Featured

ಉಡುಪಿ:ಮಳೆ ಹಾನಿ ಕಾಮಗಾರಿಗಳಿಗೆ ₹50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ – vishwanews24

ಉಡುಪಿ:ಮಳೆ ಹಾನಿ ಕಾಮಗಾರಿಗಳಿಗೆ ₹50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯನ್ನು ಸರಿಪಡಿಸಲು 50 ಕೋಟಿ ರೂಪಾಯಿಗಳ ವಿಶೇಷ ಅನುದಾನ ನೀಡುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಅತಿಯಾದ ಮತ್ತು ಅಕಾಲಿಕ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಅಪಾರ ಹಾನಿ ಸಂಭವಿಸಿದೆ. ಮೇ ತಿಂಗಳೊಂದರಲ್ಲೇ ಉಡುಪಿಯಲ್ಲಿ ಸರಾಸರಿ 166 ಮಿ.ಮೀ ನಷ್ಟು ಆಗಬೇಕಿದ್ದ ಮಳೆ, 837 ಮಿ.ಮೀ ಮಳೆಯಾಗಿದೆ. ಈ ಮೂಲಕ ಶೇ. 409ರಷ್ಟು ಮಳೆ ಹೆಚ್ಚಳವಾಗಿದೆ. ಜೂನ್ ತಿಂಗಳಿನಲ್ಲಿಯೂ ದಾಖಲೆ ಪ್ರಮಾಣದ ಮಳೆಯಾಗಿದ್ದು, ಇದು ದೇಶದಲ್ಲೇ ಅತಿ ಹೆಚ್ಚು ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕ್ಷೇತ್ರದ ಹಲವು ಭಾಗಗಳಲ್ಲಿ ವ್ಯಾಪಕ ಪ್ರವಾಹ ಉಂಟಾಗಿದ್ದು, ತುರ್ತು ಪರಿಹಾರ ಮತ್ತು ಪುನರ್ವಸತಿ ಕ್ರಮಗಳು ಅಗತ್ಯವಾಗಿದೆ. ಕಡಲತೀರದ ಹಲವು ಪ್ರದೇಶಗಳಲ್ಲಿ ಕಡಲ ಕೊರೆತ ಕಂಡುಬಂದಿದೆ. ಬಿರುಗಾಳಿ ಮತ್ತು ಭಾರೀ ಮಳೆಯಿಂದಾಗಿ ನೂರಾರು ಮರಗಳು ಧರೆಗುರುಳಿವೆ, ವಿದ್ಯುತ್ ಕಂಬಗಳು, ಮನೆಗಳು, ರಸ್ತೆಗಳು, ಚರಂಡಿಗಳು, ಶಾಲಾ ಕಟ್ಟಡಗಳು, ಸೇತುವೆಗಳು ಮತ್ತು ಸಣ್ಣ ಸೇತುವೆಗಳಿಗೆ ಹಾನಿಯಾಗಿದೆ.

ಕಳೆದ ಎರಡು ವರ್ಷಗಳಿಂದ ಪ್ರಕೃತಿ ವಿಕೋಪ ಪರಿಹಾರ ಯೋಜನೆಯಡಿ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಇದರಿಂದ ಗ್ರಾಮೀಣ ರಸ್ತೆಗಳ ನಿರ್ವಹಣೆ ಕಳಪೆಯಾಗಿದ್ದು, ಸಾರಿಗೆ ಸವಾಲುಗಳು ಉಲ್ಬಣಿಸಿವೆ. ಸಾರ್ವಜನಿಕ ಮೂಲಸೌಕರ್ಯಗಳನ್ನು ರಕ್ಷಿಸಲು ಮತ್ತು ದುರಸ್ತಿಪಡಿಸಲು ತುರ್ತು ಅಗತ್ಯವಿದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದರು. ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ನೈಸರ್ಗಿಕ ವಿಕೋಪ ಪರಿಹಾರದಡಿ 50 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಅನುಮೋದಿಸುವಂತೆ ಸಿಎಂಗೆ ಮನವಿ ಮಾಡಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago