Featured

ಉಡುಪಿ:ಯಕ್ಷಗಾನ ಸಮ್ಮೇಳನಕ್ಕೆ ರೋಹಿತ್ ಚಕ್ರತೀರ್ಥಗೆ ಭಾಷಣ ಮಾಡಲು ಕರೆದಿರುವುದು ಕಲೆಗೆ ಮಾಡಿದ ಬಹುದೊಡ್ಡ ಅವಮಾನ: ಕರಾವಳಿ ಗಣ್ಯರ ಅಸಮಾಧಾನ – Vishwanews24

ಉಡುಪಿ:ಯಕ್ಷಗಾನ ಸಮ್ಮೇಳನಕ್ಕೆ ಗೆ ದಿಕ್ಸೂಚಿ ಭಾಷಣ ಮಾಡಲು ಕರೆದಿರುವುದು ಕಲೆಗೆ ಮಾಡಿದ ಬಹುದೊಡ್ಡ ಅವಮಾನ: ಕರಾವಳಿ ಗಣ್ಯರ ಅಸಮಾಧಾನ

ಉಡುಪಿ: ಕಳೆದ ವರ್ಷ ಪಠ್ಯಪುಸ್ತಕಗಳ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನಾಗಿ ನೇಮಕಗೊಂಡು ಭಾರೀ ವಿವಾದಕ್ಕೆ ಕಾರಣರಾದ ರೋಹಿತ್ ಚಕ್ರತೀರ್ಥ ಅವರನ್ನು ಇದೀಗ ಉಡುಪಿಯಲ್ಲಿ ಫೆ.11 ಹಾಗೂ 12ರಂದು ನಡೆಯುತ್ತಿರುವ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣ ಮಾಡಲು ಕರೆದಿರುವುದು ಆ ಕಲೆಗೆ ಮಾಡಿದ ಬಹುದೊಡ್ಡ ಅವಮಾನ ಎಂದು ಅಸಮಾಧಾನ ವ್ಯಕ್ತವಾಗಿದೆ.

ಈ ಸಂಬಂಧ ಪತ್ರಿಕಾ ಪ್ರಕಟನೆ ಹೊರಡಿಸಿರುವ ರಂಗಕರ್ಮಿ ಉದ್ಯಾವರ ನಾಗೇಶ ಕುಮಾರ್, ಕುಂಬ್ಳೆ ಸದಾಶಿವ ಮಾಸ್ತರ್, ಶ್ರೀನಿವಾಸ ಕಾರ್ಕಳ, ಹಾಗೂ ಹಿರಿಯ ಸಾಹಿತಿ ಪುರುಷೋತ್ತಮ ಬಿಳಿಮಲೆ, ಸಂಘಟಕರು ಈ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ.

”ಕರಾವಳಿಯ ಯಕ್ಷಗಾನವು ಇವತ್ತು ವಿಶ್ವ ಪ್ರಸಿದ್ಧ ಕಲೆಯಾಗಿ ಬೆಳೆದಿದೆ. ಕಳೆದ ಆರು ಶತಮಾನಗಳಿಂದ ಈ ಕಲೆಯು ಬೆಳೆದು ಬಂದ ರೀತಿಯು ಅಚ್ಚರಿ ಹುಟ್ಟಿಸುತ್ತದೆ. ಆ ಕಲೆಯನ್ನು ಅತ್ಯದ್ಭುತವಾಗಿ ಸಂಘಟಿಸುವ ಮಹನೀಯರಿದ್ದಾರೆ, ಯಕ್ಷಗಾನ ಪ್ರಸಂಗಗಳನ್ನು ಬರೆದು ಪ್ರಸಿದ್ಧರಾದವರಿದ್ದಾರೆ. ಯಕ್ಷಗಾನ ಕಲಾವಿದರು ಪುರಾಣ, ಇತಿಹಾಸ ಮತ್ತು ವರ್ತಮಾನಗಳನ್ನು ಬೆಸೆದು ರಂಗಭೂಮಿಯ ಮೇಲೆ ವಿಸ್ಮಯಗಳನ್ನೇ ಸೃಷ್ಟಿಸಿದ್ದಾರೆ. ಯಕ್ಷಗಾನ ವಿಮರ್ಶೆಯೂ ಸರ್ವಾಂಗೀಣವಾಗಿ ಬೆಳೆದಿದೆ. ಈ ಕಲೆಯಲ್ಲಿನ ಭಾಗವತರು, ಚಂಡೆ ವಾದಕರು, ಮದ್ದಲೆ ವಾದಕರು ತಮ್ಮದೇ ರೀತಿಯ ಶೈಲಿಗಳನ್ನೇ ನಿರ್ಮಿಸಿ ಕರ್ನಾಟಕ ಸಂಸ್ಕೃತಿಯ ಘನತೆಯನ್ನು ವಿಸ್ತರಿಸಿದ್ದಾರೆ”.

”ಇಂಥ ಮಹಾನ್ ಕಲೆಯೊಂದರ ರಾಜ್ಯ ಸಮ್ಮೇಳನ ನಡೆಯುವುದು ಅತ್ಯಂತ ಅವಶ‍್ಯಕವಾಗಿತ್ತು ಮತ್ತು ಅದೀಗ ನಡೆಯುತ್ತಿದೆ. ಹಿರಿಯ ಕಲಾವಿದರಾದ ಪ್ರಭಾಕರ ಜೋಷಿಯವರು ಅದರ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಇದು ಯಕ್ಷಗಾನ ಪ್ರಿಯರಿಗೆ ಸಂತೋಷ ಕೊಡುವ ವಿಷಯವೇ ಹೌದು”.

”ಆದರೆ, ಸಮ್ಮೇಳನದ ದಿಕ್ಷೂಚಿ ಭಾಷಣಕ್ಕೆ ಸಂಘಟಕ, ಕಲಾವಿದ, ಪ್ರಸಂಗ ಕರ್ತ ಅಥವಾ ವಿಮರ್ಶಕನೂ ಅಲ್ಲದ ರೋಹಿತ್ ಚಕ್ರತೀರ್ಥರನ್ನು ಆರಿಸಲಾಗಿದೆ. ಯಕ್ಷಗಾನ ಲೋಕದಲ್ಲಿ ಚಕ್ರತೀರ್ಥರಿಗಿಂತ ಬಹಳ ಸಾಧನೆ ಮಾಡಿರುವ ಡಾ. ವಿವೇಕ ರೈ, ಡಾ. ಚಿನ್ನಪ್ಪ ಗೌಡ, ಡಾ. ಚಂದ್ರಶೇಖರ ದಾಮ್ಲೆ, ಡಾ. ರಾಘವ ನಂಬಿಯಾರ್, ಡಾ. ಪಾದೆಕಲ್ಲು ವಿಷ್ಣು ಭಟ್, ಡಾ. ವಸಂತ ಭಾರದ್ವಾಜ್. ಡಾ. ನಾಗವೇಣಿ ಮಂಚಿ, ರಾಧಾಕೃಷ್ಣ ಕಲ್ಚಾರ್, ಕಲಾವಿದ ಜಬ್ಬಾರ್ ಸಮೋ, ಡಾ. ಪ್ರಥ್ವಿರಾಜ ಕವತ್ತಾರ್, ಡಾ. ಆನಂದ ರಾಮ ಉಪಾಧ‍್ಯ, ಡಾ. ಜಿ ಎಸ್ ಭಟ್, ಗೋಪಾಲಕೃಷ್ಣ ಭಾಗವತ, ಕೆರೆಮನೆ ಶಿವಾನಂದ ಹೆಗಡೆ, ವಿದ್ವಾನ್ ರಂಗಾ ಭಟ್ಟ ಮೊದಲಾದ ಅಸಂಖ್ಯ ಮಹನೀಯರಿದ್ದಾರೆ.”

”ಈ ಮಹನೀಯರು ಯಕ್ಷಗಾನದ ಯಾವುದೇ ಕ್ಷೇತ್ರದ ಮೇಲೆ ಅಧಿಕೃತವಾಗಿ ಮಾತಾಡಬಲ್ಲ ಧೀಮಂತರು. ಇಂಥವರನ್ನು ಬದಿಗೊತ್ತಿ, ದಿಕ್ಸೂಚಿ ಭಾಷಣಕ್ಕೆ ರೋಹಿತ್ ಚಕ್ರತೀರ್ಥರಂಥವರನ್ನು ಕರೆದಿರುವುದು ಆ ಕಲೆಗೆ ಮಾಡಿದ ಬಹುದೊಡ್ಡ ಅವಮಾನ ಎಂದು ನಾವು ಭಾವಿಸುತ್ತೇವೆ. ಸಂಘಟಕರು ಈ ಕಡೆ ಗಮನ ಹರಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago