ಉಡುಪಿ: ಉಡುಪಿಯಿಂದ ಮಂಗಳೂರಿಗೆ ಶನಿವಾರ ರಾತ್ರಿ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಮಿತಿಗಿಂತ ಅಧಿಕ ಪ್ರಮಾಣದಲ್ಲಿ ಪ್ರಯಾಣಿಕರನ್ನು ತುಂಬಿಕೊಂಡು ಸಾರಿಗೆ ನಿಯಮ ಉಲ್ಲಂಘಿಸಿದ ಚಾಲಕನಿಗೆ 13.500 ರೂ. ದಂಡ ವಿಧಿಸಲಾಗಿದೆ.
ಶನಿವಾರ ರಾತ್ರಿ 9.30ಕ್ಕೆ ಉಡುಪಿ ನಿಲ್ದಾಣದಿಂದ ಖಾಸಗಿ ಬಸ್ಸಿನಲ್ಲಿ ಜನರು ಪುಟ್ ಬೋರ್ಡ್, ಹಿಂಭಾಗದ ಏಣಿ ಮತ್ತು ಮೇಲ್ಬಾಗದಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರು ಬಸ್ಸಿನ ಚಾಲಕ ಶೈಲೇಶ್ಗೆ ುಡುಕುತನ ಮತ್ತು ನಿರ್ಲಕ್ಷ್ಯತನ ಚಾಲನೆ ಆಪಾದನೆಯಡಿ ಕೋರ್ಟ್ಗೆ ಹಾಜರಾಗುವಂತೆ ಬುಧವಾರ ನೋಟಿಸ್ ನೀಡಿ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ, ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯ ಆಪಾದಿತ ಚಾಲಕನಿಗೆ 13,500 ರೂಪಾಯಿ ದಂಡ ವಿಧಿಸಿದೆ.
ಸೆ. ೨೧ ರ ರಾತ್ರಿ 9.30 ಗಂಟೆಗೆ ಉಡುಪಿ – ಮಂಗಳೂರು ಮಾರ್ಗವಾಗಿ ಸಂಚರಿಸುವ ಕೆಎ 20 ಬಿ 6657 ನೇ ಖಾಸಗಿ ಬಸ್ಸಿನಲ್ಲಿ ಜನರು ಪುಟ್ ಬೋರ್ಡ್, ಹಿಂಭಾಗದ ಏಣಿಯಲ್ಲಿ ಮತ್ತು ಮೇಲ್ಬಾಗದಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ಬಗ್ಗೆ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಸೆ.೨೫ ರಂದು ಪೊಲೀಸರು, “ನಿಯಮ ಉಲ್ಲಂಘಿಸಿ ಹೆಚ್ಚಿನ ಜನರನ್ನು ಸಾಗಿಸುತಿದ್ದ, ಪುಟ್ ಬೋರ್ಡನಲ್ಲಿ ಮತ್ತು ಬಸ್ಸಿನ ಹಿಂಭಾಗ ಹಾಗೂ ಮೇಲ್ಬಾಗಗಳಲ್ಲಿ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಬಗ್ಗೆ ದುಡುಕುತನ ಮತ್ತು ನಿರ್ಲಕ್ಷ್ಯತನದ ಚಾಲನೆ ಹಾಗೂ ಯಾವುದೇ ಸುರಕ್ಷತಾ ನಿಯಮಗಳನ್ನು ಪಾಲಿಸದೇ ಬಸ್ಸನ್ನು ಚಲಾಯಿಸಿದ ಬಗ್ಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಅಲ್ಲದೆ ಬಸ್ಸನ್ನು ವಶಪಡಿಸಿಕೊಂಡ ಪೊಲೀಸರು ಮೋಟಾರು ವಾಹನ ಕಾಯ್ದೆಯಂತೆ ಪ್ರಕರಣ ದಾಖಲಿಸಿ,ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಚಾಲಕನ ಚಾಲನಾ ಅನುಜ್ಞಾ ಪತ್ರವನ್ನು ಅಮಾನತು ಪಡಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಪೊಲೀಸ್ ಇಲಾಖೆ ಶಿಫಾರಸ್ಸು ಮಾಡಿದೆ. ಬಸ್ಸಿನ ಮಾಲೀಕರಿಗೆ ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಿದೆ.
ಉಡುಪಿಯಿಂದ ಮಂಗಳೂರಿಗೆ ಸಂಚರಿಸುವ ದಿನದ ಕೊನೆಯ ಬಸ್ ಇದಾಗಿದ್ದು, ರಾತ್ರಿ ಸುಮಾರು 9.30ರ ಸುಮಾರಿಗೆ ಉಡುಪಿಯಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ಮಂಗಳೂರಿನತ್ತ ಸಾಗಿದೆ. ಅದರೆ ಬಸ್ಸಿನಲ್ಲಿ ನಿಗದಿಗಿಂತ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಬಸ್ಸಿನ ಫುಟ್ ಬೋರ್ಡ್ ಹಾಗೂ ಹಿಂಬದಿಯ ಏಣಿಯಲ್ಲಿ ನೇತಾಡಿಕೊಂಡು ಹೋಗಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ಕಂಡು ಬಂದಿದೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…