ಉಡುಪಿ:ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣ: ಜೂ.13ರಿಂದ ಸಾಕ್ಷಿಗಳ ವಿಚಾರಣೆ ಆರಂಭ – Vishwanews24
ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣ: ಜೂ.13ರಿಂದ ಸಾಕ್ಷಿಗಳ ವಿಚಾರಣೆ ಆರಂಭ
ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಆರೋಪಿ ಪ್ರವೀಣ್ ಚೌಗುಲೆಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು.
ಈ ಪ್ರಕರಣವನ್ನು ಉಡುಪಿ ಸೆಷನ್ಸ್ ಕೋರ್ಟ್ ನಿಂದ ಬೆಂಗಳೂರಿನ ಸೆಷನ್ಸ್ ಕೋರ್ಟ್ಗೆ ವರ್ಗಾಯಿಸುವಂತೆ ಕೋರಿ ಆರೋಪಿ ಪರ ವಕೀಲರು ಮೆಮೋ ಸಲ್ಲಿಕೆ ಮಾಡಿದ್ದರೂ ನ್ಯಾಯಪೀಠ ಅಂಗೀಕರಿಸಿಲ್ಲ. ಸಾಕ್ಷಿಗಳಿಗೆ ಸಮನ್ಸ್ ನೀಡಿ, ಮುಂದಿನ ವಿಚಾರಣೆಯು ಜೂ.13ರಿಂದ 15ರ ಅವಧಿಯಲ್ಲಿ ನಡೆಯಲಿದೆ.
ಮಂಗಳೂರು: ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ: ಫ್ಯಾಕ್ಟರಿಗೆ ಬೀಗ ಜಡಿದ ಅಧಿಕಾರಿಗಳು – Vishwanews24
ಮೊದಲನೇ ದಿನ ಒಬ್ಬರು ಹಾಗೂ ಉಳಿದ ದಿನದಲ್ಲಿ ತಲಾ ಇಬ್ಬರಂತೆ ಮೂರು ದಿನಗಳ ಕಾಲ 5 ಮಂದಿ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು.
