Featured

ಉಡುಪಿ:ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸಿಎಂ ಬಳಿ ನಿಯೋಗ ; ಬ್ಯಾರಿ ಭಾಷೆ ಉಳಿವಿಗೆ ಲಿಪಿ ಅಗತ್ಯ: ರಹೀಂ ಉಚ್ಚಿಲ್ -Vishwanews24

ಉಡುಪಿ:ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸಿಎಂ ಬಳಿ ನಿಯೋಗ ; ಬ್ಯಾರಿ ಭಾಷೆ ಉಳಿವಿಗೆ ಲಿಪಿ ಅಗತ್ಯ: ರಹೀಂ ಉಚ್ಚಿಲ್ -Vishwanews24

ಉಡುಪಿ: ಬ್ಯಾರಿ ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಒತ್ತಾಯಿಸಿ ಮುಖ್ಯಮಂತ್ರಿ ಬಳಿ ನಿಯೋಗ ತೆರಳಿ ಒತ್ತಾಯಿಸಲಾಗುವುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದರು,.

ಬುಧವಾರ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಜಿಲ್ಲಾ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್‌ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾರಿ ಸಮುದಾಯದ ಹೋರಾಟದ ಫಲವಾಗಿ ಬ್ಯಾರಿ ಸಾಹಿತ್ಯ ಅಕಾಡೆಮಿ ರಚನೆಯಾಗಿದೆ. ಬ್ಯಾರಿ ಭಾಷೆಯ ಸಂಘಟನೆಯ ಹೆಸರಿನಲ್ಲಿ ಸಮುದಾಯ ಒಂದಾಗಬೇಕು. ಬ್ಯಾರಿ ಸಂಘಟನೆಗಳು ಧರ್ಮದ ಚೌಕಟ್ಟಿನೊಳಗೆ ಕಾರ್ಯ ನಿರ್ವಹಿಸಲು ಧರ್ಮಗುರುಗಳ ಮಾರ್ಗದರ್ಶನ ಅಗತ್ಯ ಎಂದರು.

ಸುರೇಶ್ ಅಂಗಡಿ ತಾಯಿ ವಿಧಿವಶ -Vishwanews24

1,400 ವರ್ಷಗಳ ಇತಿಹಾಸ ಹೊಂದಿರುವ ಬ್ಯಾರಿ ಭಾಷೆಯ ಉಳಿವಿಗೆ ಲಿಪಿ ಅಗತ್ಯ. ಈವರೆಗೆ ಬ್ಯಾರಿ ಭಾಷೆಯ ಬರವಣಿಗೆಗೆ ಕನ್ನಡ ಅವಲಂಬಿಸಬೇಕಾಗಿತ್ತು. ಭಾಷೆಯ ಶ್ರೀಮಂತಿಕೆ ಉಳಿಸಲು, ಮುಂದಿನ ಜನಾಂಗ ಬ್ಯಾರಿ ಭಾಷೆಯನ್ನು ಕಲಿಯಲು ಅನುಕೂಲವಾಗುವಂತೆ ಲಿಪಿ ರಚನೆಯಾಗಿದೆ ಎಂದು ರಹೀಂ ಉಚ್ಚಿಲ್ ಹೇಳಿದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಯಾಕುಬ್ ಖಾದರ್ ಗುಲ್ವಾಡಿ ಮಾತನಾಡಿ, ಇತರ ಭಾಷೆ ಮತ್ತು ಸಮುದಾಯದಗಳಿಗೆ ರಚನೆ ಮಾಡಿರುವಂತೆ ಬ್ಯಾರಿ ಭಾಷೆಗೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಯಾಗಬೇಕು. ಈ ನಿಟ್ಟಿನಲ್ಲಿ ಸಮುದಾಯದ ಪ್ರಮುಖರು ಒಟ್ಟಾಗಿ ಹೋರಾಟ ಮಾಡಬೇಕು. ಬ್ಯಾರಿ ಭಾಷೆಯ ಸಿನಿಮಾವನ್ನು ಬ್ಯಾರಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಮಂಗಳೂರು, ಉಡುಪಿ, ಚಿಕ್ಕಮಗಳೂರು, ಮೈಸೂರಿನಲ್ಲಿ ಪ್ರದರ್ಶಿಸಲು ಅಕಾಡೆಮಿ ಸಹಕಾರ ನೀಡಬೇಕು ಎಂದರು.

ಮಂಗಳೂರು : ಒಳಉಡುಪು, ಸ್ಯಾನಿಟರಿ ಪ್ಯಾಡ್ ಮತ್ತು ಸಾಕ್ಸ್ ಗಳಲ್ಲಿ ಚಿನ್ನ ಸಾಗಾಟ ; ವಿಮಾನ ನಿಲ್ದಾಣದಲ್ಲಿ ಮಹಿಳೆ ವಶಕ್ಕೆ -Vishwanews24

ಉಪನ್ಯಾಸಕ ಅಬೂಬಕ್ಕರ್ ಉಚ್ಚಿಲ ಪೆರ್ನಾಲ್ ಸೌಹಾರ್ದ ಸಂದೇಶ ನೀಡಿ, ಬ್ಯಾರಿಗಳ ಮೂಲ ವೃತ್ತಿ ವ್ಯಾಪಾರವಾಗಿದ್ದು, ವ್ಯವಹಾರ ಸುಗಮವಾಗಿ ನಡೆಯಬೇಕಾದರೆ ಸಮಾಜದಲ್ಲಿ ಸೌರ್ಹಾದತೆ ಅಗತ್ಯ. ಬ್ಯಾರಿಗಳು ಹಿಂದಿನಿಂದಲೂ ಸೌಹಾರ್ದ ಕಾಪಾಡಿಕೊಂಡು ಬರುತ್ತಿದ್ದು, ಸೌಹಾರ್ದತೆಯ ಬೇರುಗಳು ಗಟ್ಟಿಯಾಗಿ ಉಳಿದಿವೆ ಎಂದರು.

ಮುಖ್ಯ ಅತಿಥಿಗಳಾಗಿ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಪಿ.ಉಮರ್ ಫಾರೂಕ್, ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್ ಬ್ಯಾರಿ, ಕರ್ನಾಟಕ ಹಜ್ ಸಮಿತಿಯ ಮಾಜಿ ಸದಸ್ಯ ಸಲೀಂ ಅಂಬಾಗಿಲು, ಅಕಾಡೆಮಿ ಸದಸ್ಯ ಶಂಶೀರ್ ಬುಡೋಳಿ ಉಪಸ್ಥಿತರಿದ್ದರು. ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮ ಸ್ವಾಗತಿಸಿದರು. ಸದಸ್ಯ ಸಂಚಾಲಕ ನಝೀರ್ ಪೊಲ್ಯ ವಂದಿಸಿದರು. ಹುಸೇನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ಬ್ಯಾರಿ ಸಾಹಿತ್ಯ ಮತ್ತು ಸಂಸ್ಕೃತಿ ಸಂಘದ ಅಧ್ಯಕ್ಷ ಬಶೀರ್ ಬೈಕಂಪಾಡಿ ಇದ್ದರು.

ಬೆಂಗಳೂರು: ಮಹಿಳೆ ಮೇಲೆ ಹಲ್ಲೆ ಆರೋಪ, ಜೊಮ್ಯಾಟೋ ಡೆಲಿವರಿ ಬಾಯ್ ಬಂಧನ -Vishwanews24

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

4 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

4 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

4 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

4 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

5 hours ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

5 hours ago