ಉಡುಪಿ: ಬ್ಯೂಟಿಪಾರ್ಲರ್ ನಡೆಸುವ ಮಹಿಳೆಯರ ಸ್ವಾವಲಂಬನೆಗೆ ಬಜೆಟ್ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಕರ್ನಾಟಕ ಐಕ್ಯ ಪಾರ್ಲರ್ ಮತ್ತು ಕ್ಷೌರಿಕ ಅಸೋಸಿಯೇಶನ್ ಮನವಿ ಸಲ್ಲಿಸಿದೆ.
ಅಸೋಸಿಯೇಶನ್ ಅಧ್ಯಕ್ಷೆ ಪೌಲಿನ್ ಕ್ರಾಸ್ತಾ, ಉಪಾಧ್ಯಕ್ಷೆ ಲತಿಸಿಯಾ ದಾಂತಿಸ್, ಖಜಾಂಜಿ ಗೀತಾ ಭಂಡಾರಿ, ಪಿಆರ್ಒ ಮಂಜುಳಾ ಡಿ. ನಾಯಕ್ ಅವರಿದ್ದ ನಿಯೋಗ ಬುಧವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದಾರೆ.
ಬ್ಯೂಟಿ ಪಾರ್ಲರ್ ನಡೆಸುತ್ತಿರುವ ಮಹಿಳೆಯರು ಆರ್ಥಿಕ ಸ್ವಾವಲಂಬನೆ ಪಡೆಯಲು ಸರಕಾರದ ಸಹಾಯಧನ, ವಿಶೇಷ ಪ್ಯಾಕೇಜ್ ಸೌಲಭ್ಯಗಳು ಅತ್ಯವಶ್ಯಕವಾಗಿದೆ. ನಮ್ಮ ಸಂಘಟನೆಯಿಂದ ನಗರ, ಗ್ರಾಮೀಣ ಭಾಗದಲ್ಲಿರುವ ಬ್ಯೂಟಿಷಿಯನ್ಗಳಿಗೆ ಪ್ರೊಫೆಶನಲ್ ಮೇಕಪ್, ಹೇರ್ ಕಟ್ಟಿಂಗ್ ತರಗತಿ, ಸೆಮಿನಾರ್, ಬ್ಯೂಟಿಷಿಯನ್ ಕಾರ್ಯಾಗಾರ ನಡೆಸುತ್ತಿದ್ದೇವೆ. ಆದರೆ, ಬ್ಯೂಟಿ ಪಾರ್ಲರ್ ನಡೆಸುತ್ತಿರುವ ನಮಗೆ ಸರಕಾರದಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಪ್ರಸ್ತುತ ಬಜೆಟ್ನಲ್ಲಿ ಬ್ಯೂಟಿ ಪಾರ್ಲರ್ಗಳನ್ನು ನಡೆಸುತ್ತಿರುವ ಮಹಿಳೆಯರಿಗೆ ಅಗತ್ಯ ಸಹಾಯಧನ ಘೋಷಣೆ ಮಾಡುವ ಜೊತೆಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಅಧೀನದಲ್ಲಿರುವ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಬೆಂಗಳೂರು ಇದರ ವತಿಯಿಂದ ದೊರಕುವ ಸ್ವಾವಲಂಬನ ಯೋಜನೆ, ಇ.ಎಸ್.ಐ., ಪಿ.ಎಫ಼್. ಸೌಲಭ್ಯ ಒದಗಿಸುವಂತೆ ಮನವಿ ಮಾಡಿದ್ದಾರೆ.
ಪಾರ್ಲರ್ ನವೀಕರಣ, ಉಪಕರಣ ಖರೀದಿಗೆ ರಾಷ್ಟ್ರೀಕೃತ ಅಥವಾ ಸಹಕಾರಿ ಬ್ಯಾಂಕ್ಗಳಲ್ಲಿ ಶೂನ್ಯ ಅಥವಾ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸುವುದು, ವಸತಿ ಯೋಜನೆಗೆ ವಿಶೇಷ ಅನುದಾನ ಮೀಸಲಿಡಬೇಕು, ನಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ವಿಶೇಷ ವಿದ್ಯಾರ್ಥಿ ವೇತನ ಘೋಷಿಸಬೇಕು ಮತ್ತು ಸ್ವೋದ್ಯೋಗಕ್ಕಾಗಿ ಸಬ್ಸಿಡಿ ಆಧಾರದಲ್ಲಿ ಸಾಲ ಸೌಲಭ್ಯ ಒದಗಿಸಬೇಕು ಎಂಬ ಬೇಡಿಕೆ ಸಲ್ಲಿಸಿದ್ದಾರೆ.
ಇದನ್ನೂ ಓದಿ :
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…