Featured

ಉಡುಪಿ:ಭಯೋತ್ಪಾದಕರಿಗೆ ಬೆಂಗಾವಲಾಗಿ ನಿಂತ ರಮೇಶ್ ಕಾಂಚನ್ ಗೆ ಬಿಜೆಪಿ ಪಕ್ಷವನ್ನು ಟೀಕಿಸುವ ನೈತಿಕತೆಯೇ ಇಲ್ಲ : ಅಭಿರಾಜ್ ಸುವರ್ಣ – vishwanews24

ಉಡುಪಿ:ಭಯೋತ್ಪಾದಕರಿಗೆ ಬೆಂಗಾವಲಾಗಿ ನಿಂತ ರಮೇಶ್ ಕಾಂಚನ್ ಗೆ ಬಿಜೆಪಿ ಪಕ್ಷವನ್ನು ಟೀಕಿಸುವ ನೈತಿಕತೆಯೇ ಇಲ್ಲ : ಅಭಿರಾಜ್ ಸುವರ್ಣ

ಉಡುಪಿ: ಅಲ್ಪಸಂಖ್ಯಾತರ ವೋಟ್ ಬ್ಯಾಂಕಿಗಾಗಿ ಭಯೋತ್ಪಾದಕರಿಗೂ ಬೆಂಗಾವಲಾಗಿ ನಿಲ್ಲುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಗೆ ದೇಶ ರಕ್ಷಣೆಯ ವಿಚಾರದಲ್ಲಿ ಬಿಜೆಪಿ ಪಕ್ಷದ ಮುಖಂಡರನ್ನು ಟೀಕಿಸುವ ನೈತಿಕತೆಯೇ ಇಲ್ಲ ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ ಹೇಳಿದ್ದಾರೆ.

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿರುವ ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಸದ್ಯದಲ್ಲೇ ಸತ್ಯಾಸತ್ಯತೆ ತಿಳಿಯಲಿದೆ.

ಕಾಂಗ್ರೆಸ್ ಪಕ್ಷದ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಜನತೆಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ವಿಫಲರಾಗಿರುವ ರಮೇಶ್ ಕಾಂಚನ್ ಅವರು ಗೃಹ ಲಕ್ಷ್ಮೀ ಯೋಜನೆಯ ಹಣ ಪಾವತಿ ಬಗ್ಗೆ ರಾಜ್ಯದ ಜನತೆಗೆ ಸದನದಲ್ಲಿ ತಪ್ಪು ಮಾಹಿತಿ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ದಿವ್ಯ ಮೌನ ವಹಿಸಿ, ಇದೀಗ ಬಿಜೆಪಿ ನಾಯಕರನ್ನು ಟೀಕಿಸಲು ಮುಂದಾಗಿರುವುದು ಹಾಸ್ಯಾಸ್ಪದವಾಗಿದೆ. ಬಿಜೆಪಿಗೆ ದೇಶ ಭಕ್ತಿ, ದೇಶದ ಭದ್ರತೆಯ ಬಗ್ಗೆ ಪೊಳ್ಳು ಉಪದೇಶ ಮಾಡುವ ಅರ್ಹತೆ ರಮೇಶ್ ಕಾಂಚನ್ ಅವರಿಗಿಲ್ಲ. ರಮೇಶ್ ಕಾಂಚನ್ ರಂತಹ ಕಾಂಗ್ರೆಸ್ ಮುಖಂಡರ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಉಡುಪಿಯ ಜನತೆ ರೋಸಿ ಹೋಗಿದ್ದಾರೆ ಎಂದು ಅಭಿರಾಜ್ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

8 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

11 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

11 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

11 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

11 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

12 hours ago