Featured

ಉಡುಪಿ:ನಿಯಮ ಉಲ್ಲಂಘಿಸಿದ ಖಾಸಗಿ ಬಸ್‌ ಚಾಲಕನಿಗೆ 13.500 ರೂ. ದಂಡ, ಡ್ರೈವಿಂಗ್ ಲೈಸನ್ಸ್ ಅಮಾನತು -Vishwanews24

ಉಡುಪಿ: ಉಡುಪಿಯಿಂದ ಮಂಗಳೂರಿಗೆ ಶನಿವಾರ ರಾತ್ರಿ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಮಿತಿಗಿಂತ ಅಧಿಕ ಪ್ರಮಾಣದಲ್ಲಿ ಪ್ರಯಾಣಿಕರನ್ನು ತುಂಬಿಕೊಂಡು ಸಾರಿಗೆ ನಿಯಮ ಉಲ್ಲಂಘಿಸಿದ ಚಾಲಕನಿಗೆ 13.500 ರೂ. ದಂಡ ವಿಧಿಸಲಾಗಿದೆ.

ಶನಿವಾರ ರಾತ್ರಿ 9.30ಕ್ಕೆ ಉಡುಪಿ ನಿಲ್ದಾಣದಿಂದ ಖಾಸಗಿ ಬಸ್ಸಿನಲ್ಲಿ ಜನರು ಪುಟ್ ಬೋರ್ಡ್, ಹಿಂಭಾಗದ ಏಣಿ ಮತ್ತು ಮೇಲ್ಬಾಗದಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರು ಬಸ್ಸಿನ ಚಾಲಕ ಶೈಲೇಶ್‌ಗೆ ುಡುಕುತನ ಮತ್ತು ನಿರ್ಲಕ್ಷ್ಯತನ ಚಾಲನೆ ಆಪಾದನೆಯಡಿ ಕೋರ್ಟ್‌ಗೆ ಹಾಜರಾಗುವಂತೆ ಬುಧವಾರ ನೋಟಿಸ್ ನೀಡಿ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ, ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯ ಆಪಾದಿತ ಚಾಲಕನಿಗೆ 13,500 ರೂಪಾಯಿ ದಂಡ ವಿಧಿಸಿದೆ.

ಸೆ. ೨೧ ರ ರಾತ್ರಿ 9.30 ಗಂಟೆಗೆ ಉಡುಪಿ – ಮಂಗಳೂರು ಮಾರ್ಗವಾಗಿ ಸಂಚರಿಸುವ ಕೆಎ 20 ಬಿ 6657 ನೇ ಖಾಸಗಿ ಬಸ್ಸಿನಲ್ಲಿ ಜನರು ಪುಟ್ ಬೋರ್ಡ್, ಹಿಂಭಾಗದ ಏಣಿಯಲ್ಲಿ ಮತ್ತು ಮೇಲ್ಬಾಗದಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ಬಗ್ಗೆ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಸೆ.೨೫ ರಂದು ಪೊಲೀಸರು, “ನಿಯಮ ಉಲ್ಲಂಘಿಸಿ ಹೆಚ್ಚಿನ ಜನರನ್ನು ಸಾಗಿಸುತಿದ್ದ, ಪುಟ್ ಬೋರ್ಡನಲ್ಲಿ ಮತ್ತು ಬಸ್ಸಿನ ಹಿಂಭಾಗ ಹಾಗೂ ಮೇಲ್ಬಾಗಗಳಲ್ಲಿ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಬಗ್ಗೆ ದುಡುಕುತನ ಮತ್ತು ನಿರ್ಲಕ್ಷ್ಯತನದ ಚಾಲನೆ ಹಾಗೂ ಯಾವುದೇ ಸುರಕ್ಷತಾ ನಿಯಮಗಳನ್ನು ಪಾಲಿಸದೇ ಬಸ್ಸನ್ನು ಚಲಾಯಿಸಿದ ಬಗ್ಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಅಲ್ಲದೆ ಬಸ್ಸನ್ನು ವಶಪಡಿಸಿಕೊಂಡ ಪೊಲೀಸರು ಮೋಟಾರು ವಾಹನ ಕಾಯ್ದೆಯಂತೆ ಪ್ರಕರಣ ದಾಖಲಿಸಿ,ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಚಾಲಕನ ಚಾಲನಾ ಅನುಜ್ಞಾ ಪತ್ರವನ್ನು ಅಮಾನತು ಪಡಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಪೊಲೀಸ್ ಇಲಾಖೆ ಶಿಫಾರಸ್ಸು ಮಾಡಿದೆ. ಬಸ್ಸಿನ ಮಾಲೀಕರಿಗೆ ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಿದೆ.

ಉಡುಪಿಯಿಂದ ಮಂಗಳೂರಿಗೆ ಸಂಚರಿಸುವ ದಿನದ ಕೊನೆಯ ಬಸ್ ಇದಾಗಿದ್ದು, ರಾತ್ರಿ ಸುಮಾರು 9.30ರ ಸುಮಾರಿಗೆ ಉಡುಪಿಯಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ಮಂಗಳೂರಿನತ್ತ ಸಾಗಿದೆ. ಅದರೆ ಬಸ್ಸಿನಲ್ಲಿ ನಿಗದಿಗಿಂತ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಬಸ್ಸಿನ ಫುಟ್ ಬೋರ್ಡ್ ಹಾಗೂ ಹಿಂಬದಿಯ ಏಣಿಯಲ್ಲಿ ನೇತಾಡಿಕೊಂಡು ಹೋಗಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ಕಂಡು ಬಂದಿದೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

6 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

9 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

11 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

13 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

13 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

13 hours ago