ಉಡುಪಿ:ಮೀನುಗಾರಿಕಾ ಬೋಟ್ಗಳು ಬಳಸುವ ಡೀಸೆಲ್ ಮೇಲೆ ಕೇಂದ್ರ ಸರಕಾರ ವಿಧಿಸುತ್ತಿರುವ ರೋಡ್ ಸೆಸ್ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್, ಕೇಂದ್ರ ಮೀನುಗಾರಿಕೆ ಸಚಿವರಾದ ಶ್ರೀ ಗಿರಿರಾಜ ಸಿಂಗ್, ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ರಾಜ್ಯ ಮೀನುಗಾರಿಕೆ ಸಚಿವರಾದ ಶ್ರೀ ಅಂಗಾರ ಹಾಗೂ ಕರಾವಳಿಯ ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಅನಂತ್ ಕುಮಾರ್ ಹೆಗ್ಡೆ ಹಾಗೂ ಬಿ. ವೈ. ರಾಘವೇಂದ್ರ ರವರಿಗೆ ಮನವಿ ಸಲ್ಲಿಸಿರುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಮೀನುಗಾರಿಕೆಯು ವಿದೇಶಿ ವಿನಿಮಯ, ಉದ್ಯೋಗಾವಕಾಶ ಹಾಗೂ ಪೌಷ್ಠಿಕಾಂಶವುಳ್ಳ ಆಹಾರದ ಪೂರೈಕೆಯ ಮೂಲಕ ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸಿ ದೇಶದ ಜಿಡಿಪಿಗೆ ೫% ಕೊಡುಗೆ ನೀಡುತ್ತಿದೆ.
ಯಾಂತ್ರೀಕೃತ ಮೀನುಗಾರಿಕಾ ಬೋಟ್ಗಳು ಇಂಧನವಾಗಿ ಡೀಸೆಲನ್ನು ಬಳಸುತ್ತಿದ್ದು, ಈ ಡೀಸೆಲ್ ಮೇಲೆ ಸರಕಾರ ರೋಡ್ ಸೆಸ್ ವಿಧಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಡೀಸೆಲ್ ಬೆಲೆಯಲ್ಲಿ ಗಣನೀಯವಾಗಿ ಏರಿಕೆಗೊಂಡಿರುವ ಹಿನ್ನಲೆಯಲ್ಲಿ ಮೀನುಗಾರರು ಆರ್ಥಿಕವಾಗಿ ತೀರ ಸಂಕಷ್ಟಕ್ಕೀಡಾಗಿದ್ದಾರೆ.
ಈಗಾಗಲೇ ಕೇಂದ್ರ ಸರಕಾರ ಮೀನುಗಾರರ ಬಹುದಶಕಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಮೀನುಗಾರಿಕೆ ಇಲಾಖೆಯನ್ನು ರೂಪಿಸಿ ಆತ್ಮನಿರ್ಭರ ಯೋಜನೆಯ ಮೂಲಕ ಮೀನುಗಾರಿಕೆ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಮುಂಬರುವ ಕೇಂದ್ರ ಬಜೆಟ್ನಲ್ಲಿ ಈ ಬಗ್ಗೆ ಸರಕಾರ ಸೂಕ್ತ ನಿರ್ಣಯ ತಳೆದು ಮೀನುಗಾರಿಕೆಗೆ ಬಳಸುವ ಡೀಸೆಲ್ ಮೇಲಿನ ರೋಡ್ ಸೆಸ್ ವಿನಾಯಿತಿ ನೀಡಲು ಕ್ರಮಕೈಗೊಳ್ಳುವ ಮೂಲಕ ಮೀನುಗಾರಿಕೆಗೆ ಇನ್ನಷ್ಟು ಪ್ರೋತ್ಸಾಹ ನೀಡುವಂತಾಗಲಿ ಎಂದುಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]