ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಬೆಳಗಾವಿ ಪೊಲೀಸರ ಸಹಕಾರದಿಂದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿದ ಉಡುಪಿ ಪೊಲೀಸರು ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿದ್ದಾರೆ. ಈತ ಮಂಗಳೂರು ಏರ್ಪೋರ್ಟ್ ಸೆಕ್ಯೂರಿಟಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಆರ್ಪಿಎಫ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎಂದು ತಿಳಿದುಬಂದಿದೆ.
ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು, ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನೊಂದೆಡೆ ಕೃತ್ಯಕ್ಕೆ ಸುಪಾರಿ ನೀಡಿದ ಆರೋಪಿಗಳ ಪತ್ತೆಗೆ ಕೇರಳದ ಕೊಟ್ಟಾಯಂ ಕಡೆಗೆ ಡಿವೈಎಸ್ಪಿ ದಿನಕರ್ ಪಿ.ನೇತೃತ್ವದ ತಂಡ ಹೋಗಿದ್ದು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದೆ.
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…