Featured

ಉಡುಪಿ:ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸಿಎಂ ಬಳಿ ನಿಯೋಗ ; ಬ್ಯಾರಿ ಭಾಷೆ ಉಳಿವಿಗೆ ಲಿಪಿ ಅಗತ್ಯ: ರಹೀಂ ಉಚ್ಚಿಲ್ -Vishwanews24

ಉಡುಪಿ:ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸಿಎಂ ಬಳಿ ನಿಯೋಗ ; ಬ್ಯಾರಿ ಭಾಷೆ ಉಳಿವಿಗೆ ಲಿಪಿ ಅಗತ್ಯ: ರಹೀಂ ಉಚ್ಚಿಲ್ -Vishwanews24

ಉಡುಪಿ: ಬ್ಯಾರಿ ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಒತ್ತಾಯಿಸಿ ಮುಖ್ಯಮಂತ್ರಿ ಬಳಿ ನಿಯೋಗ ತೆರಳಿ ಒತ್ತಾಯಿಸಲಾಗುವುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದರು,.

ಬುಧವಾರ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಜಿಲ್ಲಾ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್‌ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾರಿ ಸಮುದಾಯದ ಹೋರಾಟದ ಫಲವಾಗಿ ಬ್ಯಾರಿ ಸಾಹಿತ್ಯ ಅಕಾಡೆಮಿ ರಚನೆಯಾಗಿದೆ. ಬ್ಯಾರಿ ಭಾಷೆಯ ಸಂಘಟನೆಯ ಹೆಸರಿನಲ್ಲಿ ಸಮುದಾಯ ಒಂದಾಗಬೇಕು. ಬ್ಯಾರಿ ಸಂಘಟನೆಗಳು ಧರ್ಮದ ಚೌಕಟ್ಟಿನೊಳಗೆ ಕಾರ್ಯ ನಿರ್ವಹಿಸಲು ಧರ್ಮಗುರುಗಳ ಮಾರ್ಗದರ್ಶನ ಅಗತ್ಯ ಎಂದರು.

ಸುರೇಶ್ ಅಂಗಡಿ ತಾಯಿ ವಿಧಿವಶ -Vishwanews24

1,400 ವರ್ಷಗಳ ಇತಿಹಾಸ ಹೊಂದಿರುವ ಬ್ಯಾರಿ ಭಾಷೆಯ ಉಳಿವಿಗೆ ಲಿಪಿ ಅಗತ್ಯ. ಈವರೆಗೆ ಬ್ಯಾರಿ ಭಾಷೆಯ ಬರವಣಿಗೆಗೆ ಕನ್ನಡ ಅವಲಂಬಿಸಬೇಕಾಗಿತ್ತು. ಭಾಷೆಯ ಶ್ರೀಮಂತಿಕೆ ಉಳಿಸಲು, ಮುಂದಿನ ಜನಾಂಗ ಬ್ಯಾರಿ ಭಾಷೆಯನ್ನು ಕಲಿಯಲು ಅನುಕೂಲವಾಗುವಂತೆ ಲಿಪಿ ರಚನೆಯಾಗಿದೆ ಎಂದು ರಹೀಂ ಉಚ್ಚಿಲ್ ಹೇಳಿದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಯಾಕುಬ್ ಖಾದರ್ ಗುಲ್ವಾಡಿ ಮಾತನಾಡಿ, ಇತರ ಭಾಷೆ ಮತ್ತು ಸಮುದಾಯದಗಳಿಗೆ ರಚನೆ ಮಾಡಿರುವಂತೆ ಬ್ಯಾರಿ ಭಾಷೆಗೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಯಾಗಬೇಕು. ಈ ನಿಟ್ಟಿನಲ್ಲಿ ಸಮುದಾಯದ ಪ್ರಮುಖರು ಒಟ್ಟಾಗಿ ಹೋರಾಟ ಮಾಡಬೇಕು. ಬ್ಯಾರಿ ಭಾಷೆಯ ಸಿನಿಮಾವನ್ನು ಬ್ಯಾರಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಮಂಗಳೂರು, ಉಡುಪಿ, ಚಿಕ್ಕಮಗಳೂರು, ಮೈಸೂರಿನಲ್ಲಿ ಪ್ರದರ್ಶಿಸಲು ಅಕಾಡೆಮಿ ಸಹಕಾರ ನೀಡಬೇಕು ಎಂದರು.

ಮಂಗಳೂರು : ಒಳಉಡುಪು, ಸ್ಯಾನಿಟರಿ ಪ್ಯಾಡ್ ಮತ್ತು ಸಾಕ್ಸ್ ಗಳಲ್ಲಿ ಚಿನ್ನ ಸಾಗಾಟ ; ವಿಮಾನ ನಿಲ್ದಾಣದಲ್ಲಿ ಮಹಿಳೆ ವಶಕ್ಕೆ -Vishwanews24

ಉಪನ್ಯಾಸಕ ಅಬೂಬಕ್ಕರ್ ಉಚ್ಚಿಲ ಪೆರ್ನಾಲ್ ಸೌಹಾರ್ದ ಸಂದೇಶ ನೀಡಿ, ಬ್ಯಾರಿಗಳ ಮೂಲ ವೃತ್ತಿ ವ್ಯಾಪಾರವಾಗಿದ್ದು, ವ್ಯವಹಾರ ಸುಗಮವಾಗಿ ನಡೆಯಬೇಕಾದರೆ ಸಮಾಜದಲ್ಲಿ ಸೌರ್ಹಾದತೆ ಅಗತ್ಯ. ಬ್ಯಾರಿಗಳು ಹಿಂದಿನಿಂದಲೂ ಸೌಹಾರ್ದ ಕಾಪಾಡಿಕೊಂಡು ಬರುತ್ತಿದ್ದು, ಸೌಹಾರ್ದತೆಯ ಬೇರುಗಳು ಗಟ್ಟಿಯಾಗಿ ಉಳಿದಿವೆ ಎಂದರು.

ಮುಖ್ಯ ಅತಿಥಿಗಳಾಗಿ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಪಿ.ಉಮರ್ ಫಾರೂಕ್, ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್ ಬ್ಯಾರಿ, ಕರ್ನಾಟಕ ಹಜ್ ಸಮಿತಿಯ ಮಾಜಿ ಸದಸ್ಯ ಸಲೀಂ ಅಂಬಾಗಿಲು, ಅಕಾಡೆಮಿ ಸದಸ್ಯ ಶಂಶೀರ್ ಬುಡೋಳಿ ಉಪಸ್ಥಿತರಿದ್ದರು. ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮ ಸ್ವಾಗತಿಸಿದರು. ಸದಸ್ಯ ಸಂಚಾಲಕ ನಝೀರ್ ಪೊಲ್ಯ ವಂದಿಸಿದರು. ಹುಸೇನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ಬ್ಯಾರಿ ಸಾಹಿತ್ಯ ಮತ್ತು ಸಂಸ್ಕೃತಿ ಸಂಘದ ಅಧ್ಯಕ್ಷ ಬಶೀರ್ ಬೈಕಂಪಾಡಿ ಇದ್ದರು.

ಬೆಂಗಳೂರು: ಮಹಿಳೆ ಮೇಲೆ ಹಲ್ಲೆ ಆರೋಪ, ಜೊಮ್ಯಾಟೋ ಡೆಲಿವರಿ ಬಾಯ್ ಬಂಧನ -Vishwanews24

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

16 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago