ಉಡುಪಿ:ಮೀನುಗಾರಿಕಾ ಬೋಟ್ಗಳು ಬಳಸುವ ಡೀಸೆಲ್ ಮೇಲೆ ಕೇಂದ್ರ ಸರಕಾರ ವಿಧಿಸುತ್ತಿರುವ ರೋಡ್ ಸೆಸ್ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್, ಕೇಂದ್ರ ಮೀನುಗಾರಿಕೆ ಸಚಿವರಾದ ಶ್ರೀ ಗಿರಿರಾಜ ಸಿಂಗ್, ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ರಾಜ್ಯ ಮೀನುಗಾರಿಕೆ ಸಚಿವರಾದ ಶ್ರೀ ಅಂಗಾರ ಹಾಗೂ ಕರಾವಳಿಯ ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಅನಂತ್ ಕುಮಾರ್ ಹೆಗ್ಡೆ ಹಾಗೂ ಬಿ. ವೈ. ರಾಘವೇಂದ್ರ ರವರಿಗೆ ಮನವಿ ಸಲ್ಲಿಸಿರುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಮೀನುಗಾರಿಕೆಯು ವಿದೇಶಿ ವಿನಿಮಯ, ಉದ್ಯೋಗಾವಕಾಶ ಹಾಗೂ ಪೌಷ್ಠಿಕಾಂಶವುಳ್ಳ ಆಹಾರದ ಪೂರೈಕೆಯ ಮೂಲಕ ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸಿ ದೇಶದ ಜಿಡಿಪಿಗೆ ೫% ಕೊಡುಗೆ ನೀಡುತ್ತಿದೆ.
ಯಾಂತ್ರೀಕೃತ ಮೀನುಗಾರಿಕಾ ಬೋಟ್ಗಳು ಇಂಧನವಾಗಿ ಡೀಸೆಲನ್ನು ಬಳಸುತ್ತಿದ್ದು, ಈ ಡೀಸೆಲ್ ಮೇಲೆ ಸರಕಾರ ರೋಡ್ ಸೆಸ್ ವಿಧಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಡೀಸೆಲ್ ಬೆಲೆಯಲ್ಲಿ ಗಣನೀಯವಾಗಿ ಏರಿಕೆಗೊಂಡಿರುವ ಹಿನ್ನಲೆಯಲ್ಲಿ ಮೀನುಗಾರರು ಆರ್ಥಿಕವಾಗಿ ತೀರ ಸಂಕಷ್ಟಕ್ಕೀಡಾಗಿದ್ದಾರೆ.
ಈಗಾಗಲೇ ಕೇಂದ್ರ ಸರಕಾರ ಮೀನುಗಾರರ ಬಹುದಶಕಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಮೀನುಗಾರಿಕೆ ಇಲಾಖೆಯನ್ನು ರೂಪಿಸಿ ಆತ್ಮನಿರ್ಭರ ಯೋಜನೆಯ ಮೂಲಕ ಮೀನುಗಾರಿಕೆ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಮುಂಬರುವ ಕೇಂದ್ರ ಬಜೆಟ್ನಲ್ಲಿ ಈ ಬಗ್ಗೆ ಸರಕಾರ ಸೂಕ್ತ ನಿರ್ಣಯ ತಳೆದು ಮೀನುಗಾರಿಕೆಗೆ ಬಳಸುವ ಡೀಸೆಲ್ ಮೇಲಿನ ರೋಡ್ ಸೆಸ್ ವಿನಾಯಿತಿ ನೀಡಲು ಕ್ರಮಕೈಗೊಳ್ಳುವ ಮೂಲಕ ಮೀನುಗಾರಿಕೆಗೆ ಇನ್ನಷ್ಟು ಪ್ರೋತ್ಸಾಹ ನೀಡುವಂತಾಗಲಿ ಎಂದುಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…