ಉಡುಪಿ: ಕಸ ವಿಂಗಡಣೆ ಕುರಿತಂತೆ ನಗರಸಭೆಯ ಕಸ ಸಂಗ್ರಹ ಮಾಡುವ ಕಾರ್ಮಿಕರೊಬ್ಬರ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನೇಜಾರಿನ ಇಸ್ಮಾಯಿಲ್(55) ಹಾಗೂ ಹೂಡೆಯ ಸೊಹೇಲ್(28) ಎಂದು ಗುರುತಿಸಲಾಗಿದೆ. ಉಡುಪಿ ನಗರಸಭೆಯ ಕಾರ್ಮಿಕ ಬಾಗಲಕೋಟೆ ಮೂಲದ ನಿಟ್ಟೂರು ನಿವಾಸಿ ಸಂಜು ಎಂಬವರಿಗೆ ಕಸದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ರಸ್ತೆ ಮಧ್ಯೆ ಹಲ್ಲೆ ನಡಸಿದ್ದಾರೆ. ಈ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗಡಿ ವಿವಾದ : ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ -Vishwanews24
ಆರೋಪಿಗಳು ಸಿಟಿ ಬಸ್ ನಿಲ್ದಾಣದ ಬಳಿ ಕಸ ಸಂಗ್ರಹಕ್ಕೆ ವಾಹನದೊಂದಿಗೆ ಹೋಗಿದ್ದಾರೆ. ಆಗ ಆರೋಪಿಗಳ ಅಂಗಡಿಯಲ್ಲಿ ಹಸಿ ಮತ್ತು ಒಣ ಕಸ ಬೆರೆಸಿರುವುದನ್ನು ಸಂಜು ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಅಂಗಡಿಯವರಿಗೆ ಮತ್ತು ಸಂಜು ಮಧ್ಯೆ ವಾಗ್ವಾದ ನಡೆಯುತ್ತಿರುವ ಸಂದರ್ಭ ಸಿಟ್ಟಿಗೆದ್ದ ಇಸ್ಮಾಯಿಲ್ ಮತ್ತು ಸೊಹೇಲ್, ಸಂಜುವಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…