ಉಡುಪಿ: ಕೋವಿಡ್ 19 ಚಿಕಿತ್ಸಾ ಉಪಕರಣಗಳ ಖರೀದಿಯಲ್ಲಿ ನಡೆದ ಹಗರಣಗಳ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ರವಿವಾರ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಅವರು ಮಾತ ನಾಡಿದರು.
ಕಾಂಗ್ರೆಸ್ ವತಿಯಿಂದ ಕೋವಿಡ್-19 ವಿರುದ್ಧ ಹೋರಾಡುವ ಆರೋಗ್ಯ ಅಭಯಹಸ್ತ ಯೋಜನೆ ಕಾರ್ಯಕ್ರಮಕ್ಕೆ ಪ್ರತೀ ಪಂಚಾಯತ್ ವ್ಯಾಪ್ತಿಯಲ್ಲಿ 2 ಜನ ಕೋವಿಡ್ 19 ವಾರಿಯರ್ ಪ್ರತಿಯೊಬ್ಬರನ್ನು ಸಂಪರ್ಕಿಸಬೇಕು. ಇವರಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು. ಅವರ ಆರೋಗ್ಯ ರಕ್ಷಣೆಗೆ ವಿಮಾ ಸವಲತ್ತುಗಳನ್ನೂ ನೀಡಲಾಗುವುದು. ಪಕ್ಷದ ವತಿಯಿಂದ 400 ಮಂದಿ ವೈದ್ಯರು ಆನ್ಲೈನ್ ಮೂಲಕ ಜನರಿಗೆ ಆರೋಗ್ಯ ರಕ್ಷಣೆ ನೀಡಿದ್ದಾರೆ ಎಂದರು.
ಡ್ರಗ್ಸ್ ಹಾವಳಿಗೆ ಬಿಜೆಪಿ ಸರಕಾರದ ವೈಫಲ್ಯವೇ ಕಾರಣ ಎಂದು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿರುವ ಸಲೀಂ ಅಹ್ಮದ್ ಅವರು ಬಿಜೆಪಿ ಕಾರ್ಯಕರ್ತೆಯಾಗಿರುವ ನಟಿ ರಾಗಿಣಿಯೇ ಡ್ರಗ್ಸ್ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ. ಈ ನಡುವೆ ಸಚಿವ ಸಿ.ಟಿ.ರವಿ ಅವರು ‘ನಮಗೆ ಒತ್ತಡ ಇದೆ’ ಎನ್ನುತ್ತಿದ್ದಾರೆ. ಅದು ಯಾವ ಕಾರಣಕ್ಕೆಂದು ತಿಳಿಯಬೇಕು. ಡ್ರಗ್ಸ್ ಹಾವಳಿಯಲ್ಲಿ ತೊಡಗಿಸಿಕೊಂಡಿರುವವರಿಗೆ ಕಠಿನ ಶಿಕ್ಷೆಯಾಗಬೇಕು ಎಂದರು.
ನೆರೆ ಹಾವಳಿಯಲ್ಲಿ ಕಳೆದ ವರ್ಷ ಹಾಗೂ ಈ ವರ್ಷ ರಾಜ್ಯಕ್ಕೆ ಸಾವಿರಾರು ಕೋಟಿ ರೂ.ನಷ್ಟ ಉಂಟಾಗಿದೆ. ಆದರೆ ಕೇಂದ್ರ ಸರಕಾರದಿಂದ ಅತ್ಯಲ್ಪ ಪ್ರಮಾಣದ ಮೊತ್ತ ಬಿಡುಗಡೆಯಾಗಿದೆ. ಇನ್ನೂ ಹೆಚ್ಚಿನ ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರಕಾರ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಬೇಕೆಂದರು.
ಪಕ್ಷದ ಮುಖ್ಯ ಸಚೇತಕ ನಾರಾಯಣ ಸ್ವಾಮಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಪ್ರಮುಖರಾದ ಮಂಜುನಾಥ ಭಂಡಾರಿ, ಎಂ.ವಿ.ಗಫೂರ್, ವೆರೋನಿಕಾ ಕರ್ನೇಲಿಯೋ, ಶಾಹಿದ್, ಕಳ್ಳಿಗೆ ತಾರಾನಾಥ ಶೆಟ್ಟಿ, ಭಾಸ್ಕರ ರಾವ್ ಕಿದಿಯೂರು, ದಿನೇಶ್ ಪುತ್ರನ್, ಡಾ| ಸವಿತಾ ಶೆಟ್ಟಿ, ಗೀತಾ ವಾಗ್ಲೆ, ರೋಶನಿ ಒಲಿವೆರಾ, ವಿಶ್ವಾಸ್ ಅಮೀನ್, ಮೈರ್ಮಾಡಿ ಸುಧಾಕರ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಅಣ್ಣಯ್ಯ ಶೇರಿಗಾರ್ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಸ್ತಾವನೆಗೈದರು. ಜಿಲ್ಲಾ ಪ್ರ. ಕಾರ್ಯದರ್ಶಿ ಬಿ.ನರಸಿಂಹ ಮೂರ್ತಿ ಸ್ವಾಗತಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…