Featured

ಉಡುಪಿ:ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕನಿಷ್ಠ 1 ರಿಂದ 2 ಗೋಶಾಲೆಗಳನ್ನು ನಿರ್ಮಿಸಲು ಅಗತ್ಯವಿರುವ ಜಾಗವನ್ನು ಗುರುತಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ:ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕನಿಷ್ಠ 1 ರಿಂದ 2 ಗೋಶಾಲೆಗಳನ್ನು ನಿರ್ಮಿಸಲು ಅಗತ್ಯವಿರುವ ಜಾಗವನ್ನು ಗುರುತಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ,: “ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕನಿಷ್ಠ 1 ರಿಂದ 2 ಗೋಶಾಲೆಗಳನ್ನು ನಿರ್ಮಿಸಲು ಅಗತ್ಯವಿರುವ ಜಾಗವನ್ನು ಗುರುತಿಸಿ ಕಾಯ್ದಿರಿಸಬೇಕು” ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಕರ್ನಾಟಕ ಜಾನುವಾರು ಹತ್ಯೆ ಪ್ರತಿಭಂದಕ ಮತ್ತು ಸಂರಕ್ಷಣೆ ನಿಯಮ 2020 ನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ರೈತರು ಮತ್ತು ಸಾರ್ವಜನಿಕರು ತಮ್ಮಲ್ಲಿನ ಅನುತ್ಪಾದಕ ಜಾನುವಾರುಗಳು, ಅಪಘಾತಗೊಂಡ ಜಾನುವಾರು, ಮತ್ತಿತರ ಜಾನುವಾರುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಿದಾಗ, ಅವುಗಳನ್ನು ಪೋಷಿಸಲು ಅನುಕೂಲವಾಗುವಂತೆ ಪ್ರತಿಯೊಂದು ತಾಲೂಕಿನಲ್ಲಿ ಗೋಶಾಲೆಗಳನ್ನು ಸ್ಥಾಪಿಸುವುದು ಅಗತ್ಯವಾಗಿದ್ದು, ಇದಕ್ಕಾಗಿ ಸೂಕ್ತ ಸ್ಥಳಾವಕಾಶವನ್ನು ಗುರುತಿಸಬೇಕು” ಎಂದು ಅಧಿಕಾರಿಗಳಿಗೆ ಡಿ.ಸಿ. ಸೂಚನೆ ನೀಡಿದರು.

“ಗೋಶಾಲೆಗಳನ್ನು ಆರಂಭಿಸುವ ಸಂದರ್ಭದಲ್ಲಿ, ಅದೇ ಸ್ಥಳದಲ್ಲಿ ಮೇವು ಬೆಳೆಯಲು ಸಾಧ್ಯವಿರುವಂತಹ ಜಾಗವನ್ನು ಗುರುತಿಸಬೇಕು” ಎಂದು ನೀಲಾವರ ಗೋಶಾಲೆಯ ಟ್ರಸ್ಟಿ ಡಾ.ಸರ್ವೋತ್ತಮ ಉಡುಪ ಹೇಳಿದರು.

“ಜಾನುವಾರುಗಳನ್ನು ಸಾಗಾಟ ಮಾಡುವಾಗ ಸಂಬಂಧಪಟ್ಟ ಎಲ್ಲಾ ಪ್ರಾಧಿಕಾರಗಳಿಂದ ಅನುಮತಿ ಪಡೆದ ಅಗತ್ಯ ದಾಖಲಾತಿಗಳನ್ನು ಜೊತೆಯಲ್ಲಿಯೇ ಇಟ್ಟುಕೊಂಡಿರಬೇಕು. ಇಲ್ಲವಾದಲ್ಲಿ ಜಾನುವಾರು ಮಾಲೀಕ, ವಾಹನ ಮಾಲೀಕ, ಚಾಲಕ, ಸಹಾಯಕ, ಜಾನುವಾರ ಸಾಗಾಟದ ಸಹಾಯಕ ಈ ಎಲ್ಲರ ಮೇಲೂ ಕ್ರಮ ಕೈಗೊಳ್ಳಲು ನಿಯಮದಲ್ಲಿ ಅವಕಾಶವಿದೆ. ಸಾಗಾಟ ಸಮಯದಲ್ಲಿ ಜಾನುವಾರುಗಳಿಗೆ ಯಾವುದೇ ಗಾಯಗಳಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸಾಗಾಟದ ಮೊದಲು ಯಥೇಚ್ಛ ನೀರು/ ಆಹಾರ/ ಹಸಿ ಹುಲ್ಲು, ವಾಹನದಲ್ಲಿ ಸರಿಯಾದ ಗಾಳಿ ಬೆಳಕು ಇರುವಂತೆ ನೋಡಿಕೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಹೇಳಿದರು.

https://youtu.be/jL4wwiGD0ng

“ಜಾನುವಾರುಗಳ ಸಾಗಾಟಕ್ಕಾಗಿಯೇ ರೂಪಿಸಿರುವ ನಿಯಮಗಳನ್ವಯ, ಸೂಕ್ತ ವಾಹನದಲ್ಲಿ ಸಾಗಾಟ ಮಾಡಬೇಕು, ಸಾಗಾಟದ ವೇಗ ಗಂಟೆಗೆ 25 ಕಿ.ಮೀ ಮೀರುವಂತಿಲ್ಲ. ವಾಹನದಲ್ಲಿ ಪ್ರತೀ ಜಾನುವಾರುಗಳಿಗೆ ಪ್ರತ್ಯೇಕ ಕಂಪಾರ್ಟ್ಮೆಂಟ್ ರೀತಿಯಲ್ಲಿ ವ್ಯವಸ್ಥೆ ಮಾಡಬೇಕು. ಖಾಸಗಿ ವಾಹನಗಳಲ್ಲಿ ಈ ರೀತಿಯ ಮಾರ್ಪಾಡು ಮಾಡಿಕೊಳ್ಳಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಅಗತ್ಯ ಪರವಾನಗಿಯನ್ನು ನೀಡಬೇಕು. ವಾಹನಗಳಲ್ಲಿ ಜಾನುವಾರುಗಳ ಪ್ರಥಮ ಚಿಕಿತ್ಸೆ ಕಿಟ್ ಕಡ್ಡಾಯವಾಗಿ ಇರಬೇಕು. ರಾತ್ರಿ 8 ರಿಂದ ಬೆಳಗ್ಗೆ 6 ರ ವರಗೆ ಸಾಗಾಟ ನಿಷಿದ್ಧವಾಗಿದ್ದು, ಬೇಸಿಗೆ ಕಾಲದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ಸಾಗಾಟ ಮಾಡುವಂತಿಲ್ಲ” ಎಂದು ಡಿಸಿ ಜಿ.ಜಗದೀಶ್ ಹೇಳಿದರು.

“ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ನಿಯಮ 2020ರಲ್ಲಿ, ಜಿಲ್ಲೆಗೆ ಸಂಬಂಧಪಟ್ಟ ಆಕ್ಷೇಪಣೆ/ ಸಲಹೆಗಳನ್ನು ಸ್ವೀಕರಿಸಿ, ಸರ್ಕಾರಕ್ಕೆ ತಲುಪಿಸಬೇಕು” ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಹರೀಶ್ ತಮನಕರ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

https://fb.watch/3kFsRf5htv/

ಜಿಲ್ಲೆಗೆ ಹೊರ ರಾಜ್ಯದಿಂದ ಕೃಷಿ/ಹೈನುಗಾರಿಕೆ ಉದ್ದೇಶಗಳಿಗೆ ಜಾನುವಾರುಗಳನ್ನು ತರುವಾಗ ನಿಯಮಗಳಲ್ಲಿ ಸೂಕ್ತ ಅವಕಾಶ ನೀಡಬೇಕು. ಗೋಶಾಲೆಗಳಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಅನುಮತಿ, ಗೋಶಾಲೆಗಳ ಕಡ್ಡಾಯ ನೊಂದಣಿ, ಗೋಮಾಳ ಜಾಗದ ಅತಿಕ್ರಮಣ ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು. ಅನುಮತಿ ಇಲ್ಲದೇ ಜಾನುವಾರು ಸಾಗಾಟದ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳಲು ತಹಸೀಲ್ದಾರ್ ಮತ್ತು ಉಪ ವಿಬಾಗಾಧಿಕಾರಿಗಳಿಗೆ ಅಧಿಕಾರ ನೀಡುವುದು, ಗೋಶಾಲೆಗಳಲ್ಲಿನ ಪಾಲನಾ ದರ ಹೆಚ್ಚಳ ಮತ್ತಿತರ ಸಲಹೆಗಳನ್ನು ಸದಸ್ಯರು ತಿಳಿಸಿದರು.

ಸಭೆಯಲ್ಲಿ ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಪಶುಪಾಲನಾ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಪ್ರಾಣಿ ದಯಾ ಸಂಘದ ಸದಸ್ಯರು ಉಪಸ್ಥಿತರಿದ್ದರು

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

14 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

15 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago