ್ಲಿ ಪಹಣಿ ಕಾಲಂ 9ರಲ್ಲಿ ಬೈಂದೂರು ಮೀಸಲು ಅರಣ್ಯ ಎಂದು ದಾಖಲಿಸಲಾಗಿದ್ದು, ಈ ಪ್ರದೇಶದಲ್ಲಿ ಕುರುಚಲು ಗಿಡಗಳು ಮಾತ್ರ ಇವೆ. ಈ ಪ್ರದೇಶದಲ್ಲಿ ಹಿಂದೆ ಬಾಕ್ಸೈಟ್‌ ಗಣಿಗಾರಿಕೆ ನಡೆದಿತ್ತು. ಈ ಸ್ಥಳದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಆಕ್ಷೇಪರಹಿತ ಜಮೀನಿನ ಬಗ್ಗೆ ಅರಣ್ಯ ಮತ್ತು ಭೂವಿಜ್ಞಾನ ಇಲಾಖೆಯ ಅಭಿಪ್ರಾಯ ಪಡೆಯುವಂತೆ ಜಿಲ್ಲಾಧಿಕಾರಿ ವರದಿಯಲ್ಲಿ ನಿಗಮದ ಗಮನ ಸೆಳೆದಿದ್ದಾರೆ.

ಬಹುಕಾಲದ ಬೇಡಿಕೆ: ಒತ್ತಿನೆಣೆ ಗುಡ್ಡದಲ್ಲಿ ಕೊಂಕಣ ರೈಲು ಸುರಂಗ ಮಾರ್ಗ ಹಾದುಹೋಗಿದ್ದು, ನಿರಂತರ ಹೋರಾಟದ ಫಲವಾಗಿ ಸಮೀಪದಲ್ಲಿಯೇ ಸುಸಜ್ಜಿತ ಮೂಕಾಂಬಿಕಾ ರೋಡ್‌ ಸ್ಟೇಶನ್‌ ಕನಸು ನನಸಾಗಿದೆ. ರಾಷ್ಟ್ರೀಯ ಹೆದ್ದಾರಿ ಈ ಗುಡ್ಡವನ್ನು ಸೀಳಿಕೊಂಡು ಹೋಗಿದ್ದು, ಚತುಷ್ಪಥ ಹೆದ್ದಾರಿ ನಿರ್ಮಾಣ ಕಾರ್ಯ ನಡೆಯುತ್ತಿದೆ.

ಅಭಿವೃದ್ಧಿಗೆ ಹೊಸದಿಕ್ಕು 
ಕುಂದಾಪುರ, ಬೈಂದೂರು, ಭಟ್ಕಳ ಭಾಗದ ಜನರು ಮಂಗಳೂರು ಅಥವಾ ಗೋವಾ ವಿಮಾನ ನಿಲ್ದಾಣಕ್ಕೆ ತೆರಳಲು ಸಾಕಷ್ಟು ಹಣ ಮತ್ತು ಸಮಯ ವ್ಯಯಿಸಬೇಕಾಗಿದೆ. ಒತ್ತಿನೆಣೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದಲ್ಲಿ ಈ ಭಾಗದ ಸಾವಿರಾರು ಜನರಿಗೆ ಪ್ರಯೋಜನವಾಗುತ್ತದೆ. ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳ ಆರ್ಥಿಕತೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಭಾರಿ ಉತ್ತೇಜನ ಸಿÜಗುತ್ತದೆ. ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಯ ಹಲವು ಪ್ರವಾಸಿ ಸ್ಥಳಗಳು, ಪ್ರಸಿದ್ಧ ದೇವಸ್ಥಾನಗಳನ್ನು ಸಂದರ್ಶಿಸುವ ದೇಶ-ವಿದೇಶಗಳ ಪ್ರವಾಸಿಗರಿಗೆ ಸಾಕಷ್ಟು ಅನುಕೂಲವಾಗುತ್ತದೆ. 

ಮೀಸಲು ಅರಣ್ಯ ಪುನರ್‌ ವಿಂಗಡಣೆಗೆ ಮನವಿ 

ಒತ್ತಿನೆಣೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಸಾಕಷ್ಟು ಅನುಕೂಲಕರವಾದ ಜಮೀನು ಲಭ್ಯವಿದ್ದರೂ ಸ.ನಂ. 268ರಲ್ಲಿ ಪಹಣಿ ಕಾಲಂ 9ರಲ್ಲಿ ಬೈಂದೂರು ಮೀಸಲು ಅರಣ್ಯ ಎಂದು ದಾಖಲಿಸಿರುವುದು ಯೋಜನೆಗೆ ತೊಡಕಾಗಿದೆ. ಈ ಜಾಗವನ್ನು ಮೀಸಲು ಅರಣ್ಯದಿಂದ ಪುನರ್‌ ವಿಂಗಡಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ. ಅಲ್ಲದೇ ಯೋಜನೆಯನ್ನು ಕಾರ್ಯರೂಪಕ್ಕೆ ತರುವಂತೆ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಧನಂಜಯ ಅವರಿಗೂ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ನಮ್ಮ ಕುಂದಾಪುರ ಕನ್ನಡ ಬಳಗ ಗಳ್ಫ್‌ ಸಂಘಟನೆಯೂ ಕರ್ನಾಟಕ ಮುಖ್ಯಮಂತ್ರಿಗೆ ಮನವಿ ಮಾಡಿದೆ
– ರಿಯಾಜ್‌ ಅಹಮದ್‌ ಬೈಂದೂರು, ಸಾಮಾಜಿಕ ಹೋರಾಟಗಾರರು 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

14 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 hours ago