ಉಡುಪಿ: ಬ್ಯಾರಿ ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಒತ್ತಾಯಿಸಿ ಮುಖ್ಯಮಂತ್ರಿ ಬಳಿ ನಿಯೋಗ ತೆರಳಿ ಒತ್ತಾಯಿಸಲಾಗುವುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದರು,.
ಬುಧವಾರ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಜಿಲ್ಲಾ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾರಿ ಸಮುದಾಯದ ಹೋರಾಟದ ಫಲವಾಗಿ ಬ್ಯಾರಿ ಸಾಹಿತ್ಯ ಅಕಾಡೆಮಿ ರಚನೆಯಾಗಿದೆ. ಬ್ಯಾರಿ ಭಾಷೆಯ ಸಂಘಟನೆಯ ಹೆಸರಿನಲ್ಲಿ ಸಮುದಾಯ ಒಂದಾಗಬೇಕು. ಬ್ಯಾರಿ ಸಂಘಟನೆಗಳು ಧರ್ಮದ ಚೌಕಟ್ಟಿನೊಳಗೆ ಕಾರ್ಯ ನಿರ್ವಹಿಸಲು ಧರ್ಮಗುರುಗಳ ಮಾರ್ಗದರ್ಶನ ಅಗತ್ಯ ಎಂದರು.
ಸುರೇಶ್ ಅಂಗಡಿ ತಾಯಿ ವಿಧಿವಶ -Vishwanews24
1,400 ವರ್ಷಗಳ ಇತಿಹಾಸ ಹೊಂದಿರುವ ಬ್ಯಾರಿ ಭಾಷೆಯ ಉಳಿವಿಗೆ ಲಿಪಿ ಅಗತ್ಯ. ಈವರೆಗೆ ಬ್ಯಾರಿ ಭಾಷೆಯ ಬರವಣಿಗೆಗೆ ಕನ್ನಡ ಅವಲಂಬಿಸಬೇಕಾಗಿತ್ತು. ಭಾಷೆಯ ಶ್ರೀಮಂತಿಕೆ ಉಳಿಸಲು, ಮುಂದಿನ ಜನಾಂಗ ಬ್ಯಾರಿ ಭಾಷೆಯನ್ನು ಕಲಿಯಲು ಅನುಕೂಲವಾಗುವಂತೆ ಲಿಪಿ ರಚನೆಯಾಗಿದೆ ಎಂದು ರಹೀಂ ಉಚ್ಚಿಲ್ ಹೇಳಿದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಯಾಕುಬ್ ಖಾದರ್ ಗುಲ್ವಾಡಿ ಮಾತನಾಡಿ, ಇತರ ಭಾಷೆ ಮತ್ತು ಸಮುದಾಯದಗಳಿಗೆ ರಚನೆ ಮಾಡಿರುವಂತೆ ಬ್ಯಾರಿ ಭಾಷೆಗೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಯಾಗಬೇಕು. ಈ ನಿಟ್ಟಿನಲ್ಲಿ ಸಮುದಾಯದ ಪ್ರಮುಖರು ಒಟ್ಟಾಗಿ ಹೋರಾಟ ಮಾಡಬೇಕು. ಬ್ಯಾರಿ ಭಾಷೆಯ ಸಿನಿಮಾವನ್ನು ಬ್ಯಾರಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಮಂಗಳೂರು, ಉಡುಪಿ, ಚಿಕ್ಕಮಗಳೂರು, ಮೈಸೂರಿನಲ್ಲಿ ಪ್ರದರ್ಶಿಸಲು ಅಕಾಡೆಮಿ ಸಹಕಾರ ನೀಡಬೇಕು ಎಂದರು.
ಉಪನ್ಯಾಸಕ ಅಬೂಬಕ್ಕರ್ ಉಚ್ಚಿಲ ಪೆರ್ನಾಲ್ ಸೌಹಾರ್ದ ಸಂದೇಶ ನೀಡಿ, ಬ್ಯಾರಿಗಳ ಮೂಲ ವೃತ್ತಿ ವ್ಯಾಪಾರವಾಗಿದ್ದು, ವ್ಯವಹಾರ ಸುಗಮವಾಗಿ ನಡೆಯಬೇಕಾದರೆ ಸಮಾಜದಲ್ಲಿ ಸೌರ್ಹಾದತೆ ಅಗತ್ಯ. ಬ್ಯಾರಿಗಳು ಹಿಂದಿನಿಂದಲೂ ಸೌಹಾರ್ದ ಕಾಪಾಡಿಕೊಂಡು ಬರುತ್ತಿದ್ದು, ಸೌಹಾರ್ದತೆಯ ಬೇರುಗಳು ಗಟ್ಟಿಯಾಗಿ ಉಳಿದಿವೆ ಎಂದರು.
ಮುಖ್ಯ ಅತಿಥಿಗಳಾಗಿ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಪಿ.ಉಮರ್ ಫಾರೂಕ್, ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್ ಬ್ಯಾರಿ, ಕರ್ನಾಟಕ ಹಜ್ ಸಮಿತಿಯ ಮಾಜಿ ಸದಸ್ಯ ಸಲೀಂ ಅಂಬಾಗಿಲು, ಅಕಾಡೆಮಿ ಸದಸ್ಯ ಶಂಶೀರ್ ಬುಡೋಳಿ ಉಪಸ್ಥಿತರಿದ್ದರು. ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮ ಸ್ವಾಗತಿಸಿದರು. ಸದಸ್ಯ ಸಂಚಾಲಕ ನಝೀರ್ ಪೊಲ್ಯ ವಂದಿಸಿದರು. ಹುಸೇನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ಬ್ಯಾರಿ ಸಾಹಿತ್ಯ ಮತ್ತು ಸಂಸ್ಕೃತಿ ಸಂಘದ ಅಧ್ಯಕ್ಷ ಬಶೀರ್ ಬೈಕಂಪಾಡಿ ಇದ್ದರು.
ಬೆಂಗಳೂರು: ಮಹಿಳೆ ಮೇಲೆ ಹಲ್ಲೆ ಆರೋಪ, ಜೊಮ್ಯಾಟೋ ಡೆಲಿವರಿ ಬಾಯ್ ಬಂಧನ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…